ನಟ ರಮೇಶ್ ಅರವಿಂದ ನಿರೂಪಣೆಯಲ್ಲಿ "ದಸರಾ ಕ್ವಿಜ್"
ಮೈಸೂರು, ಸೆಪ್ಟೆಂಬರ್ 26: ಈ ಬಾರಿಯ ಮೈಸೂರು ದಸರಾದಲ್ಲಿ ದಸರಾ ಕ್ವಿಜ್ ಕಾರ್ಯಕ್ರಮ ವಿಶೇಷ ಆಕರ್ಷಣೆ ಆಗಲಿದೆ. ಕಾರಣವೇನು ಗೊತ್ತೇ? ಇದೇ ಮೊದಲ ಬಾರಿಗೆ ಚಿತ್ರ ನಟ ರಮೇಶ್ ಅರವಿಂದ್ ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.
ಮೈಸೂರು ದಸರಾ ಮಹೋತ್ಸವ ಹಾಗೂ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಇದೇ ಮೊದಲ ಬಾರಿಗೆ ಸೆ.27ರಂದು ದಸರಾ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿದ್ದು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ದಸರಾ ಕುಸ್ತಿ, ದಸರಾ ಕ್ರೀಡೆಗಳ ಮಾದರಿಯಲ್ಲಿ ದಸರಾ ಕ್ವಿಜ್ ಅನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನೂತನ ಸಭಾ ಭವನದಲ್ಲಿ ಆಯೋಜಿಸಲಾಗಿದೆ.

ಮೈಸೂರು ದಸರಾ, ವಿಶ್ವ ಪ್ರವಾಸೋದ್ಯಮ ದಿನಾಚರಣೆ ಮತ್ತು ಕರ್ನಾಟಕ ರಾಜ್ಯದ ಭವ್ಯ ಪರಂಪರೆ, ಸಂಸ್ಕೃತಿ ಮತ್ತು ಇತಿಹಾಸಕ್ಕೆ ಸಂಬಂಧಿಸಿದಂತೆ ಪ್ರಶ್ನಾವಳಿ ಸಿದ್ಧಪಡಿಸಲಾಗಿದೆ. ಅಂದಾಜು 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ. ಬೆಳಗ್ಗೆ 9.45 ರಿಂದ ಮಧ್ಯಾಹ್ನ 3ರವರೆಗೆ ಕಾರ್ಯಕ್ರಮ ನಡೆಯಲಿದೆ. 8,9,10ನೇ ತರಗತಿ ಹಾಗೂ ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡು ಭಾಗವಹಿಸಬಹುದು. ನೋಂದಣಿ ಅರ್ಜಿಗಳನ್ನು ಹಾಗೂ ಹೆಚ್ಚಿನ ಮಾಹಿತಿಯನ್ನು ಸಂಬಂಧಪಟ್ಟ ಇಲಾಖೆಯಲ್ಲಿ ಪಡೆದುಕೊಳ್ಳಬಹುದು ಎಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಆಸಕ್ತ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಪ್ರೇಕ್ಷಕರಾಗಿ ದಸರಾ ಕ್ವಿಜ್ನಲ್ಲಿ ಭಾಗವಹಿಸಬಹುದು.
ವಿದ್ಯಾರ್ಥಿಗಳಿಗೆ ಅನುಕೂಲ: ಈಗ ವಿದ್ಯಾರ್ಥಿಗಳಿಗೆ ಅರ್ಧ ವಾರ್ಷಿಕ ಪರೀಕ್ಷೆ ನಡೆಯುತ್ತಿರುವುದರಿಂದ ಕ್ವಿಜ್ ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲು ಶಿಕ್ಷಣ ಇಲಾಖೆಯೂ ಮುಂದಾಗಿದೆ. ಜಿಲ್ಲಾ ಶಿಕ್ಷಣಾಧಿಕಾರಿ ಪಾಂಡುರಂಗ ಅವರು,''ವಿದ್ಯಾರ್ಥಿಗಳಿಗೆ ದಸರಾ ಕ್ವಿಜ್ನಲ್ಲಿ ಭಾಗವಹಿಸಲು ಅವಕಾಶವಿದೆ. ಸದ್ಯ ನಡೆಯುತ್ತಿರುವುದು ಅರ್ಧ ವಾರ್ಷಿಕ ಪರೀಕ್ಷೆಯಾಗಿರುವುದರಿಂದ ಕ್ವಿಜ್ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ಮಾಡಿಕೊಡಲಾಗುವುದು' 'ಎಂದು ತಿಳಿಸಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications