ವಿಷ್ಣು ಸ್ಮಾರಕದ ನೀಲನಕ್ಷೆ ತಯಾರಿ: ಸದ್ಯದಲ್ಲೇ ಆರಂಭ ಕಾಮಗಾರಿ
ಮೈಸೂರು, ಜೂನ್ 29: ಬಹುನಿರೀಕ್ಷಿತ ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಸದ್ಯದಲ್ಲೇ ಚಾಲನೆ ದೊರಕಲಿದೆ.
ಮೈಸೂರು ತಾಲ್ಲೂಕಿನ ಮಾನಂದವಾಡಿ ರಸ್ತೆಯ ಉದ್ಬೂರು ಗೇಟ್ ಎದುರು ಆಲಾಳು ಗ್ರಾಮದ ಸರ್ವೆ ನಂಬರ್ 8ರಲ್ಲಿ 5 ಎಕರೆ ಭೂಮಿಯನ್ನು ಈ ಹಿಂದಿನ ಸಿಎಂ ಸಿದ್ದರಾಮಯ್ಯ ಮಂಜೂರು ಮಾಡಿದ್ದರು. ಸದರಿ ಭೂಮಿ ಮೈಸೂರು ಜಿಲ್ಲಾಡಳಿತ ವಾರ್ತಾ ಮತ್ತು ಪ್ರಸಾರ ಇಲಾಖೆಗೆ ಖಾತೆಯೂ ಆಗಿದೆ. ಈ ನಡುವೆ ಉದ್ಬೂರು ಮಹದೇವಮ್ಮ, ಸಣ್ಣಪ್ಪ ಹಾಗೂ ಇತರರು ಉಳುಮೆ ಭೂಮಿಯನ್ನು ಕೊಡುವುದಿಲ್ಲವೆಂದು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಅರ್ಜಿದಾರರ ಕೋರಿಕೆ ಮೇರೆಗೆ ತಡೆಯಾಜ್ಞೆ ನೀಡಿತ್ತು.
ತಹಶೀಲ್ದಾರ್ ರಮೇಶ್ ಬಾಬು ರಾಜ್ಯ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿ ಸರ್ಕಾರಿ ಭೂಮಿ ಎಂದು ಸಾಬೀತು ಮಾಡಿದ್ದರು. ಇದಾದ ಬಳಿಕ ಎದುರಾಳಿಗಳು ವಿಚಾರಣೆಗೆ ಗೈರಾಗಿದ್ದರಿಂದ ನ್ಯಾಯಾಲಯವು ತಡೆಯಾಜ್ಞೆ ತೆರವು ಮಾಡಿ ಸ್ಮಾರಕ ನಿರ್ಮಾಣ ಮಾಡಬಹುದು ಎಂದು ಆದೇಶಿಸಿದೆ.

ಸದ್ಯ 5 ಎಕರೆ ಭೂಮಿಯಲ್ಲಿ 11 ಕೋಟಿ ಅನುದಾನದಲ್ಲಿ ಡಾ.ವಿಷ್ಣುವರ್ಧನ್ ಪ್ರತಿಷ್ಠಾನ ಟ್ರಸ್ಟ್ ಸ್ಮಾರಕ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. ಡಾ.ವಿಷ್ಣುವರ್ಧನ್ ಅವರ ಅಳಿಯ, ಚಿತ್ರನಟ ಅನಿರುದ್ಧ ಪ್ರತಿಕ್ರಿಯಿಸಿ, ಆರ್ಕಿಟೆಕ್ಚರಲ್ ನಕ್ಷೆ ಶೇ 90ರಷ್ಟು ಆಗಿದೆ. ವಿನ್ಯಾಸ ಪೂರ್ಣಗೊಂಡ ನಂತರ ಹಾಗೂ ವಾರ್ತಾ ಮತ್ತು ಪ್ರಚಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಅವರು ದಿನಾಂಕ ನಿಗದಿಗೊಳಿಸಿದಾಗ ಸಭೆ ಕರೆದು ಚರ್ಚಿಸಿ, ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
-
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications