ವಿಷ್ಣು ಸ್ಮಾರಕದ ನೀಲನಕ್ಷೆ ತಯಾರಿ: ಸದ್ಯದಲ್ಲೇ ಆರಂಭ ಕಾಮಗಾರಿ
ಮೈಸೂರು, ಜೂನ್ 29: ಬಹುನಿರೀಕ್ಷಿತ ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಸದ್ಯದಲ್ಲೇ ಚಾಲನೆ ದೊರಕಲಿದೆ.
ಮೈಸೂರು ತಾಲ್ಲೂಕಿನ ಮಾನಂದವಾಡಿ ರಸ್ತೆಯ ಉದ್ಬೂರು ಗೇಟ್ ಎದುರು ಆಲಾಳು ಗ್ರಾಮದ ಸರ್ವೆ ನಂಬರ್ 8ರಲ್ಲಿ 5 ಎಕರೆ ಭೂಮಿಯನ್ನು ಈ ಹಿಂದಿನ ಸಿಎಂ ಸಿದ್ದರಾಮಯ್ಯ ಮಂಜೂರು ಮಾಡಿದ್ದರು. ಸದರಿ ಭೂಮಿ ಮೈಸೂರು ಜಿಲ್ಲಾಡಳಿತ ವಾರ್ತಾ ಮತ್ತು ಪ್ರಸಾರ ಇಲಾಖೆಗೆ ಖಾತೆಯೂ ಆಗಿದೆ. ಈ ನಡುವೆ ಉದ್ಬೂರು ಮಹದೇವಮ್ಮ, ಸಣ್ಣಪ್ಪ ಹಾಗೂ ಇತರರು ಉಳುಮೆ ಭೂಮಿಯನ್ನು ಕೊಡುವುದಿಲ್ಲವೆಂದು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಅರ್ಜಿದಾರರ ಕೋರಿಕೆ ಮೇರೆಗೆ ತಡೆಯಾಜ್ಞೆ ನೀಡಿತ್ತು.
ತಹಶೀಲ್ದಾರ್ ರಮೇಶ್ ಬಾಬು ರಾಜ್ಯ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿ ಸರ್ಕಾರಿ ಭೂಮಿ ಎಂದು ಸಾಬೀತು ಮಾಡಿದ್ದರು. ಇದಾದ ಬಳಿಕ ಎದುರಾಳಿಗಳು ವಿಚಾರಣೆಗೆ ಗೈರಾಗಿದ್ದರಿಂದ ನ್ಯಾಯಾಲಯವು ತಡೆಯಾಜ್ಞೆ ತೆರವು ಮಾಡಿ ಸ್ಮಾರಕ ನಿರ್ಮಾಣ ಮಾಡಬಹುದು ಎಂದು ಆದೇಶಿಸಿದೆ.

ಸದ್ಯ 5 ಎಕರೆ ಭೂಮಿಯಲ್ಲಿ 11 ಕೋಟಿ ಅನುದಾನದಲ್ಲಿ ಡಾ.ವಿಷ್ಣುವರ್ಧನ್ ಪ್ರತಿಷ್ಠಾನ ಟ್ರಸ್ಟ್ ಸ್ಮಾರಕ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. ಡಾ.ವಿಷ್ಣುವರ್ಧನ್ ಅವರ ಅಳಿಯ, ಚಿತ್ರನಟ ಅನಿರುದ್ಧ ಪ್ರತಿಕ್ರಿಯಿಸಿ, ಆರ್ಕಿಟೆಕ್ಚರಲ್ ನಕ್ಷೆ ಶೇ 90ರಷ್ಟು ಆಗಿದೆ. ವಿನ್ಯಾಸ ಪೂರ್ಣಗೊಂಡ ನಂತರ ಹಾಗೂ ವಾರ್ತಾ ಮತ್ತು ಪ್ರಚಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಅವರು ದಿನಾಂಕ ನಿಗದಿಗೊಳಿಸಿದಾಗ ಸಭೆ ಕರೆದು ಚರ್ಚಿಸಿ, ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
-
KD Song Controversy: ಸೆರಗ ಸರ್ಸೆ ಹಾಡು ವಿವಾದ: ಪ್ರೇಮ್ ವಿರುದ್ಧ ದೂರು, ನೋಟಿಸ್ ಬೆನ್ನಲ್ಲೇ ಹಿಂದಿ ಹಾಡು ಡಿಲೀಟ್ -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಪ್ರೇಮ್ ವಿವಾದದ ಬೆನ್ನಲ್ಲೇ ಫಿಲ್ಮ್ ಚೇಂಬರ್ಗೆ ಮಹಿಳಾ ಆಯೋಗ ಪತ್ರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
Bengaluru: ಬೆಂಗಳೂರಲ್ಲಿ ಟೀ ಶಾಪ್ನಲ್ಲಿ 10 ಭಾಷೆ ಮಾತನಾಡುವವರು ಸಿಗ್ತಾರೆ: ನಾರ್ಥಿ ಯುವತಿ ವೈರಲ್ ಪೋಸ್ಟ್ -
ನೈರುತ್ಯ ರೈಲ್ವೆ: 194 ಗೂಡ್ಸ್ ರೈಲು ಮ್ಯಾನೇಜರ್ ಹುದ್ದೆ; ಕನ್ನಡಿಗರಿಗೆ ಅನ್ಯಾಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು












Click it and Unblock the Notifications