ಯುವ ದಸರಾದಲ್ಲಿ ಯಶ್ ಪಂಚಿಂಗ್ ಡೈಲಾಗ್'ಗೆ ಪಡ್ಡೆಗಳು ಫುಲ್ ಫಿದಾ
Recommended Video

ಮೈಸೂರು, ಅಕ್ಟೋಬರ್. 18: ಚಂದನವನದ ತಾರೆಯರ ಸೊಬಗಿನ ನೃತ್ಯ, ನೇಹ ಕಕ್ಕರ್ ಇಂಪಾದ ಗಾಯನಕ್ಕೆ ಯುವ ದಸರೆಯ ಸಂಭ್ರಮ ಮೇರೆ ಮೀರಿತ್ತು. ರಾಕಿಂಗ್ ಸ್ಟಾರ್ ಯಶ್ ಯುವ ದಸರೆಗೆ ರಂಗು ತುಂಬಿದರು.
ಮಹಾರಾಜ ಕಾಲೇಜಿನ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಯುವಕ-ಯುವತಿಯರು ಯುವ ದಸರೆಯ ಕೊನೇ ದಿನದಂದು ಬುಧವಾರ (ಅ.17) ನರ್ತಿಸಿದ ಕಲಾವಿದರನ್ನು ಮನಸಾರೆ ಪ್ರೋತ್ಸಾಹಿಸಿದರು.
ರಾಕಿಂಗ್ ಸ್ಟಾರ್ ಯಶ್ ಶೆರ್ವಾನಿ ತೊಟ್ಟು ಕಂಗೊಳಿಸುತ್ತಿದ್ದರು. ಅಣ್ತಮ್ಮಾ...ಎನ್ನುತ್ತ ವೇದಿಕೆ ಏರುತ್ತಿದ್ದಂತೆ ಇಡೀ ಸಭಾಂಗಣದಲ್ಲಿ ಒಂದು ರೀತಿಯ ಸಂಚಾರ ವ್ಯಕ್ತವಾಯಿತು. ಸಂಭ್ರಮದ ಜೈಕಾರ ಮಾರ್ದನಿಸಿತು. ಮೆಚ್ಚಿನ ನಟನನ್ನು ಕಂಡ ಯುವ ಸಮೂಹ ಹರ್ಷ ವ್ಯಕ್ತಪಡಿಸಿತು.
ಕುಕ್ಕರಹಳ್ಳಿ ಕೆರೆಯಲ್ಲಿ ಓಡಾಡುತ್ತ, ಪಡುವಾರಹಳ್ಳಿಯಲ್ಲಿ ಬೆಳೆದ ನಾನು ನಿಮ್ಮ ಹುಡ್ಗ. ಮೈಸೂರಿನವನು ಎಂದು ಯಶ್ ಹೇಳುತ್ತಿದ್ದಂತೆಯೇ ಮತ್ತಷ್ಟು ಸಂಭ್ರಮ ಮನೆ ಮಾಡಿತು. ರಾಜಾಹುಲಿ, ರಾಮಾಚಾರಿ ಸಿನಿಮಾಗಳ ಕೆಲವು ಡೈಲಾಗ್ ಹೇಳುವುದರ ಜೊತೆಗೆ ಹಾಡೊಂದನ್ನು ಹಾಡಿ ನೆರೆದಿದ್ದ ಜನಸ್ತೋಮ ಸಂಭ್ರಮಿಸುವಂತೆ ಮಾಡಿದರು. ಮುಂದೆ ಓದಿ...

ಸಂತೋಷ ಹಂಚಿಕೊಂಡ ಯಶ್
"ನಾನು ಹುಡುಗನಾಗಿದ್ದಾಗ ಇದೇ ಯುವ ದಸರಾದ ಪಾಸ್ ಬೇಕು ಎಂದು ಕೇಳಿಕೊಳ್ಳುತ್ತಿದ್ದೆ. ಆದರೆ ಇಂದು ಇದೇ ವೇದಿಕೆಯ ಮೇಲೆ ನಿಂತಿದ್ದೇನೆ. ಇದಕ್ಕೆಲ್ಲ ನಿಮ್ಮ ಪ್ರೀತಿ, ಪ್ರೋತ್ಸಾಹವೇ ಕಾರಣ. ನನಗೆ ಮೈಸೂರಿಗೆ ಬರುವುದೆಂದರೆ ತುಂಬಾ ಖುಷಿ. ಸಾಕಷ್ಟು ಊರು, ದೇಶ ನೋಡಿದ್ದೇನೆ, ಆದರೆ ಮೈಸೂರಂತ ಊರನ್ನು ಎಲ್ಲಿಯೂ ನೋಡಿಲ್ಲ. ನನಗೆ ಮೈಸೂರಿಗೆ ಬಂದ್ರೆ ನನ್ನ ಹಳೆಯ ನೆನಪುಗಳು ಕಣ್ಣ ಮುಂದೆ ಬರುತ್ತವೆ" ಎಂದು ಯಶ್ ಸಂತೋಷ ಹಂಚಿಕೊಂಡರು.

ನೇಹ ಕಕ್ಕರ್ ಗಾಯನ
ಖ್ಯಾತ ಹಿನ್ನೆಲೆ ಗಾಯಕಿ ನೇಹ ಕಕ್ಕರ್ ಗಾಯನದ ಮೂಲಕ ಯುವ ದಸರೆಗೆ ಅದ್ಧೂರಿಯಾಗಿ ತೆರೆ ಎಳೆಯಲಾಯಿತು. ಮಿಲೇ ಹೋ ತುಮ್ ಹಮ್ ಸೇ, ಬಡೇ ನಶೀಬೋ ಸೇ.. ಸೇರಿದಂತೆ ಹಿಂದಿ ಹಾಡುಗಳಿಗೆ ಶ್ರೋತೃಗಳು ಕಿವಿಯಾದರು.

ರಚಿತಾ ನೃತ್ಯ
ಗುಳಿಕೆನ್ನೆಯ ಚೆಲುವೆ ರಚಿತಾ ರಾಮ್ ನರ್ತಿಸಿ ನೆರೆದಿದ್ದ ಯುವಕರನ್ನು ಸಂಭ್ರಮದಲ್ಲಿ ತೇಲುವಂತೆ ಮಾಡಿದರು. ನಟಿಯರಾದ ಮೇಘನಾ ಗಾಂವ್ಕರ್, ಅನುಪಮಾ ಗೌಡ, ಜಯಶ್ರೀ, ಕಿರುತೆರೆಯ ವೈಷ್ಣವಿ ಕನ್ನಡ ಹಾಡುಗಳಿಗೆ ನೃತ್ಯ ಮಾಡಿ ಪಡ್ಡೆ ಹುಡುಗರ ಮನಸ್ಸು ಗೆದ್ದರು. ನೃತ್ಯ ಸಂಯೋಜಕ ಎ.ಹರ್ಷ ಮತ್ತು ತಂಡದವರ ನೃತ್ಯ ಮನಸೂರೆಗೊಳಿಸಿತು.

ನಿಂತೇ ಕಾರ್ಯಕ್ರಮ ವೀಕ್ಷಿಸಿದರು
ಢಮರುಗ ಬಿಡ್ಸ್ ಸಂಗೀತಗಾರರು ಪಾಶ್ಚಿಮಾತ್ಯ ಸಂಗೀತಕ್ಕೆ ಭಾರತೀಯ ಸಂಗೀತದ ರಿದಂ ಸೇರಿಸಿ ಡ್ರಮ್, ತಮಟೆ, ನಗಾರಿಯ ಮೂಲಕ ಹೊಸ ನಾದವನ್ನು ಹೊಮ್ಮಿಸಿ ಚಪ್ಪಾಳೆ ಗಿಟ್ಟಿಸಿದರು. ಅನೀಶ್ ಮತ್ತು ಹರೀಶ್ ಹಾಸ್ಯ ಕಾರಂಜಿ ಚಿಮ್ಮಿಸಿದರು. ಅನುಪಮಾ ವಿಶಿಷ್ಟವಾಗಿ ನಿರೂಪಿಸಿದರು.
ನಟ ಯಶ್ ಹಾಗೂ ಗಾಯಕಿ ನೇಹ ಕಕ್ಕರ್ ಅವರ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರಿಂದ ನೂಕು ನುಗ್ಗಲು ಉಂಟಾಗಿ ಜನ ತೊಂದರೆ ಅನುಭವಿಸಿದರು. ನಿರೀಕ್ಷೆಗಿಂತ ಹೆಚ್ಚಿನ ಜನ ಸೇರಿದ್ದರಿಂದ ವಿಐಪಿ, ವಿವಿಐಪಿ ಸ್ಥಳಗಳು ಸಂಪೂರ್ಣ ಭರ್ತಿಯಾಗಿದ್ದರಿಂದ ಅನೇಕರು ಸ್ಥಳಕ್ಕಾಗಿ ಆಕ್ಷೇಪ ವ್ಯಕ್ತಪಡಿಸಿದರು. ನಿಂತೇ ಕಾರ್ಯಕ್ರಮ ವೀಕ್ಷಿಸುತ್ತ ಖುಷಿಪಟ್ಟರು.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications