ಯುವ ದಸರಾದಲ್ಲಿ ಯಶ್ ಪಂಚಿಂಗ್ ಡೈಲಾಗ್'ಗೆ ಪಡ್ಡೆಗಳು ಫುಲ್ ಫಿದಾ
Recommended Video

ಮೈಸೂರು, ಅಕ್ಟೋಬರ್. 18: ಚಂದನವನದ ತಾರೆಯರ ಸೊಬಗಿನ ನೃತ್ಯ, ನೇಹ ಕಕ್ಕರ್ ಇಂಪಾದ ಗಾಯನಕ್ಕೆ ಯುವ ದಸರೆಯ ಸಂಭ್ರಮ ಮೇರೆ ಮೀರಿತ್ತು. ರಾಕಿಂಗ್ ಸ್ಟಾರ್ ಯಶ್ ಯುವ ದಸರೆಗೆ ರಂಗು ತುಂಬಿದರು.
ಮಹಾರಾಜ ಕಾಲೇಜಿನ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಯುವಕ-ಯುವತಿಯರು ಯುವ ದಸರೆಯ ಕೊನೇ ದಿನದಂದು ಬುಧವಾರ (ಅ.17) ನರ್ತಿಸಿದ ಕಲಾವಿದರನ್ನು ಮನಸಾರೆ ಪ್ರೋತ್ಸಾಹಿಸಿದರು.
ರಾಕಿಂಗ್ ಸ್ಟಾರ್ ಯಶ್ ಶೆರ್ವಾನಿ ತೊಟ್ಟು ಕಂಗೊಳಿಸುತ್ತಿದ್ದರು. ಅಣ್ತಮ್ಮಾ...ಎನ್ನುತ್ತ ವೇದಿಕೆ ಏರುತ್ತಿದ್ದಂತೆ ಇಡೀ ಸಭಾಂಗಣದಲ್ಲಿ ಒಂದು ರೀತಿಯ ಸಂಚಾರ ವ್ಯಕ್ತವಾಯಿತು. ಸಂಭ್ರಮದ ಜೈಕಾರ ಮಾರ್ದನಿಸಿತು. ಮೆಚ್ಚಿನ ನಟನನ್ನು ಕಂಡ ಯುವ ಸಮೂಹ ಹರ್ಷ ವ್ಯಕ್ತಪಡಿಸಿತು.
ಕುಕ್ಕರಹಳ್ಳಿ ಕೆರೆಯಲ್ಲಿ ಓಡಾಡುತ್ತ, ಪಡುವಾರಹಳ್ಳಿಯಲ್ಲಿ ಬೆಳೆದ ನಾನು ನಿಮ್ಮ ಹುಡ್ಗ. ಮೈಸೂರಿನವನು ಎಂದು ಯಶ್ ಹೇಳುತ್ತಿದ್ದಂತೆಯೇ ಮತ್ತಷ್ಟು ಸಂಭ್ರಮ ಮನೆ ಮಾಡಿತು. ರಾಜಾಹುಲಿ, ರಾಮಾಚಾರಿ ಸಿನಿಮಾಗಳ ಕೆಲವು ಡೈಲಾಗ್ ಹೇಳುವುದರ ಜೊತೆಗೆ ಹಾಡೊಂದನ್ನು ಹಾಡಿ ನೆರೆದಿದ್ದ ಜನಸ್ತೋಮ ಸಂಭ್ರಮಿಸುವಂತೆ ಮಾಡಿದರು. ಮುಂದೆ ಓದಿ...

ಸಂತೋಷ ಹಂಚಿಕೊಂಡ ಯಶ್
"ನಾನು ಹುಡುಗನಾಗಿದ್ದಾಗ ಇದೇ ಯುವ ದಸರಾದ ಪಾಸ್ ಬೇಕು ಎಂದು ಕೇಳಿಕೊಳ್ಳುತ್ತಿದ್ದೆ. ಆದರೆ ಇಂದು ಇದೇ ವೇದಿಕೆಯ ಮೇಲೆ ನಿಂತಿದ್ದೇನೆ. ಇದಕ್ಕೆಲ್ಲ ನಿಮ್ಮ ಪ್ರೀತಿ, ಪ್ರೋತ್ಸಾಹವೇ ಕಾರಣ. ನನಗೆ ಮೈಸೂರಿಗೆ ಬರುವುದೆಂದರೆ ತುಂಬಾ ಖುಷಿ. ಸಾಕಷ್ಟು ಊರು, ದೇಶ ನೋಡಿದ್ದೇನೆ, ಆದರೆ ಮೈಸೂರಂತ ಊರನ್ನು ಎಲ್ಲಿಯೂ ನೋಡಿಲ್ಲ. ನನಗೆ ಮೈಸೂರಿಗೆ ಬಂದ್ರೆ ನನ್ನ ಹಳೆಯ ನೆನಪುಗಳು ಕಣ್ಣ ಮುಂದೆ ಬರುತ್ತವೆ" ಎಂದು ಯಶ್ ಸಂತೋಷ ಹಂಚಿಕೊಂಡರು.

ನೇಹ ಕಕ್ಕರ್ ಗಾಯನ
ಖ್ಯಾತ ಹಿನ್ನೆಲೆ ಗಾಯಕಿ ನೇಹ ಕಕ್ಕರ್ ಗಾಯನದ ಮೂಲಕ ಯುವ ದಸರೆಗೆ ಅದ್ಧೂರಿಯಾಗಿ ತೆರೆ ಎಳೆಯಲಾಯಿತು. ಮಿಲೇ ಹೋ ತುಮ್ ಹಮ್ ಸೇ, ಬಡೇ ನಶೀಬೋ ಸೇ.. ಸೇರಿದಂತೆ ಹಿಂದಿ ಹಾಡುಗಳಿಗೆ ಶ್ರೋತೃಗಳು ಕಿವಿಯಾದರು.

ರಚಿತಾ ನೃತ್ಯ
ಗುಳಿಕೆನ್ನೆಯ ಚೆಲುವೆ ರಚಿತಾ ರಾಮ್ ನರ್ತಿಸಿ ನೆರೆದಿದ್ದ ಯುವಕರನ್ನು ಸಂಭ್ರಮದಲ್ಲಿ ತೇಲುವಂತೆ ಮಾಡಿದರು. ನಟಿಯರಾದ ಮೇಘನಾ ಗಾಂವ್ಕರ್, ಅನುಪಮಾ ಗೌಡ, ಜಯಶ್ರೀ, ಕಿರುತೆರೆಯ ವೈಷ್ಣವಿ ಕನ್ನಡ ಹಾಡುಗಳಿಗೆ ನೃತ್ಯ ಮಾಡಿ ಪಡ್ಡೆ ಹುಡುಗರ ಮನಸ್ಸು ಗೆದ್ದರು. ನೃತ್ಯ ಸಂಯೋಜಕ ಎ.ಹರ್ಷ ಮತ್ತು ತಂಡದವರ ನೃತ್ಯ ಮನಸೂರೆಗೊಳಿಸಿತು.

ನಿಂತೇ ಕಾರ್ಯಕ್ರಮ ವೀಕ್ಷಿಸಿದರು
ಢಮರುಗ ಬಿಡ್ಸ್ ಸಂಗೀತಗಾರರು ಪಾಶ್ಚಿಮಾತ್ಯ ಸಂಗೀತಕ್ಕೆ ಭಾರತೀಯ ಸಂಗೀತದ ರಿದಂ ಸೇರಿಸಿ ಡ್ರಮ್, ತಮಟೆ, ನಗಾರಿಯ ಮೂಲಕ ಹೊಸ ನಾದವನ್ನು ಹೊಮ್ಮಿಸಿ ಚಪ್ಪಾಳೆ ಗಿಟ್ಟಿಸಿದರು. ಅನೀಶ್ ಮತ್ತು ಹರೀಶ್ ಹಾಸ್ಯ ಕಾರಂಜಿ ಚಿಮ್ಮಿಸಿದರು. ಅನುಪಮಾ ವಿಶಿಷ್ಟವಾಗಿ ನಿರೂಪಿಸಿದರು.
ನಟ ಯಶ್ ಹಾಗೂ ಗಾಯಕಿ ನೇಹ ಕಕ್ಕರ್ ಅವರ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರಿಂದ ನೂಕು ನುಗ್ಗಲು ಉಂಟಾಗಿ ಜನ ತೊಂದರೆ ಅನುಭವಿಸಿದರು. ನಿರೀಕ್ಷೆಗಿಂತ ಹೆಚ್ಚಿನ ಜನ ಸೇರಿದ್ದರಿಂದ ವಿಐಪಿ, ವಿವಿಐಪಿ ಸ್ಥಳಗಳು ಸಂಪೂರ್ಣ ಭರ್ತಿಯಾಗಿದ್ದರಿಂದ ಅನೇಕರು ಸ್ಥಳಕ್ಕಾಗಿ ಆಕ್ಷೇಪ ವ್ಯಕ್ತಪಡಿಸಿದರು. ನಿಂತೇ ಕಾರ್ಯಕ್ರಮ ವೀಕ್ಷಿಸುತ್ತ ಖುಷಿಪಟ್ಟರು.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications