Nishvika Naidu: ರಾಕೇಶ್ ಸಿದ್ದರಾಮಯ್ಯ ನನ್ನ ಚಿಕ್ಕಪ್ಪ : ಅಪ್ಪಾಜಿ ಗೆಲ್ಲೋದು ಪಕ್ಕಾ ಎಂದ ನಿಶ್ವಿಕಾ ನಾಯ್ಡು
ಕರ್ನಾಟಕ ಚುನಾವಣಾ ಅಖಾಡ ರಂಗೇರಿದೆ, ಎಲ್ಲಾ ಪಕ್ಷಗಳು ಕೂಡ ಬಿರುಸಿನ ಪ್ರಚಾರ ಮಾಡಲು ಮುಂದಾಗಿವೆ. ಎಲ್ಲಾ ಪಕ್ಷಗಳು ಕೂಡ ಮತಬೇಟೆಗಾಗಿ ಸ್ಟಾರ್ ಪ್ರಚಾರಕರ ಮೊರೆ ಹೋಗಿವೆ, ಕನ್ನಡ ಚಿತ್ರದ ಪ್ರಮುಖ ನಟರು ಕೂಡ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ವರುಣಾದಲ್ಲಿ ಸಿದ್ದರಾಮಯ್ಯ ಪರವಾಗಿ ಶಿವರಾಜ್ಕುಮಾರ್, ರಮ್ಯಾ, ನಿಶ್ವಿಕಾ ನಾಯ್ಡು ಭರ್ಜರಿ ಪ್ರಚಾರ ಮಾಡಿದರು.
ಅಚ್ಚರಿ ಎನ್ನುವಂತೆ ಚಲನಚಿತ್ರ ನಟಿ ನಿಶ್ವಿಕಾ ನಾಯ್ಡು ಸಿದ್ದರಾಮಯ್ಯ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡರು, ಮಾತ್ರವಲ್ಲದೆ ರಾಕೇಶ್ ಸಿದ್ದರಾಮಯ್ಯ ನನ್ನ ಚಿಕ್ಕಪ್ಪ ಎಂದು ಹೇಳಿದ್ದಾರೆ. ವರುಣಾದಲ್ಲಿ ಸಿದ್ದರಾಮಯ್ಯ ಪರವಾಗಿ ಮತಯಾಚನೆ ಮಾಡುವ ಸಂದರ್ಭದಲ್ಲಿ ಮಾತನಾಡಿದ ಅವರು, "ತುಂಬಾ ಖುಷಿಯಾಗುತ್ತಿದೆ, ಸಿದ್ದರಾಮಯ್ಯ ನನಗೆ ಅಪ್ಪಾಜಿ ಇದ್ದಂತೆ, ಅವರಿಗಾಗಿ ಪ್ರಚಾರಕ್ಕೆ ಬಂದಿದ್ದೇನೆ, ರಾಕೇಶ್ ಸಿದ್ದರಾಮಯ್ಯ ಅವರು ನನಗೆ ಚಿಕ್ಕಪ್ಪ ಆಗಬೇಕು, ಇದೇ ಮೊದಲ ಬಾರಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತಿದ್ದೇನೆ, ಇಲ್ಲಿ ಅಪ್ಪಾಜಿ ಗೆಲ್ಲುತ್ತಾರೆ" ಎಂದು ಹೇಳಿದರು.

"ಸಿದ್ದರಾಮಯ್ಯ ಅವರ ಮೇಲೆ ಇಲ್ಲಿನ ಜನ ಸಾಕಷ್ಟು ಪ್ರೀತಿ ತೋರಿಸುತ್ತಿದ್ದಾರೆ. ವರುಣಾ ಕ್ಷೇತ್ರ ಅಪ್ಪಾಜಿಯವರದ್ದೇ, ಅವರು ಇಲ್ಲಿನವರೇ, ಖಂಡಿತವಾಗಿಯೂ ಅವರು ಗೆದ್ದೇ ಗೆಲ್ಲುತ್ತಾರೆ, ಜನ ಅವರ ಕೈ ಹಿಡಿಯುತ್ತಾರೆ" ಎಂದು ನಿಶ್ವಿಕಾ ನಾಯ್ಡು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಜೊತೆ ರೋಡ್ ಶೋನಲ್ಲಿ ಭಾಗವಹಿಸಿದ ನಿಶ್ವಿಕಾ ನಾಯ್ಡು ಮತಯಾಚನೆ ಮಾಡಿದರು. ಇಲ್ಲಿ ಬಿಜೆಪಿ ಪಕ್ಷದಿಂದ ವಿ ಸೋಮಣ್ಣ ಕಣಕ್ಕಿಳಿದಿದ್ದು, ಸಿದ್ದರಾಮಯ್ಯ ಅವರನ್ನು ಸೋಲಿಸಲು ಪಣತೊಟ್ಟಿದ್ದಾರೆ. ಜಗ್ಗೇಶ್, ಅಮಿತ್ ಶಾ, ವಿಜಯೇಂದ್ರ, ಪ್ರತಾಪ್ ಸಿಂಹ ಇಲ್ಲಿ ಸೋಮಣ್ಣ ಪರವಾಗಿ ಭರ್ಜರಿಯಾಗಿ ಪ್ರಚಾರ ಮಾಡಿದ್ದಾರೆ.
ಬಿಜೆಪಿಗೆ ಕೌಂಟರ್ ಕೊಡಲು ಸಿದ್ದರಾಮಯ್ಯ ಕೂಡ ಸ್ಟಾರ್ ನಟ, ನಟಿಯರ ಜೊತೆ ಮತಬೇಟೆಗೆ ಇಳಿದಿದ್ದಾರೆ. ಶಿವರಾಜ್ ಕುಮಾರ್, ರಮ್ಯಾ, ನಿಶ್ವಿಕಾ ನಾಯ್ಡು ಸಿದ್ದರಾಮಯ್ಯ ಜೊತೆ ಪ್ರಚಾರದಲ್ಲಿ ಭಾಗವಹಿಸಿದರು. ಮೇ5ರಂದು ದುನಿಯಾ ವಿಜಯ್ ಕೂಡ ಸಿದ್ದರಾಮಯ್ಯ ಪರವಾಗಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ವರುಣಾದಲ್ಲಿ ಸದ್ಯ ಸ್ಟಾರ್ ವಾರ್ ನಡೆಯುತ್ತಿದ್ದು, ಜನ ಯಾರ ಕೈ ಹಿಡಿಯುತ್ತಾರೆ ಎನ್ನುವುದು ಮೇ 13ರಂದು ತಿಳಿಯಲಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!











Click it and Unblock the Notifications