ನಂಜನಗೂಡಿನಲ್ಲಿ ದರ್ಶನ್ ಧ್ರುವನಾರಾಯಣ್ ಪರ ಮೋಹಕ ತಾರೆ ರಮ್ಯ ಪ್ರಚಾರ
ನಂಜನಗೂಡು, ಮೇ 4: ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಪರ ಕನ್ನಡ ಖ್ಯಾತ ನಟಿ, ಮೋಹಕ ತಾರೆ ರಮ್ಯಾ ಅವರು ಕಾಟೂರು ಗ್ರಾಮದಲ್ಲಿ ಗುರುವಾರ ಪ್ರಚಾರ ನಡೆಸಿದರು.
ಬುಧವಾರವಷ್ಟೇ ದರ್ಶನ್ ಧ್ರುವನಾರಾಯಣ್ ಪರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಚಾರ ನಡೆಸಿದ್ದರು. ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್ ಧ್ರುವನಾರಾಯಣ್ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರು ಅಕಾಲಿಕ ಮರಣ ಹೊಂದಿದ್ದರು. ಇದಾದ ಒಂದೇ ತಿಂಗಳಲ್ಲಿ ಅವರ ಪತ್ನಿ ದರ್ಶನ್ ಅವರ ತಾಯಿ ವೀಣಾ ಧ್ರುವನಾರಾಯಣ್ ಅವರು ಕೂಡ ಮೃತರಾಗಿದ್ದರು.

ನಂನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಹರ್ಷವರ್ದನ್ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಸಮೀಕ್ಷೆಗಳ ಪ್ರಕಾರ ದರ್ಶನ್ ಧ್ರುವನಾರಾಯಣ್ ಗೆಲುವು ಖಚಿತ ಎನ್ನಲಾಗುತ್ತಿದೆ. ಪ್ರಚಾರದ ವೇಳೆ ಮಾತನಾಡಿದ ನಟಿ ರಮ್ಯಾ ಅವರು ದರ್ಶನ್ ತಂದೆಯಂತೆಯೇ ಸೌಮ್ಯ ಸ್ವಭಾವದವರು. ಎಲ್ಲರಿಗೂ ಹೊಂದಿಕೊಳ್ಳುತ್ತಾರೆ. ಹೀಗಾಗಿ ಅವರನ್ನು ನೀವೆಲ್ಲರೂ 50,000 ಮತಗಳ ಅಂತರದಲ್ಲಿ ಗೆಲ್ಲಿಸಬೇಕು ಎಂದು ಕರೆ ನೀಡಿದರು.
ಬುಧವಾರ ನೇರಳೆ ಗ್ರಾಮದಲ್ಲಿ ನಡೆದ ಪ್ರಚಾರದ ವೇಳೆ ದರ್ಶನ್ ಅವರು ನನ್ನ ತಂದೆ ಹಾಗೂ ತಾಯಿ ಇಬ್ಬರೂ ಈಗ ವಿಧಿವಶರಾಗಿದ್ದಾರೆ. ಕ್ಷೇತ್ರದ ಜನತೆಯನ್ನೇ ನಾನು ತಂದೆ-ತಾಯಿ ಎಂದು ಭಾವಿಸಿದ್ದೇನೆ. ಹಾಗಾಗಿ ಕ್ಷೇತ್ರದ ಮತದಾರರು ತಂದೆ-ತಾಯಿ ಸ್ಥಾನದಲ್ಲಿ ನಿಂತು ನನ್ನನ್ನು ಆಶೀರ್ವಾದಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಮನವಿ ಮಾಡಿದ್ದರು.

ನನ್ನ ತಂದೆ ದಿವಂಗತ ಆರ್. ಧ್ರುವನಾರಾಯಣ್ ಅವರು ಅಕಾಲಿಕ ಮರಣಕ್ಕೀಡಾಗಿದ್ದರಿಂದ ಕ್ಷೇತ್ರದ ಜನರ ಒತ್ತಾಸೆ ಮೇರೆಗೆ ನನ್ನನ್ನು ಕಾಂಗ್ರೆಸ್ ಪಕ್ಷವು ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದೆ. ನನ್ನ ತಂದೆ ಆರ್.ಧ್ರುವನಾರಾಯಣ್ ಅವರು ಕ್ಷೇತ್ರದ ಜನತೆಯೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಂಡು ಕೆಲಸ ಮಾಡುತ್ತಿದ್ದ ರೀತಿಯಲ್ಲೆ ನಾನು ಕೂಡ ನಿಮ್ಮ ಮನೆ ಮಗನಾಗಿ ಸೇವೆ ಮಾಡುವುದಾಗಿ ಭರವಸೆ ನೀಡಿದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಚಿವರಾದ ಎಚ್.ಸಿ.ಮಹದೇವಪ್ಪ, ಶಾಸಕರಾದ ಎಂ.ಬಿ.ಪಾಟೀಲ, ಪುಟ್ಟರಂಗಶೆಟ್ಟಿ ಅವರ ನಿರಂತರ ಮಾರ್ಗದರ್ಶನದಲ್ಲಿ ನಿಮ್ಮ ಬಳಿ ಬಂದಿದ್ದೇನೆ. ಮೇ 10ರಂದು ತಪ್ಪದೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ನನಗೆ ಮತ ನೀಡಿ ತಮ್ಮ ಸೇವೆ ಮಾಡಲು ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications