ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ನಾಣ್ಯದ ಗಿಫ್ಟ್ ನೀಡಿದ ಶೃತಿ ನಾಯ್ಡು
ಮೈಸೂರು, ಮೇ 11: ಜೀವದ ಹಂಗು ತೊರೆದು ಕೊರೊನಾ ವೈರಸ್ ತಡೆಗಟ್ಟುವಲ್ಲಿ ಶ್ರಮಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ನಟಿ ಹಾಗೂ ನಿರ್ಮಾಪಕಿ ಶೃತಿ ನಾಯ್ಡು ಅವರು ವಿಭಿನ್ನ ವಿನ್ಯಾಸದಲ್ಲಿ ಸಿದ್ಧಪಡಿಸಿರುವ ಬಾಕ್ಸ್ ವೊಂದರಲ್ಲಿ 20 ಗ್ರಾಂ ಬೆಳ್ಳಿ ನಾಣ್ಯವನ್ನಿಟ್ಟು ನೀಡುವ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.
ಮಾರಕ ಕೋವಿಡ್-19 ಸೋಂಕಿನ ವಿರುದ್ದ ಹೋರಾಡಲು ಇಡೀ ದೇಶವೇ ಒಂದಾಗಿ ಹೋರಾಡುತ್ತಿದೆ. ಅದರಲ್ಲೂ ಮುಂಚೂಣಿ ಸೇವೆಯಲ್ಲಿರುವ ಪೌರ ಕಾರ್ಮಿಕರು, ಪೋಲೀಸ್ ಮತ್ತು ವೈದ್ಯಕೀಯ ಸಿಬ್ಬಂದಿಗಳ ಶ್ರಮ ಅಪಾರವಾಗಿದ್ದು, ಇವರ ಕರ್ತವ್ಯವೂ ಸವಾಲಿನದ್ದಾಗಿದೆ. ತಮ್ಮ ಕರ್ತವ್ಯದ ನಡುವೆ ಇವರು ಕೋವಿಡ್ ಸೋಂಕಿತರ ಜತೆ ಮುಖಾಮುಖಿ ಆಗಲೇಬೇಕಿದೆ. ಈ ಸಂದರ್ಭದಲ್ಲಿ ಇವರಿಗೇ ಸೋಂಕು ತಗುಲುವ ಅಪಾಯವಿದ್ದರೂ ಪೊಲೀಸರು ಹಾಗೂ ವೈದ್ಯರು ಕರ್ತವ್ಯದಿಂದ ವಿಮುಖರಾಗಿಲ್ಲ.

ಬಡ ಕುಂಟುಂಬಗಳಿಗೆ ಶೃತಿ ನಾಯ್ಡು ನೆರವು
ಇವರ ಸೇವೆ ಗುರುತಿಸಿ ನಾಗರೀಕರು ದೇಶದ ಹಲವೆಡೆ ಹೂಮಳೆ ಸುರಿದು ಕೃತಜ್ಞತೆ ಸಲ್ಲಿಸಿದ್ದರು. ಈಗಾಗಲೇ ಕೊರೊನಾ ವಾರಿಯರ್ಸ್ ಮತ್ತು ಲಾಕ್ಡೌನ್ ಹಿನ್ನೆಲೆ ಹಸಿವಿನಿಂದ ಬಳಲುತ್ತಿದ್ದ ಅನೇಕ ಕುಟುಂಬಗಳಿಗೆ ಶೃತಿ ನೆರವಾಗಿದ್ದಾರೆ. ಮೈಸೂರು ಸಮೀಪದ ಕಾಡಂಚಿನ ಜನರಿಗೂ ಆಹಾರದ ಕಿಟ್ ತಲುಪಿಸಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಪೊಲೀಸರ ಸೇವೆಗೆ ಕೃತಜ್ಞತೆ
ಅಲ್ಲದೇ ತಮ್ಮ ಒಡೆತನದ ಮೈಸೂರು ಮಿರ್ಚಿ ರೆಸ್ಟೋರೆಂಟ್ ಮೂಲಕವೂ ಜನರಿಗೆ ನೆರವಾಗಿದ್ದಾರೆ. ಕುವೆಂಪು ನಗರದಲ್ಲಿ ವಾಸವಾಗಿರುವ ಶೃತಿ ನಾಯ್ಡು, ನಿನ್ನೆ ಕುವೆಂಪು ನಗರ ಠಾಣೆಗೆ ತೆರಳಿ 90 ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ನಾಣ್ಯ ನೀಡಿ ಕೃತಜ್ಞತೆ ಸಲ್ಲಿಸಿದರು. ಪ್ರತಿ ದಿನವೂ ಪೊಲೀಸ್ ಅಧಿಕಾರಿಗಳು ಮತ್ತು ಅವರ ಸಿಬ್ಬಂದಿಯ ಕೆಲಸ ಕಾರ್ಯ ನೋಡುತ್ತಿದ್ದೇವೆ. ಹಗಲಿರುಳು ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಪೊಲೀಸರು ಅಪಾಯಕಾರಿ ಸ್ಥಳದಲ್ಲೂ ಕರ್ತವ್ಯ
ಕೆಂಪು ವಲಯದಲ್ಲಿದ್ದ ಮೈಸೂರನ್ನು ಹಸಿರು ವಲಯವನ್ನಾಗಿ ಮಾಡುವಲ್ಲಿ ಶ್ರಮಿಸುತ್ತಿರುವ ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಮತ್ತು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರನ್ನು ಈ ಸಂದರ್ಭದಲ್ಲಿ ಶೃತಿ ನಾಯ್ಡು ಸ್ಮರಿಸಿದರು.
""ನಾವು ಇಂದು ಮನೆಯಲ್ಲಿ ಆರಾಮಾಗಿ ಇರಬೇಕಾದರೆ ಪೊಲೀಸ್ ಸಿಬ್ಬಂದಿಯ ನಿರಂತರ ಶ್ರಮ ಅಪಾರ. ಅಪಾಯಕಾರಿ ಸ್ಥಳಗಳಲ್ಲೂ ರಜೆ ಪಡೆಯದೆ ಕರ್ತವ್ಯ ಮಾಡಿದ್ದಾರೆ. ಲಾಕ್ ಡೌನ್ ಕಾರಣದಿಂದಾಗಿ ನಾನೂ ಮೈಸೂರಿನಲ್ಲಿ ಇರಬೇಕಾಯಿತು'' ಎಂದರು.

ಶಾಂತ ರೀತಿಯಲ್ಲಿ ವರ್ತನೆ
ಎಷ್ಟೇ ಒತ್ತಡವಿದ್ದರೂ ಶಾಂತ ರೀತಿಯಲ್ಲಿ ವರ್ತಿಸಿ ಜನ ಸೇವೆಯಲ್ಲಿ ತೊಡಗಿ, ಜನರ ಸಹಾಯಕ್ಕೆ ನಿಂತಿದ್ದಾರೆ ಎಂದು ತಿಳಿಸಿದರು.
ಪೊಲೀಸರ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸಬೇಕೆನ್ನಿಸಿತು. ಹಾಗಾಗಿ ಈ ಮೂಲಕ ಸಲ್ಲಿಸಿದ್ದೇನೆ ಎಂದು ಶೃತಿ ಹೇಳಿದರು. ಕಾರ್ಯಕ್ರಮದಲ್ಲಿ ಎಸಿಪಿ ಪೂರ್ಣಚಂದ್ರ ತೇಜಸ್ವಿ, ಇನ್ಸ್ ಪೆಕ್ಟರ್ ರಾಜು ಜಿ.ಸಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
-
Gold Rate March 23: ಚಿನ್ನ - ಬೆಳ್ಳಿ ದರ ಭಾರೀ ಕುಸಿತ: ಒಂದೇ ದಿನದಲ್ಲಿ ಶೇ. 4% ಇಳಿಕೆ, ಬಂಗಾರ ಪ್ರಿಯರಿಗೆ ಸಿಹಿ ಸುದ್ದಿ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications