ಮೈಸೂರು: ರಂಗಾಯಣದಲ್ಲಿ ಬಹುರೂಪಿ ಚಲನಚಿತ್ರೋತ್ಸವಕ್ಕೆ ನಟಿ ತಾರಾ ಚಾಲನೆ
ಮೈಸೂರು, ಮಾರ್ಚ್ 12: ಮೈಸೂರಿನ ರಂಗಾಯಣದಲ್ಲಿ ನಡೆಯುತ್ತಿರುವ ಬಹುರೂಪಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಟಿ ಹಾಗೂ ಅರಣ್ಯ ನಿಗಮ ಮಂಡಳಿ ಅಧ್ಯಕ್ಷೆ ತಾರಾ ಶನಿವಾರ ಚಾಲನೆ ನೀಡಿದರು.
ಚಾಲನೆ ನೀಡಿದ ನಂತರ ಮಾತನಾಡಿದ ನಟಿ ತಾರಾ, "ಮೈಸೂರೆಂದರೆ ಆಪ್ತ ತಾಣ. ಎಲ್ಲರನ್ನೂ ಅಪ್ಪಿ ಒಪ್ಪಿಕೊಂಡಿರುವ ಈ ಊರಿಗೆ ಬಂದರೆ ಹೊಸ ಶಕ್ತಿ ಸಿಗುತ್ತದೆ. ಕಲೆಗಳ ತವರೂರು ಮೈಸೂರು. ಈ ನಗರದಲ್ಲಿ ಬಹುರೂಪಿ ರಾಷ್ಟ್ರೀಯ ರಂಗೋತ್ಸವದ ಅಂಗವಾಗಿ ಆಯೋಜನೆಗೊಂಡಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವನ್ನು ಬಹಳ ಖುಷಿಯಿಂದ ಉದ್ಘಾಟನೆ ನೆರವೇರಿಸಿದ್ದೇನೆ,'' ಎಂದು ತಿಳಿಸಿದರು.
ಚಲನಚಿತ್ರ ಒಂದು ಸಮಗ್ರ ಕಲೆ. ಇದರಲ್ಲಿ ಜಾತಿ, ಧರ್ಮ ಹುಡುಕಬಾರದು. ಕಲೆ ಎಲ್ಲವನ್ನೂ ಮೀರಿ ನಿಂತಿದೆ. ಕೇವಲ ಸೂಟುಬೂಟು ಹಾಕಿಕೊಂಡವರು ಮಾತ್ರ ಸಿನಿಮಾ ನೋಡಲು ಬರುವುದಿಲ್ಲ. ಸಿನಿಮಾಗೆ ಎಲ್ಲಾ ವರ್ಗದ ಪ್ರೇಕ್ಷಕರು ಇದ್ದಾರೆ. ಕಲಾವಿದನಿಗೆ ಗಡಿ, ಭಾಷೆಗಳ ಮಿತಿ ಇರುವುದಿಲ್ಲ. ಕಲಾವಿದರೆಲ್ಲವೂ ಒಗ್ಗಟ್ಟಾಗಿ ಇರಬೇಕು ಎಂದು ಅಭಿಪ್ರಾಯಪಟ್ಟರು.

"ಈ ಬಾರಿ ಬಹುರೂಪಿ ನಾಟಕೋತ್ಸವ 'ತಾಯಿ' ಎಂಬ ಥೀಮ್ ಅಡಿ ನಡೆಯುತ್ತಿರುವುದು ಖುಷಿಯ ವಿಚಾರ. ಎಲ್ಲಾ ಪುರುಷರ ಹಿಂದೆ ಒಬ್ಬ ತಾಯಿ ಇದ್ದಾಳೆ. ಎಲ್ಲಾ ತಾಯಿ ಹಿಂದೆ ಒಬ್ಬ ಪುರುಷ ಇದ್ದಾನೆ. ತಾಯಿಗೆ ಆಕೆ ಅಷ್ಟೇ ಸಾಟಿ. ಪುನೀತ್ ರಾಜ್ಕುಮಾರ್ ಅವರ 'ರಾಜಕುಮಾರ' ಸಿನಿಮಾ ಕೂಡ ಚಲನಚಿತ್ರೋತ್ಸವದಲ್ಲಿದೆ. ನಮ್ಮೆಲ್ಲರ ಹೃದಯ ಕಮಲದಲ್ಲಿ ಪುನೀತ್ ಶಾಶ್ವತವಾಗಿ ನೆಲೆಸಿದ್ದಾರೆ. ಅವರಿಗೆ ಸಾವಿಲ್ಲ, ಸದಾ ಜೀವಂತವಾಗಿರುತ್ತಾರೆ," ಎಂದು ಸ್ಮರಿಸಿದರು.
ಬಿ.ವಿ. ಕಾರಂತ ರಂಗ ಚಾವಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಸರವಾದಿ ಮ್ಯಾನ್ ಮನು, ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ, ಉಪ ನಿರ್ದೇಶಕಿ ನಿರ್ಮಲ ಮಠಪತಿ, ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ, ಸಂಚಾಲಕ ಅಂಜುಸಿಂಗ್ ಸೇರಿದಂತೆ ಇತರರು ಇದ್ದರು.

ಮೊದಲ ದಿನ ಕೊಡವ ಭಾಷೆಯ ದ ಸ್ಟೋರಿ ಆಫ್ ಕಾವೇರಿ, ಇಂಗ್ಲಿಷ್ ಭಾಷೆಯ ಕೇರಿಂಗ್ ಫಾರ್ 7 ಬಿಲಿಯನ್, ಕಜಕಿಸ್ತಾನದ ಕುರ್ಮಾಂಜನ್ ದಡ್ಕ ಚಿತ್ರ ಪ್ರದರ್ಶನಗೊಂಡವು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications