ರಂಗಾಯಣದಲ್ಲಿ ಶ್ರದ್ಧಾಂಜಲಿ ಸಭೆಗೆ ಯಾರೂ ವಿರೋಧಿಸಲಿಲ್ಲ ಏಕೆ?
ಮೈಸೂರು, ಮಾರ್ಚ್ 21: "ಮಾಜಿ ಸಿಎಂ ಮಗ ಮೃತಪಟ್ಟಾಗ ಇದೇ ರಂಗಾಯಣದಲ್ಲಿ ಶ್ರದ್ಧಾಂಜಲಿ ಸಭೆ ಮಾಡಿದರೂ ಯಾರು ವಿರೋಧಿಸಲಿಲ್ಲ ಯಾಕೆ?" ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಪ್ರಶ್ನೆ ಮಾಡಿದರು.
ವನರಂಗದಲ್ಲಿ ನಡೆದ ಬಹುರೂಪಿ ರಾಷ್ಟ್ರೀಯ ರಂಗೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, "ಅರ್ಬನ್ ನಕ್ಸಲ್ ಎಂದು ಕುತ್ತಿಗೆಗೆ ಬೋರ್ಡ್ ಹಾಕಿಕೊಂಡವರು ರಂಗಾಯಣಕ್ಕೆ ಮುಖ್ಯ ಅತಿಥಿಯಾಗಿ ಬಂದು ಹೋಗಿದ್ದಾರೆ" ಎಂದರು.
"ಕೋಲೆ ಬಸವ ಕಾರ್ಯಕ್ರಮವನ್ನು ನೋಡಿ ಗೋವು ಎಂಬ ಕಾರಣಕ್ಕೆ ಅತಿಥಿ ಸ್ಥಾನದಿಂದ ಬಹಿಷ್ಕರಿಸಿದವರು ಬಂದು ಹೋಗಿದ್ದಾರೆ. ಬಾಂಗ್ಲಾ ನುಸುಳುಕೋರರಿಗೆ ಆಧಾರ್ ಕಾರ್ಡ್ ಕೊಡಿ, ಮತದಾನದ ಹಕ್ಕು ಕೊಡಬೇಕೆಂದು ವಿಚಾರಸಂಕಿರಣದಲ್ಲಿ ವಾದಿಸಿದವರು ಬಂದು ಹೋಗಿದ್ದಾರೆ. ಮಾಜಿ ಸಿಎಂ ಮಗ ವಿದೇಶದಲ್ಲಿ ಬೌನ್ಸರ್ನಿಂದ ಪೆಟ್ಟು ತಿಂದು ಮೃತಪಟ್ಟಾಗ ಅವರ ಶ್ರದ್ಧಾಂಜಲಿಯನ್ನು ರಂಗಾಯಣದಲ್ಲೇ ಮಾಡಿದಾಗ ಯಾರೂ ವಿರೋಧಿಸಲಿಲ್ಲ, ಧರಣಿ ಕೂರಲಿಲ್ಲ" ಎಂದು ಟೀಕಿಸಿದರು.

"ಕಳೆದ 32 ವರ್ಷದಿಂದ ರಂಗಾಯಣ ನಡೆಯುತ್ತಿದೆ. ಇಲ್ಲಿ ಆಡಳಿತ ನಡೆಸಿದವರು ತಮಗೆ ಬೇಕಾದ ಅತಿಥಿಗಳನ್ನು ಕರೆಸಿದ್ದಾರೆ. ಇಲ್ಲಿ ಬಂದವರೆಲ್ಲರೂ ಒಂದೇ ಪಂಥದ ಚಿಂತನೆಯವರು. ಆಗ ಯಾರೂ ಚಕಾರ ಎತ್ತಲಿಲ್ಲ" ಎಂದು ಹೇಳಿದರು.
"ಬಹುರೂಪಿಗೆ ಚಕ್ರವರ್ತಿ ಸೂಲಿಬೆಲೆ ಅವರನ್ನು ಕರೆಸಿದ್ದಕ್ಕೆ ಕೆಲವರು ನನ್ನ ವಿರುದ್ಧ ಮುಗಿಬಿದ್ದಿದ್ದರು. 20 ದಿನಗಳ ಕಾಲ ಪ್ರತಿಭಟನೆ ನಡೆಸಿದರು" ಎಂದು ಅತಿಥಿಗಳನ್ನು ಕರೆಸಲು ನಡೆದ ವಿವಾದದ ಬಗ್ಗೆ ಅಡ್ಡಂಡ ಸಿ. ಕಾರ್ಯಪ್ಪ ಹರಿಹಾಯ್ದರು.
"ಬಿ. ವಿ. ಕಾರಂತರ ಹೆಸರಿನಲ್ಲಿ ಕಾಸು ಮಾಡಿಕೊಂಡಾಗಲೂ ಎಲ್ಲರೂ ಸುಮ್ಮನಿದ್ದರು. ಬಿಳಿ ಶರ್ಟು, ಬಿಳಿ ಪ್ಯಾಂಟು ಹಾಕಿಕೊಂಡು ಇದೇ ಸಮಾಜವಾದ ಎನ್ನುತ್ತಾ ಕನ್ನಡ ಸಂಸ್ಕೃತಿ ಇಲಾಖೆಯಿಂದ 75 ಲಕ್ಷ ಹಣವನ್ನು ಕೊಡಿಸಿಕೊಂಡು, 2 ಎಕರೆ ಜಾಗವನ್ನು ಪಡೆದ ಪೆಟ್ರೋಲ್ ಬ್ಯಾಂಕ್ನ ಮಾಲೀಕ ಪೋಸು ಕೊಟ್ಟಾಗಲೂ ಯಾರೂ ಕೇಳಲಿಲ್ಲ. ಶ್ರೇಷ್ಠ ಸಾಹಿತಿ ಡಾ. ಎಸ್. ಎಲ್. ಭೈರಪ್ಪರನ್ನು ರಂಗಾಯಣಕ್ಕೆ ಒಮ್ಮೆಯೂ ಆಹ್ವಾನಿಸದಾಗ ಯಾರು ಯಾಕೆ ಪ್ರಶ್ನಿಸಲಿಲ್ಲ" ಎಂದರು.
ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಅತಿಥಿಗಳನ್ನು ಕರೆಸುವ ವಿಚಾರ ಈ ಭಾರೀ ಚರ್ಚೆಗೆ ಕಾರಣವಾಗಿತ್ತು. ಕಲಾವಿದರಿಗೆ ರಕ್ಷಣೆ ನೀಡಿ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಪೊಲೀಸ್ ಠಾಣೆ ಮೆಟ್ಟಿಲು ಸಹ ಏರಿದ್ದರು.
ಚಕ್ರವರ್ತಿ ಸೂಲಿಬೆಲೆ, ನಟಿ ಮತ್ತು ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್ರನ್ನು ಅತಿಥಿಗಳಾಗಿ ಕರೆಸುವ ವಿಚಾರಕ್ಕೆ ವಿರೋಧ ವ್ಯಕ್ತವಾಗಿತ್ತು. ಹಲವು ವಿವಾದದ ನಡುವೆಯೂ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಭಾನುವಾರ ತೆರೆ ಬಿದ್ದಿದೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications