ರಂಗಾಯಣದಲ್ಲಿ ಶ್ರದ್ಧಾಂಜಲಿ ಸಭೆಗೆ ಯಾರೂ ವಿರೋಧಿಸಲಿಲ್ಲ ಏಕೆ?
ಮೈಸೂರು, ಮಾರ್ಚ್ 21: "ಮಾಜಿ ಸಿಎಂ ಮಗ ಮೃತಪಟ್ಟಾಗ ಇದೇ ರಂಗಾಯಣದಲ್ಲಿ ಶ್ರದ್ಧಾಂಜಲಿ ಸಭೆ ಮಾಡಿದರೂ ಯಾರು ವಿರೋಧಿಸಲಿಲ್ಲ ಯಾಕೆ?" ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಪ್ರಶ್ನೆ ಮಾಡಿದರು.
ವನರಂಗದಲ್ಲಿ ನಡೆದ ಬಹುರೂಪಿ ರಾಷ್ಟ್ರೀಯ ರಂಗೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, "ಅರ್ಬನ್ ನಕ್ಸಲ್ ಎಂದು ಕುತ್ತಿಗೆಗೆ ಬೋರ್ಡ್ ಹಾಕಿಕೊಂಡವರು ರಂಗಾಯಣಕ್ಕೆ ಮುಖ್ಯ ಅತಿಥಿಯಾಗಿ ಬಂದು ಹೋಗಿದ್ದಾರೆ" ಎಂದರು.
"ಕೋಲೆ ಬಸವ ಕಾರ್ಯಕ್ರಮವನ್ನು ನೋಡಿ ಗೋವು ಎಂಬ ಕಾರಣಕ್ಕೆ ಅತಿಥಿ ಸ್ಥಾನದಿಂದ ಬಹಿಷ್ಕರಿಸಿದವರು ಬಂದು ಹೋಗಿದ್ದಾರೆ. ಬಾಂಗ್ಲಾ ನುಸುಳುಕೋರರಿಗೆ ಆಧಾರ್ ಕಾರ್ಡ್ ಕೊಡಿ, ಮತದಾನದ ಹಕ್ಕು ಕೊಡಬೇಕೆಂದು ವಿಚಾರಸಂಕಿರಣದಲ್ಲಿ ವಾದಿಸಿದವರು ಬಂದು ಹೋಗಿದ್ದಾರೆ. ಮಾಜಿ ಸಿಎಂ ಮಗ ವಿದೇಶದಲ್ಲಿ ಬೌನ್ಸರ್ನಿಂದ ಪೆಟ್ಟು ತಿಂದು ಮೃತಪಟ್ಟಾಗ ಅವರ ಶ್ರದ್ಧಾಂಜಲಿಯನ್ನು ರಂಗಾಯಣದಲ್ಲೇ ಮಾಡಿದಾಗ ಯಾರೂ ವಿರೋಧಿಸಲಿಲ್ಲ, ಧರಣಿ ಕೂರಲಿಲ್ಲ" ಎಂದು ಟೀಕಿಸಿದರು.

"ಕಳೆದ 32 ವರ್ಷದಿಂದ ರಂಗಾಯಣ ನಡೆಯುತ್ತಿದೆ. ಇಲ್ಲಿ ಆಡಳಿತ ನಡೆಸಿದವರು ತಮಗೆ ಬೇಕಾದ ಅತಿಥಿಗಳನ್ನು ಕರೆಸಿದ್ದಾರೆ. ಇಲ್ಲಿ ಬಂದವರೆಲ್ಲರೂ ಒಂದೇ ಪಂಥದ ಚಿಂತನೆಯವರು. ಆಗ ಯಾರೂ ಚಕಾರ ಎತ್ತಲಿಲ್ಲ" ಎಂದು ಹೇಳಿದರು.
"ಬಹುರೂಪಿಗೆ ಚಕ್ರವರ್ತಿ ಸೂಲಿಬೆಲೆ ಅವರನ್ನು ಕರೆಸಿದ್ದಕ್ಕೆ ಕೆಲವರು ನನ್ನ ವಿರುದ್ಧ ಮುಗಿಬಿದ್ದಿದ್ದರು. 20 ದಿನಗಳ ಕಾಲ ಪ್ರತಿಭಟನೆ ನಡೆಸಿದರು" ಎಂದು ಅತಿಥಿಗಳನ್ನು ಕರೆಸಲು ನಡೆದ ವಿವಾದದ ಬಗ್ಗೆ ಅಡ್ಡಂಡ ಸಿ. ಕಾರ್ಯಪ್ಪ ಹರಿಹಾಯ್ದರು.
"ಬಿ. ವಿ. ಕಾರಂತರ ಹೆಸರಿನಲ್ಲಿ ಕಾಸು ಮಾಡಿಕೊಂಡಾಗಲೂ ಎಲ್ಲರೂ ಸುಮ್ಮನಿದ್ದರು. ಬಿಳಿ ಶರ್ಟು, ಬಿಳಿ ಪ್ಯಾಂಟು ಹಾಕಿಕೊಂಡು ಇದೇ ಸಮಾಜವಾದ ಎನ್ನುತ್ತಾ ಕನ್ನಡ ಸಂಸ್ಕೃತಿ ಇಲಾಖೆಯಿಂದ 75 ಲಕ್ಷ ಹಣವನ್ನು ಕೊಡಿಸಿಕೊಂಡು, 2 ಎಕರೆ ಜಾಗವನ್ನು ಪಡೆದ ಪೆಟ್ರೋಲ್ ಬ್ಯಾಂಕ್ನ ಮಾಲೀಕ ಪೋಸು ಕೊಟ್ಟಾಗಲೂ ಯಾರೂ ಕೇಳಲಿಲ್ಲ. ಶ್ರೇಷ್ಠ ಸಾಹಿತಿ ಡಾ. ಎಸ್. ಎಲ್. ಭೈರಪ್ಪರನ್ನು ರಂಗಾಯಣಕ್ಕೆ ಒಮ್ಮೆಯೂ ಆಹ್ವಾನಿಸದಾಗ ಯಾರು ಯಾಕೆ ಪ್ರಶ್ನಿಸಲಿಲ್ಲ" ಎಂದರು.
ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಅತಿಥಿಗಳನ್ನು ಕರೆಸುವ ವಿಚಾರ ಈ ಭಾರೀ ಚರ್ಚೆಗೆ ಕಾರಣವಾಗಿತ್ತು. ಕಲಾವಿದರಿಗೆ ರಕ್ಷಣೆ ನೀಡಿ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಪೊಲೀಸ್ ಠಾಣೆ ಮೆಟ್ಟಿಲು ಸಹ ಏರಿದ್ದರು.
ಚಕ್ರವರ್ತಿ ಸೂಲಿಬೆಲೆ, ನಟಿ ಮತ್ತು ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್ರನ್ನು ಅತಿಥಿಗಳಾಗಿ ಕರೆಸುವ ವಿಚಾರಕ್ಕೆ ವಿರೋಧ ವ್ಯಕ್ತವಾಗಿತ್ತು. ಹಲವು ವಿವಾದದ ನಡುವೆಯೂ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಭಾನುವಾರ ತೆರೆ ಬಿದ್ದಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications