ರಂಗಾಯಣಕ್ಕೆ ಸಂಘರ್ಷ ಮಾಡಲು ಬಂದಿಲ್ಲ: ನಿರ್ದೇಶಕ ಅಡ್ಡಂಡ ಕಾರ್ಯಪ್ಪ
ಮೈಸೂರು, ಫೆಬ್ರವರಿ 20: ನಾನು ರಂಗಾಯಣಕ್ಕೆ ಸಂಘರ್ಷ ಮಾಡಲು ಬಂದಿಲ್ಲ, ಸಮನ್ವಯತೆ ಸಾಧಿಸಲು ಬಂದಿದ್ದೇನೆ. ನಾನು ಬಂದಿರುವುದು ರಂಗಾಯಣಕ್ಕಾಗಿ, ಯಾವುದೇ ಪಕ್ಷದ ಬಾವುಟ ಹಾರಿಸಲು ಅಲ್ಲ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿದರು.
ಈ ಬಾರಿಯ "ಗಾಂಧಿ ಪಥ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ' ಯಶಸ್ವಿಯಾಗಿ ತೆರೆಕಂಡಿದೆ. ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ಬಾರಿ ಗಾಂಧಿ ಪಥ ಮನೆ ಮನೆಗಳನ್ನು ತಲುಪಿದೆ ಎಂದು ತಿಳಿಸಿದರು.
ಈ ಬಾರಿ ಜನಸಾಮಾನ್ಯರು ಕೂಡ ಬಹುರೂಪಿಯಲ್ಲಿ ಭಾಗವಹಿಸಿದ್ದರು. ಪಂಥಗಳನ್ನು ಮೀರಿ ಪಥಗಳತ್ತ ಹೆಜ್ಜೆ ಹಾಕಿದ್ದೇವೆ. ಎಡ ಪಂಥಿಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈ ಯಶಸ್ಸು ನಮ್ಮ ಎಲ್ಲಾ ತಂಡಕ್ಕೂ ಸಲ್ಲುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.

ಟಿಪ್ಪು ಒಬ್ಬ ಮತಾಂಧ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅಡ್ಡಂಡ ಕಾರ್ಯಪ್ಪ, ನನ್ನ ಮಾತು ಸ್ವಲ್ಪ ಒರಟು, ಕೊಡವರ ಮಾತೇ ಹಾಗೆ. ಅಷ್ಟಿಲ್ಲದಿದ್ದರೆ ಕೊಡವರು ದೇಶವನ್ನು ಕಾಯುವುದಕ್ಕೆ ಹೋಗುತ್ತಿರಲಿಲ್ಲ. ನೀವು ಪತ್ರಕರ್ತರು ಬೇಕಿದ್ದರೆ ಟೀ ಕುಡಿದು ನನ್ನ ಬಗ್ಗೆ ಟೀಕಿಸಿ ಬರೆಯಿರಿ ಎಂದು ಹೇಳಿದರು.
ನಾನು ಹೇಳಿದ್ದು, ಕೊಡವರಿಗೆ ಟಿಪ್ಪು ಎಂದರೆ ಒಬ್ಬ ಮತಾಂಧ. ಮೈಸೂರಿಗರಿಗೆ ಹೆಮ್ಮೆ ಎಂದು. ಟಿಪ್ಪು ಕೊಡಗಿನಲ್ಲಿ 12000 ಜನರನ್ನು ಮತಾಂತರ ಮಾಡಿದ್ದ ಎಂದು ಅಡ್ಡಂಡ ಕಾರ್ಯಪ್ಪ ಆರೋಪಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications