ರಂಗಾಯಣಕ್ಕೆ ಸಂಘರ್ಷ ಮಾಡಲು ಬಂದಿಲ್ಲ: ನಿರ್ದೇಶಕ ಅಡ್ಡಂಡ ಕಾರ್ಯಪ್ಪ
ಮೈಸೂರು, ಫೆಬ್ರವರಿ 20: ನಾನು ರಂಗಾಯಣಕ್ಕೆ ಸಂಘರ್ಷ ಮಾಡಲು ಬಂದಿಲ್ಲ, ಸಮನ್ವಯತೆ ಸಾಧಿಸಲು ಬಂದಿದ್ದೇನೆ. ನಾನು ಬಂದಿರುವುದು ರಂಗಾಯಣಕ್ಕಾಗಿ, ಯಾವುದೇ ಪಕ್ಷದ ಬಾವುಟ ಹಾರಿಸಲು ಅಲ್ಲ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿದರು.
ಈ ಬಾರಿಯ "ಗಾಂಧಿ ಪಥ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ' ಯಶಸ್ವಿಯಾಗಿ ತೆರೆಕಂಡಿದೆ. ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ಬಾರಿ ಗಾಂಧಿ ಪಥ ಮನೆ ಮನೆಗಳನ್ನು ತಲುಪಿದೆ ಎಂದು ತಿಳಿಸಿದರು.
ಈ ಬಾರಿ ಜನಸಾಮಾನ್ಯರು ಕೂಡ ಬಹುರೂಪಿಯಲ್ಲಿ ಭಾಗವಹಿಸಿದ್ದರು. ಪಂಥಗಳನ್ನು ಮೀರಿ ಪಥಗಳತ್ತ ಹೆಜ್ಜೆ ಹಾಕಿದ್ದೇವೆ. ಎಡ ಪಂಥಿಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈ ಯಶಸ್ಸು ನಮ್ಮ ಎಲ್ಲಾ ತಂಡಕ್ಕೂ ಸಲ್ಲುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.

ಟಿಪ್ಪು ಒಬ್ಬ ಮತಾಂಧ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅಡ್ಡಂಡ ಕಾರ್ಯಪ್ಪ, ನನ್ನ ಮಾತು ಸ್ವಲ್ಪ ಒರಟು, ಕೊಡವರ ಮಾತೇ ಹಾಗೆ. ಅಷ್ಟಿಲ್ಲದಿದ್ದರೆ ಕೊಡವರು ದೇಶವನ್ನು ಕಾಯುವುದಕ್ಕೆ ಹೋಗುತ್ತಿರಲಿಲ್ಲ. ನೀವು ಪತ್ರಕರ್ತರು ಬೇಕಿದ್ದರೆ ಟೀ ಕುಡಿದು ನನ್ನ ಬಗ್ಗೆ ಟೀಕಿಸಿ ಬರೆಯಿರಿ ಎಂದು ಹೇಳಿದರು.
ನಾನು ಹೇಳಿದ್ದು, ಕೊಡವರಿಗೆ ಟಿಪ್ಪು ಎಂದರೆ ಒಬ್ಬ ಮತಾಂಧ. ಮೈಸೂರಿಗರಿಗೆ ಹೆಮ್ಮೆ ಎಂದು. ಟಿಪ್ಪು ಕೊಡಗಿನಲ್ಲಿ 12000 ಜನರನ್ನು ಮತಾಂತರ ಮಾಡಿದ್ದ ಎಂದು ಅಡ್ಡಂಡ ಕಾರ್ಯಪ್ಪ ಆರೋಪಿಸಿದರು.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications