ಗಂಗೆಯಾಯ್ತು, ಈಗ ಕಾವೇರಿ ಸರದಿ; ನದಿ ತಟದಲ್ಲಿ ಶವ ಸಂಸ್ಕಾರ!
ಮೈಸೂರು, ಜುಲೈ 3 : ಗಂಗಾ ನದಿಯಾಯ್ತು, ಈಗ ಕಾವೇರಿಯ ಸರದಿ. ಹೆಣಗಳನ್ನು ಸಂಗಮ ಕ್ಷೇತ್ರದ ಬಳಿ ಸುಟ್ಟಲ್ಲಿ ಮೋಕ್ಷ ಪ್ರಾಪ್ತಿ ಎಂಬ ಮಾತುಂಟು. ಅದಕ್ಕೆ ಜ್ವಲಂತ ಸಾಕ್ಷಿ , ಕಾವೇರಿಯಲ್ಲಿ ಸುಡುತ್ತಿರುವ ಹೆಣ.
ಮೈಸೂರಿನ ಕಾವೇರಿ ನದಿ ಈಗ ಗಂಗಾ ನದಿಯಾಗಿದೆ. ಗಂಗಾ ನದಿ ತೀರದಲ್ಲಿ ಹೆಣ ಸುಡುವಂತೆ ತಲಕಾಡಿನ ಕಾವೇರಿ ನದಿ ತೀರದಲ್ಲೂ ಹೆಣ ಸುಡುತ್ತಿರುವುದು ಬೆಳಕಿಗೆ ಬಂದಿದೆ.
ವಾರಾಂತ್ಯದಂದು ತಲಕಾಡಿಗೆ ಪ್ರವಾಸಿಗರು ಹೆಚ್ಚಾಗಿ ಆಗಮಿಸುತ್ತಾರೆ. ಪ್ರವಾಸಿಗರೇ ತಲಕಾಡಿನ ನದಿ ತೀರದಲ್ಲಿ ಹೆಣ ಸುಡುತ್ತಿರುವುದನ್ನು ಪ್ರವಾಸಿಗರೊಬ್ಬರು ವಿಡಿಯೋ ಮಾಡಿದ್ದಾರೆ. ನಂತರ ಸಾಮಾಜಿಕ ಜಾಲಾತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈಗ ಈ ವಿಡಿಯೋ ವೈರಲ್ ಆಗಿದೆ. ಜತೆಗೆ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಕಾವೇರಿ ನದಿ ದಡದ ಮೇಲಿರುವ ಪವಿತ್ರ ಯಾತ್ರಾ ಸ್ಥಳ ಹಾಗೂ ಪ್ರವಾಸಿಗರ ತಾಣವಾದ ತಲಕಾಡಿನ ಕಾವೇರಿ ನದಿಯ ಪಕ್ಕದಲ್ಲಿ ಹೆಣಗಳನ್ನು ಸುಡುವ ಮೂಲಕ ಕಾವೇರಿಯನ್ನು ಮಲೀನ ಮಾಡಲಾಗುತ್ತಿದೆ. ಜತೆಗೆ ಇದರಿಂದ ಪ್ರವಾಸಿಗರಿಗೆ ಕಿರಿಕಿರಿ ಉಂಟಾಗಿದೆ.
ಟಿ.ನರಸೀಪುರ ತಾಲೂಕಿನ ಪವಿತ್ರ ಯಾತ್ರಾಸ್ಥಳ ತಲಕಾಡು ಕಾವೇರಿ ನದಿಯ ಪಕ್ಕದಲ್ಲೇ ಇದೆ. ಈ ನದಿಯ ಪಕ್ಕದಲ್ಲಿ ಸತ್ತವರನ್ನು ಸುಟ್ಟರೆ ಅಸ್ತಿಗಳು ನದಿಯಲ್ಲಿ ಹರಿದು ಹೋಗಿ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ಭಾವನೆ ಇದೆ. ಈ ಕಾರಣದಿಂದ ಇಲ್ಲಿ ಹೆಣಗಳನ್ನು ಸುಡುತ್ತಾರೆ.
ನದಿ ತೀರದಲ್ಲಿ ಹೆಣ ಸುಡುತ್ತಿದ್ದರೂ ತಲಕಾಡು ಪೊಲೀಸರು ಮಾತ್ರ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಉದ್ಭವಿಸಿದೆ.
ಹೆಣ ಸುಡುವವರ ವಿರುದ್ಧ ಅಗತ್ಯ ಕ್ರಮ: ಡಿ.ರಂದೀಪ್
ತಲಕಾಡು ನದಿ ತೀರದಲ್ಲಿ ಶವ ಸುಡುತ್ತಿರುವ ವಿಚಾರ ನನಗೆ ತಿಳಿದಿರಲಿಲ್ಲ. ಈಗ ವಿಚಾರ ನನ್ನ ಗಮನಕ್ಕೆ ಬಂದಿದ್ದು, ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ತಿಳಿಸಿದ್ದಾರೆ.
"ಮುಂದೆ ಆ ಸ್ಥಳದಲ್ಲಿ ಹೆಣ ಸುಡಲು ಬಿಡುವುದಿಲ್ಲ. ಆ ಸ್ಥಳದ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಹೋಗಲಾಗುವುದು. ಮುಂದೆ ಇಂತಹ ಕೃತ್ಯ ನಡೆಯದಂತೆ ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಈಗಾಗಲೇ ತಹಶೀಲ್ದಾರ್ ಅವರಿಗೆ ಸೂಚಿಸಲಾಗಿದೆ," ಎಂದು ಹೇಳಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications