ನೋಟು ನಿಷೇಧದಿಂದ ಮೈಲಾಕ್ ಗೆ ಕೋಟ್ಯಂತರ ರುಪಾಯಿ ಆದಾಯ!
ಮೈಸೂರು, ಡಿಸೆಂಬರ್ 10: ಐನೂರು ಮತ್ತು ಸಾವಿರ ನೋಟಗಳು ಅಮಾನ್ಯವಾದ ಬಳಿಕ ಮೈಸೂರಿನ ಅರಗು ಮತ್ತು ಬಣ್ಣದ ಕಾರ್ಖಾನೆಗೆ ಕೋಟ್ಯಂತರ ರುಪಾಯಿ ಆದಾಯ ಹರಿದು ಬಂದಿದೆ. ಮೊದಲೆಲ್ಲ ಕೇವಲ ಚುನಾವಣೆಗಷ್ಟೆ ಸೀಮಿತವಾಗಿ ಮತದಾರರ ಬೆರಳಿಗೆ ಹಾಕಲು ಉಪಯೋಗಿಸುತ್ತಿದ್ದ ಶಾಯಿಯು ಈಗ ನೋಟು ವಿನಿಮಯದಲ್ಲೂ ಮಹತ್ತರ ಪಾತ್ರ ವಹಿಸುವುದರ ಜೊತೆಗೆ ಗಮನ ಸೆಳೆದಿದೆ.
ನೋಟು ವಿನಿಮಯದಲ್ಲಿ ಆಗುತ್ತಿರುವ ವಂಚನೆಯನ್ನು ತಡೆಯಲು ಗ್ರಾಹಕರಿಗೆ ಶಾಯಿ ಹಾಕುವ ವ್ಯವಸ್ಥೆಯನ್ನು ಜಾರಿಗೆ ತಂದಿದ್ದರಿಂದ ಸುಮಾರು 1.40 ಕೋಟಿ ರುಪಾಯಿಯ ದಾಖಲೆ ಆದಾಯ ಬಂದಿದೆ. ಹಾಗೆ ನೋಡಿದರೆ ಮೈಲಾಕ್ ನ ಶಾಯಿಗೆ ದೇಶ ಮಾತ್ರವಲ್ಲದೆ, ವಿದೇಶದಲ್ಲಿಯೂ ಬೇಡಿಕೆಯಿದೆ.[ಇಂಕು ತಯಾರಿಸಲು ಆರ್ ಬಿಐ ನೀಡಿದ ಹಣವೆಷ್ಟು?]

ಹಲವು ದೇಶಗಳು ಚುನಾವಣೆಗೆ ಬೇಕಾದ ಶಾಹಿಯನ್ನು ಮೈಸೂರಿನಿಂದಲೇ ಆಮದು ಮಾಡಿಕೊಳ್ಳುತ್ತಿವೆ. ಇದೀಗ ನೋಟು ವಿನಿಮಯದಲ್ಲೂ ಪ್ರಮುಖ ಪಾತ್ರ ವಹಿಸಿರುವುದು ಕಂಡು ಬಂದಿದೆ. 1937ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಈ ಕಾರ್ಖಾನೆ ಆರಂಭದ ದಿನಗಳಲ್ಲಿ ವೈವಿಧ್ಯಮಯ ಬಣ್ಣಗಳ ತಯಾರಿಕೆಗಷ್ಟೇ ಸೀಮಿತವಾಗಿತ್ತು. ಸ್ವಾತಂತ್ರ್ಯ ನಂತರ ಇದು ರಾಜ್ಯ ಸರಕಾರದ ಅಧೀನಕ್ಕೆ ಒಳಪಟ್ಟಿತು.
1951, 1957ರಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಿತಾದರೂ ಇದರಲ್ಲಿ ಒಬ್ಬರೇ ಹಲವು ಬಾರಿ ಮತ ಚಲಾಯಿಸಿದ ಆರೋಪ ಕೇಳಿ ಬಂದಿತ್ತು. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕೇಂದ್ರ ಚುನಾವಣಾ ಆಯೋಗ ಮತದಾರರ ಬೆರಳಿಗೆ ಕಪ್ಪು ಮಸಿ ಅಥವಾ ಶಾಯಿ ಹಾಕುವ ನಿರ್ಧಾರ ಕೈಗೊಂಡಿತು.
ಈ ನಿರ್ಧಾರದಿಂದ ಮೈಸೂರಿನ ಬಣ್ಣ ಮತ್ತು ಅರಗು ಕಾರ್ಖಾನೆಯ ಅದೃಷ್ಟದ ಬಾಗಿಲು ತಟ್ಟಿದಂತಾಯಿತು. ಆ ನಂತರ ಅಳಿಸಲಾಗದ ಶಾಯಿ ತಯಾರಿಸುವ ಜವಾಬ್ದಾರಿ ಹೊತ್ತ ಕಾರ್ಖಾನೆ 1962ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗೆ ಶಾಯಿ ಪೂರೈಸಿ, ಚುನಾವಣೆ ಇತಿಹಾಸದಲ್ಲಿ ಮೈಲುಗಲ್ಲು ಸ್ಥಾಪಿಸಿತು.[ಶಾಹಿ ತಯಾರಿಸಲು ಮೈಸೂರು ಪೈಂಟ್ಸ್ ಗೆ ಸೂಚನೆ]

ಆಗಿನಿಂದ ದೇಶದ ಯಾವುದೇ ಭಾಗದಲ್ಲಿ ಚುನಾವಣೆ ನಡೆದರೂ ಮೈಸೂರಿನಿಂದಲೇ ಕಪ್ಪು ಶಾಯಿಯನ್ನು ತರಿಸಿಕೊಳ್ಳುವ ಪರಿಪಾಠ ಆರಂಭವಾಯಿತು. ಉತ್ಪಾದನೆ ಆರಂಭಿಸಿದಂದಿನಿಂದ ಇಂದಿನವರೆಗೂ ಕಾರ್ಖಾನೆ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ.
ಈಗಲೂ ಈ ಕಪ್ಪು ಶಾಯಿ ಉತ್ಕೃಷ್ಟ ಗುಣಮಟ್ಟದಲ್ಲಿ ತಯಾರಾಗುತ್ತಿದೆ.
ಈ ಶಾಯಿ ಕನಿಷ್ಠ 48 ಗಂಟೆಗಳಿಂದ 30 ದಿನಗಳವರೆಗೆ ಅಚ್ಚಳಿಯದೆ ಉಳಿಯುತ್ತದೆ. ಇದು ವ್ಯಕ್ತಿಯ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ರಾಷ್ಟ್ರೀಯ ಭೌತಿಕ ಪ್ರಯೋಗಾಲಯ ದೃಢಪಡಿಸಿದೆ. 5 ಎಂಎಲ್ ಮತ್ತು 10 ಎಂಎಲ್ ನ ಬಾಟಲಿಗಳಲ್ಲಿ ತುಂಬಿ ಕಳಿಸಲಾಗುತ್ತಿದೆ. 5 ಎಂಎಲ್ ಬಾಟಲಿಯಲ್ಲಿ 500 ಮತ್ತು 10 ಎಂಎಲ್ ಬಾಟಲಿಯಲ್ಲಿ 800 ಮಂದಿಯ ಕೈಗೆ ಶಾಯಿ ಹಾಕಬಹುದಂತೆ.[ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!]
ದೇಶದಾದ್ಯಂತ ವಿವಿಧ ಬ್ಯಾಂಕ್ ಗಳಿಗೆ 1.20 ಲಕ್ಷ ಬಾಟಲಿಗಳನ್ನು ಕಳುಹಿಸಿಕೊಡಲಾಗಿದೆ. ಒಂದೇ ದಿನದಲ್ಲಿ 5 ಎಂಎಲ್ ಸುಮಾರು 22 ಸಾವಿರ ಬಾಟಲಿಗಳು ಮೈಸೂರು ಅರಗು ಮತ್ತು ಬಣ್ಣದ ಕಾರ್ಖಾನೆ (ಮೈಲಾಕ್)ಯಿಂದ ಸಾಗಾಟವಾಗಿರುವುದು ದಾಖಲೆಯಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications