ಕೃಷಿ ಸಚಿವ ಬಿ.ಸಿ ಪಾಟಿಲ್ ರೈತರ ಕ್ಷಮೆಯಾಚಿಸಬೇಕು: ಸಾ.ರಾ ಮಹೇಶ್ ಆಗ್ರಹ
ಮೈಸೂರು, ಜನವರಿ 20: ರೈತರ ಆತ್ಮಹತ್ಯೆ ಬಗ್ಗೆ ಲಘುವಾಗಿ ಮಾತನಾಡಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿಕೆಯನ್ನು ಖಂಡಿಸಿರುವ ಶಾಸಕ ಸಾ.ರಾ.ಮಹೇಶ್, ಕೃಷಿ ಸಚಿವರು ಕೂಡಲೇ ರೈತರ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕೃಷಿ ಇಲಾಖೆಯಲ್ಲಿ ವರ್ಗಾವಣೆ ಹೆಸರಿನಲ್ಲಿ ಸಚಿವರು, ಅಧಿಕಾರಿಗಳಿಂದ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಇಲಾಖೆ ಸಿಬ್ಬಂದಿಯೇ ಮುಖ್ಯಮಂತ್ರಿಗಳಿಗೆ ಅವರಿಗೆ ಪತ್ರ ಬರೆದಿದ್ದಾರೆ. ಸಮಸ್ಯೆ ಸರಿಪಡಿಸದಿದ್ದರೆ ಸಾಮೂಹಿಕವಾಗಿ ದಯಾಮರಣಕ್ಕೆ ಅರ್ಜಿ ಸಲ್ಲಿಸುವುದಾಗಿ ಎಚ್ಚರಿಸಿದ್ದಾರೆ. ಈ ಭ್ರಷ್ಟಾಚಾರ ಆರೋಪ ಬಂದಿದ್ದು ಹೇಗೆ? ಇದು ಎಂಥ ದೌರ್ಬಲ್ಯ? ಎಂದು ಟೀಕಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳುವ ರೈತರು ದುರ್ಬಲ ಮನಸ್ಸಿನವರು ಎನ್ನುವ ಕೃಷಿ ಸಚಿವ ಬಿ.ಸಿ ಪಾಟೀಲರು, ತಮ್ಮ ಹಣದ ದೌರ್ಬಲ್ಯದ ಬಗ್ಗೆ ಏಕೆ ಮಾತಾಡುವುದಿಲ್ಲ? ರೈತನ ಸಂಕಷ್ಟದ ಪರಿಸ್ಥಿತಿಯನ್ನು ಗೇಲಿ ಮಾಡುವ ಬಿ.ಸಿ. ಪಾಟೀಲ್ ವರ್ತನೆಯೇ ದುರ್ಬಲ ಮನಸ್ಸಿನ ಪ್ರತೀಕ. ಅವರ ವರ್ತನೆ ಅಕ್ಷಮ್ಯ ಅಪರಾಧ. ಕೈಲಾದರೆ ರೈತರಿಗೆ ಒಳ್ಳೆದು ಮಾಡಿ, ಹೀಗೆಲ್ಲ ಮಾತನಾಡಬೇಡಿ ಎಂದಿದ್ದಾರೆ.

ಬಿ.ಸಿ. ಪಾಟೀಲ್ ಮೊದಲು ರೈತರ ಕ್ಷಮೆ ಕೇಳಬೇಕು. ಕೃಷಿ ಇಲಾಖೆಯ ಸಿಬ್ಬಂದಿಯೇ ಮಾಡಿರುವ ಲಂಚದ ಆರೋಪದ ಕುರಿತು ಸ್ಪಷ್ಟನೆ ನೀಡಬೇಕು. ಸರ್ಕಾರ ಈ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಬೇಕು. ಭ್ರಷ್ಟಾಚಾರ ಸಾಬೀತಾದರೆ ಬಿ.ಸಿ. ಪಾಟೀಲ್ ಅವರನ್ನು ಮುಲಾಜಿಲ್ಲದೇ ಮಂತ್ರಿಮಂಡಲದಿಂದ ಹೊರದಬ್ಬಬೇಕು ಎಂದು ಆಗ್ರಹಿಸಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications