ಮೈಸೂರು ಅಪೋಲೋ ಆಸ್ಪತ್ರೆಗೆ ಬಂತು ಏರ್ ಆಂಬುಲೆನ್ಸ್
ಮೈಸೂರು, ಜೂನ್ 29: ಮೈಸೂರಿನ ಅಪೋಲೋ ಆಸ್ಪತ್ರೆಯು ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಒಂದೆಡೆಯಿಂದ ಮತ್ತೊಂದೆಡೆಗೆ ಕರೆದೊಯ್ಯಲು ಏರ್ ಆಂಬುಲೆನ್ಸ್ ಸೇವೆಯನ್ನು ಆರಂಭಿಸಿದೆ. ಈ ಸೇವೆಯಿಂದ ಬೆಂಗಳೂರು, ಹೈದರಾಬಾದ್ ಮತ್ತು ಚೆನ್ನೈನ ಆಸ್ಪತ್ರೆಗೆ ಕರೆದೊಯ್ಯಲು ಅನುಕೂಲವಾಗಲಿದೆ.
ಇದರಿಂದ ಕಡಿಮೆ ಅವಧಿಯಲ್ಲಿ ತುರ್ತಾಗಿ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ನೀಡಲು ಸಾಧ್ಯವಾಗಲಿದೆ. ಅಪಘಾತದ ಸಂದರ್ಭದಲ್ಲಿ ಹೊರ ವಲಯದಿಂದ ರೋಗಿಯನ್ನು ಆಸ್ಪತ್ರೆಗೆ ಕರೆತರಲು ಇದರಿಂದ ಅನುಕೂಲವಾಗಲಿದ್ದು, ಅಮೂಲ್ಯ ಜೀವ ಉಳಿಸಲು ಸಾಧ್ಯವಾಗಲಿದೆ.

ಏರ್ ಆಂಬುಲೆನ್ಸ್ ಸೇವೆಯು ಬೆಂಗಳೂರು, ಹೈದರಾಬಾದ್ ಚೆನ್ನೈನಲ್ಲಿದ್ದ ಸೇವೆಯನ್ನು ಈಗ ಮೈಸೂರು, ಮಧುರೈ, ಕಾಕಿನಾಡ, ಕಾರೈಕುಡಿ, ಕರೂರು, ತಿರುಚಿ ಮತ್ತು ವೈಜಾಗ್ ಅಂಥ ನಗರಗಳಿಗೂ ವಿಸ್ತರಿಸಲಾಗಿದೆ. ಅಪೋಲೋ ಆಸ್ಪತ್ರೆಯಲ್ಲಿ ಮೊದಲಿಗೆ 2003ರಲ್ಲಿ ಏರ್ ಆಂಬುಲೆನ್ಸ್ ತುರ್ತು ಸೇವೆಯನ್ನು ಆರಂಭಿಸಿತು. ಬಳಿಕ ಇದನ್ನು ದೆಹಲಿ, ಬೆಂಗಳೂರಿಗೆ ಕ್ರಮವಾಗಿ 2004 ಮತ್ತು 2007ರಲ್ಲಿ ವಿಸ್ತರಿಸಲಾಯಿತು.
ಪ್ರತಿಯೊಂದು ಅಪೋಲೋ ಏರ್ ಆಂಬುಲೆನ್ಸ್ ನಲ್ಲಿ ತುರ್ತು ಸಂದರ್ಭದಲ್ಲಿ ಸೇವೆಗೆ ಅತ್ಯಾಧುನಿಕ ಸೌಲಭ್ಯ, ಇಬ್ಬರು ಪೈಲಟ್ ಗಳು, ಇಬ್ಬರು ಅರೆವೈದ್ಯಕೀಯ ಸಿಬ್ಬಂದಿ, ಅರ್ಹ, ತುರ್ತು ಚಿಕಿತ್ಸಾ ದೈಹಿಕ ಆರೋಗ್ಯ ತಜ್ಞರು, ಅರವೈದ್ಯಕೀಯ ಸಿಬ್ಬಂದಿ ಸೇರಿ ಪೂರ್ಣ ಪ್ರಮಾಣದ ವೈದ್ಯಕೀಯ ಸಿಬ್ಬಂದಿ ಇದೆ.
ಇವರಿಗೆ ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆ ಪೂರ್ವ ಸೇವೆ ಕುರಿತು ತರಬೇತಿ ನೀಡಲಾಗಿರುತ್ತದೆ. ಈ ಸೇವೆ ಬೆಂಗಳೂರು ಮೂಲದ ಏರ್ ಏವಿಯೇಟರ್ಸ್ ರಕ್ಷಣಾ ಘಟಕದ ನೆರವಿನಲ್ಲಿ ನಡೆಯುತ್ತಿದೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications