ಮೈಸೂರಿನಲ್ಲಿಂದು ಏರ್ ಶೋ ರಿಹರ್ಸಲ್, ನಾಳೆ ಪ್ರದರ್ಶನಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
ಮೈಸೂರು, ಅಕ್ಟೋಬರ್, 22: ಬಾನಂಗಳದಲ್ಲಿ ಚಿತ್ತಾರ ಮೂಡಿಸುವ ಏರ್ ಶೋಗೆ ಅಕ್ಟೋಬರ್ 22ರಂದು ರಿಹರ್ಸಲ್ ಹಾಗೂ ಅಕ್ಟೋಬರ್ 23ರಂದು ಪ್ರದರ್ಶನ ನಡೆಸಲು ಜಿಲ್ಲಾಡಳಿ ಸಕಲ ಸಿದ್ಧತೆ ಕೈಗೊಂಡಿದೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿ ಏರ್ ಶೋ ನಡೆಯಲಿದೆ. ಏರೊ ಬ್ಯಾಟಿಕ್ ಚಟುವಟಿಕೆಗಳನ್ನು ಆಯೋಜಿಸಲು ಭಾರತೀಯ ವಾಯು ಪಡೆಯಲ್ಲಿ ಪ್ರತ್ಯೇಕ ತಂಡವಿದ್ದು, ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ 2ನೇ ಸ್ಥಾನದಲ್ಲಿದೆ. ಈ ತಂಡವು ಮೈಸೂರಿನಲ್ಲಿ ಏರ್ ಶೋ ನಡೆಸಿಕೊಡಲಿದೆ. ಮೈಸೂರಿನ ಬನ್ನಿ ಮಂಟಪ ಮೈದಾನ ಪೂರ್ವಕ್ಕೆ ಮುಖ ಮಾಡಿಕೊಂಡಿರುವುದರಿಂದ ಮಧ್ಯಾಹ್ನದ ನಂತರ ಶೋ ಮಾಡಬೇಕೆಂದು ಪ್ಲಾನ್ ಮಾಡಲಾಗುತ್ತಿದೆ.

ಆದರೆ, ಯಾವ ದಿನ ಮಾಡಬೇಕೆಂದು ನಿಗದಿಯಾಗಿಲ್ಲ. ರಕ್ಷಣೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ, ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ಇನ್ನು ಮೈಸೂರು ದಸರೆಯಲ್ಲಿ ಏರ್ ಶೋ ಆಯೋಜನೆಗೆ ಅನುಮತಿ ನೀಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರಕಾರವನ್ನು ಮುಂಚಿತವಾಗಿಯೇ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರು ಭಾರತೀಯ ವಾಯು ಸೇನೆಯಿಂದ ಏರ್ ಶೋ ನಡೆಸಲು ಅನುಮತಿ ನೀಡಿದ್ದಾರೆ.
ಕಳೆದ ಬಾರಿ ಏರ್ ಶೋ ನಡೆದ ಸಂದರ್ಭದಲ್ಲಿ ಉಂಟಾದ ವ್ಯತ್ಯಾಸಗಳು ಈ ಬಾರಿ ಮರುಕಳಿಸದಂತೆ ಮುಂಜಾಗ್ರತೆ ವಹಿಸಬೇಕೆಂಬುದು ನಾಗರಿಕರು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸುತ್ತಿದ್ದು, ಅವರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು. ಬೆಂಗಳೂರು ಮೂಲದ ಏರ್ ಬೇಸ್ನಿಂದ ಕ್ಯಾಪ್ಟನ್ ಗ್ರೋವರ್ ಕೂಡ ಶನಿವಾರ ಮೈಸೂರಿಗೆ ಆಗಮಿಸುತ್ತಿದ್ದಾರೆ. ಅವರು ಮತ್ತೊಮ್ಮೆ ಸ್ಥಳ ಪರಿಶೀಲನೆ ಮಾಡಲಿದ್ದಾರೆ.
ಅದಾದ ಬಳಿಕ ಏರ್ ಶೋ ಆಯೋಜನೆ ಹಾಗೂ ಮೈಸೂರಿನಲ್ಲಿ ಈ ಬಾರಿ ಯಾವ್ಯಾಯ ಕಾರ್ಯಕ್ರಮ ಆಯೋಜಿಸಬೇಕೆಂಬುದರ ಬಗ್ಗೆ ನಿರ್ಧರಿಸಲಾಗುತ್ತದೆ.ಪ್ರತಿ ಬಾರಿಯೂ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. 2019ರಲ್ಲಿ ಮೈಸೂರಿನಲ್ಲಿ ದಸರಾ ಅಂಗವಾಗಿ ನಡೆದ ಏರ್ ಶೋನಲ್ಲಿ ದರಿಂಗ್ ಪೆಟಲ್ ಡ್ರಾಪಿಂಗ್, ಯುದ್ಧ ವಿಮಾನಗಳಿಂದ ಭಾರತೀಯ ವಾಯು ಸೇನೆ ಯೋಧರು ಜಿಗಿದು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಪ್ಯಾರಾಚೂಟ್ಗಳ ಮೂಲಕ ಬಂದಿಳಿಯುವುದು, ಯುದ್ಧ ವಿಮಾನದಿಂದ ಯೋಧರು ಹಗ್ಗ ಹಿಡಿದುಕೊಂಡು ಕೆಳಗೆ ಇಳಿದು ಯುದ್ಧ ಮಾಡುವ ಪ್ರದರ್ಶನ ನಡೆದಿತ್ತು.
ಹೆಲಿಕಾಪ್ಟರ್ ಮೂಲಕ ಬಿಡಿ ಗುಲಾಬಿ ಹೂಗಳನ್ನು ಮೈದಾನಕ್ಕೆ ಚೆಲ್ಲುವ ಪೆಟಲ್ ರಾಪಿಂಗ್ ಮಾಡಲಾಯಿತು. ಈ ಬಾರಿ ಮತ್ತಷ್ಟು ವಿಭಿನ್ನ ಕಾರ್ಯಕ್ರಮಗಳು ಏರ್ ಶೋ ಆಸಕ್ತರ ಮನ ತಣಿಸಲಿವೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications