ಕೆಎಎಸ್ ಪರೀಕ್ಷೆ : ಮೈಸೂರಿನ ಐಶ್ವರ್ಯಾಗೆ ಪ್ರಥಮ ಸ್ಥಾನ
ಬೆಂಗಳೂರಿನಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಸಿಸೆಂಸ್ಟ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮೈಸೂರು ಮೂಲದ ಐಶ್ವರ್ಯಾ ಆರ್. ಕೆಎಎಸ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಮೈಸೂರು , ಏಪ್ರಿಲ್ 24 : ಕರ್ನಾಟಕ ಲೋಕಸೇವಾ ಆಯೋಗವು 464 ಗೆಜೆಟೆಡ್ ಪ್ರೊಬೇಷನರಿ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ ಮೈಸೂರಿನ ಐಶ್ವರ್ಯಾ ಆರ್. ಮೊದಲ ಸ್ಥಾನ ಪಡೆದಿದ್ದಾರೆ.
ಬೆಂಗಳೂರಿನಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಸಿಸೆಂಸ್ಟ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಐಶ್ವರ್ಯಾ ಆರ್. ಅವರಿಗೆ ಕೆಎಎಸ್ ಮಾಡಿ ಜನರ ಸೇವೆ ಮಾಡಬೇಕೆಂದು ದೊಡ್ಡ ಕನಸಾಗಿತ್ತು. ಈಗ ಆ ಕನಸು ನನಸಾಗುತ್ತಿದೆ.[ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಆರ್ ಮೂರ್ತಿ ಆಯ್ಕೆ]

ಮೊದಲ ರ್ಯಾಂಕ್ ಗಳಿಸಿರುವ ಐಶ್ವರ್ಯ, ತಮ್ಮ ಸಾಧನೆಗೆ ಅತೀವ ಹರ್ಷ ವ್ಯಕ್ತಪಡಿಸಿದ್ದಾರೆ. 'ಕೆಎಎಸ್ ಅಧಿಕಾರಿಯಾಗಿ ಜನರ ಸೇವೆ ಮಾಡಬೇಕೆಂದು ಕನಸು ಕಂಡಿದ್ದೆ. ಆ ಕನಸು ಇಂದು ಸಾಕಾರಗೊಂಡಿದೆ. ಇದಕ್ಕೆ ನನ್ನ ಪಾಲಕರು, ಪತಿಯ ಪ್ರೋತ್ಸಾಹವೇ ಕಾರಣ. ಕೆಎಎಸ್ ಪರೀಕ್ಷೆ ಎದುರಿಸಲು ಸತತ 3 ವರ್ಷ ಶ್ರಮಿಸಿದ್ದೇನೆ' ಎಂದು ತಮ್ಮ ಪರೀಕ್ಷಾ ತಯಾರಿ ಕುರಿತು ಮಾಹಿತಿ ಹಂಚಿಕೊಂಡರು.
ಸಾಕಷ್ಟು ವಿವಾದ ಹಾಗೂ ಸುಧಾರಣೆಯ ನಂತರ ಕೆಪಿಎಸ್ಸಿ ನಡೆಸಿದ್ದ ಮೊದಲ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಇದಾಗಿದ್ದು, ಅಭ್ಯರ್ಥಿಗಳ ಸತತ ಹೋರಾಟದ ಬಳಿಕ ಮುಖ್ಯ ಪರೀಕ್ಷೆ ಫಲಿತಾಂಶದ 11 ತಿಂಗಳ ನಂತರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕೆಪಿಎಸ್ಸಿ ಪ್ರಕಟಿಸಿದೆ. ಬಾಗಲಕೋಟೆಯ ರಮೇಶ್ ಕೋಲಾರ್ 2ನೇ ಸ್ಥಾನ ಹಾಗೂ ಬೆಳಗಾವಿಯ ಸಂತೋಷ್ ಕಾಮಗೌಡ 3ನೇ rank ಗಳಿಸಿದ್ದಾರೆ.
ನಾನಾ ಇಲಾಖೆಗಳ 14 ಸ್ಥರದ 464 ಹುದ್ದೆಗಳಿಗೆ 2014ರಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. 2015ರಲ್ಲಿ ಮುಖ್ಯ ಪರೀಕ್ಷೆ ನಡೆಸಿ, 2016ರ ಮೇನಲ್ಲಿ ಸಂದರ್ಶನಕ್ಕೆ ಅರ್ಹರಾದ ಪಟ್ಟಿಯನ್ನು 1:3 ಅನುಪಾತದಲ್ಲಿ ಅಂತಿಮಗೊಳಿಸಿ ದಾಖಲಾತಿ ಪರಿಶೀಲನೆ ನಡೆಸಲಾಗಿತ್ತು. ಸುಮಾರು 9 ತಿಂಗಳ ವಿಳಂಬದ ಬಳಿಕ ಫೆಬ್ರವರಿಯಲ್ಲಿ ಸಂದರ್ಶನ ನಡೆಸಿ, ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications