ಮೈಸೂರಿಗರಿಗೂ ಕೋಟಿ ರೂ.ವಂಚಿಸಿದ ಆಂಬಿಡೆಂಟ್ ಕಂಪೆನಿ
ಮೈಸೂರು, ನವೆಂಬರ್. 15: ರಾಜ್ಯಾದ್ಯಂತ ಭಾರೀ ಸದ್ದು ಮಾಡಿರುವ ಬಹುಕೋಟಿ ವಂಚನೆಯ ಆಂಬಿಡೆಂಟ್ ಪ್ರಕರಣ ಮೈಸೂರಿನಲ್ಲಿಯೂ ಧ್ವನಿಸಿದ್ದು, ಹೂಡಿಕೆದಾರರು ಕೋಟ್ಯಂತರ ರೂ. ಕಳೆದುಕೊಂಡಿರುವುದು ಬೆಳಕಿಗೆ ಬಂದಿದೆ.
ನಗರದ ರಾಜೀವನಗರ ಮೂರನೇ ಕ್ರಾಸ್ ನಂ.836ರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ, ಆಂಬಿಡೆಂಟ್ ಮಾರ್ಕೆಟಿಂಗ್ ಕಂಪನಿ ಸಾರ್ವಜನಿಕರಿಂದ 100 ಕೋಟಿ ರೂ.ಗಳಷ್ಟು ಠೇವಣಿಗಳನ್ನು ಪಡೆದು ಮೋಸ ಮಾಡಿದೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಕುರಿತು ನಗರದ ಪತ್ರಕರ್ತರ ಭವನದಲ್ಲಿ ಅರ್ಜಿದಾರರ ಪರ ವಕೀಲ ಎನ್.ಎಸ್.ಹರೀಶ್ ಕುಮಾರ್ ಮಾತನಾಡಿ, ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಬೆಂಗಳೂರಿನ ಸೈಯದ್ ಫರೀದ್, ಇರ್ಫಾನ್ ಮೈಸೂರಿನ ಖಿಜರ್ ಮತ್ತು ಬೆಂಗಳೂರಿನ ರಾಜ್ ಮಲಯಾ ಸೇರಿ ನಾಲ್ವರ ವಿರುದ್ಧ ದೂರು ದಾಖಲಿಸಿರುವುದಾಗಿ ತಿಳಿಸಿದರು.

ಕಳೆದ ವರ್ಷವಷ್ಟೇ ಮೈಸೂರಿನಲ್ಲಿ ಕಚೇರಿ ತೆರೆದ ಅಂಬಿಡೆಂಟ್ ಕಂಪನಿಯವರು ಕೆಲವೇ ತಿಂಗಳುಗಳಲ್ಲಿ ಕೋಟ್ಯಂತರ ರೂ. ಠೇವಣಿಗಳನ್ನು ಪಡೆದಿದ್ದಾರೆ. ಕನಿಷ್ಠ 1 ಲಕ್ಷ ರೂ. ತೊಡಗಿಸಿದರೆ ವಾರಕ್ಕೆ 9ರಿಂದ 11 ಸಾವಿರ ಲಾಭಗಳಿಸಬಹುದು ಎಂದು ನಂಬಿಸಿದ್ದಾರೆ. ಅದರಂತೆ 15 ಲಕ್ಷ ರೂ.ಗಳಿಂದ 45 ಲಕ್ಷದವರೆಗೆ ಹಣ ತೊಡಗಿಸಿದ್ದಾರೆ.
ಕೆಲವೇ ತಿಂಗಳಲ್ಲಿ 1500 ಮಂದಿ ಸದಸ್ಯರನ್ನು ಮಾಡಿಕೊಂಡು, ಸುಮಾರು 50 ರಿಂದ 100 ಕೋಟಿ ರೂ.ವರೆಗೂ ಸಂಗ್ರಹಿಸಿ ವಂಚನೆ ಮಾಡಲಾಗಿದೆ ಎಂದು ಅವರು ಆರೋಪಿಸಿದರು. ಆರೋಪಿಗಳು ಸಾರ್ವಜನಿಕರಿಂದ ಸಂಗ್ರಹಿಸಿದ ಹಣವನ್ನು ಬಿಟ್ ಕಾಯಿನ್ ಗೆ ಹಾಕಿ ಮೋಸ ಮಾಡಿದ್ದಾರೆ. ಅನೇಕರು ತಮ್ಮ ನಿವೃತ್ತಿ ವೇತನವನ್ನೂ ಪಾವತಿಸಿದ್ದಾರೆ.
ಮಕ್ಕಳ ಮದುವೆ ಮಾಡಲು, ಮನೆ ನಿರ್ಮಿಸಲು ಇಟ್ಟಿದ್ದ ಹಣವನ್ನು ಈ ಯೋಜನೆಯಲ್ಲಿ ತೊಡಗಿಸಿ ಮೋಸ ಹೋಗಿದ್ದಾರೆ. ಇವರ ನೆರವಿಗೆ ತನಿಖಾ ಸಂಸ್ಥೆಗಳು ಮುಂದಾಗಬೇಕು. ಬಹುತೇಕ ಮುಸ್ಲಿಂ ಬಡಾವಣೆಗಳನ್ನೇ ಗುರಿಯಾಗಿಸಿ ಬಡವರನ್ನು ವಂಚಿಸಲಾಗಿದೆ.
ಆರೋಪಿ ಫರೀದ್ ಗೆ ಸಂತ್ರಸ್ತರು ನೆಫ್ಟ್ ಮೂಲಕವೇ ಹಣ ವರ್ಗಾವಣೆ ಮಾಡಿದ್ದು, ತನಿಖಾ ಸಂಸ್ಥೆಗಳು ಅವರವರ ಹಣವನ್ನು ಕೂಡಲೇ ಅದೇ ಖಾತೆಗೆ ಹಿಂದಿರುಗಿಸಬೇಕು.
ಮುಸ್ಲಿಂ ಬಡ ಕುಟುಂಬಗಳನ್ನೇ ಗುರಿಯಾಗಿರಿಸಿಕೊಂಡು ಎರಡು ಸಾವಿರ ಮಂದಿಯಿಂದ 50ರಿಂದ ನೂರು ಕೋಟಿ ರೂ.ಗಳವರೆಗೆ ಹಣ ಸಂಗ್ರಹಿಸಿ ವಂಚಿಸಲಾಗಿದೆ. ಈ ನಡುವೆ ತಮ್ಮ ಹೋರಾಟಕ್ಕೆ ನಗರ ಪೊಲೀಸರು ಸಾಕಷ್ಟು ಪೂರಕವಾಗಿ ಸ್ಪಂದಿಸುತ್ತಿದ್ದು, ಸಂಬಂಧಿಸಿದ ಇತರೆ ಇಲಾಖೆಗಳು ಸಂತ್ರಸ್ತರಿಗೆ ಹಣ ವಾಪಸಾಗುವಂತೆ ನೋಡಿಕೊಳ್ಳಬೇಕಾಗಿದೆ ಎಂದು ವಕೀಲರು ಮನವಿ ಮಾಡಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications