ಮೈಸೂರಿಗರಿಗೂ ಕೋಟಿ ರೂ.ವಂಚಿಸಿದ ಆಂಬಿಡೆಂಟ್ ಕಂಪೆನಿ
ಮೈಸೂರು, ನವೆಂಬರ್. 15: ರಾಜ್ಯಾದ್ಯಂತ ಭಾರೀ ಸದ್ದು ಮಾಡಿರುವ ಬಹುಕೋಟಿ ವಂಚನೆಯ ಆಂಬಿಡೆಂಟ್ ಪ್ರಕರಣ ಮೈಸೂರಿನಲ್ಲಿಯೂ ಧ್ವನಿಸಿದ್ದು, ಹೂಡಿಕೆದಾರರು ಕೋಟ್ಯಂತರ ರೂ. ಕಳೆದುಕೊಂಡಿರುವುದು ಬೆಳಕಿಗೆ ಬಂದಿದೆ.
ನಗರದ ರಾಜೀವನಗರ ಮೂರನೇ ಕ್ರಾಸ್ ನಂ.836ರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ, ಆಂಬಿಡೆಂಟ್ ಮಾರ್ಕೆಟಿಂಗ್ ಕಂಪನಿ ಸಾರ್ವಜನಿಕರಿಂದ 100 ಕೋಟಿ ರೂ.ಗಳಷ್ಟು ಠೇವಣಿಗಳನ್ನು ಪಡೆದು ಮೋಸ ಮಾಡಿದೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಕುರಿತು ನಗರದ ಪತ್ರಕರ್ತರ ಭವನದಲ್ಲಿ ಅರ್ಜಿದಾರರ ಪರ ವಕೀಲ ಎನ್.ಎಸ್.ಹರೀಶ್ ಕುಮಾರ್ ಮಾತನಾಡಿ, ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಬೆಂಗಳೂರಿನ ಸೈಯದ್ ಫರೀದ್, ಇರ್ಫಾನ್ ಮೈಸೂರಿನ ಖಿಜರ್ ಮತ್ತು ಬೆಂಗಳೂರಿನ ರಾಜ್ ಮಲಯಾ ಸೇರಿ ನಾಲ್ವರ ವಿರುದ್ಧ ದೂರು ದಾಖಲಿಸಿರುವುದಾಗಿ ತಿಳಿಸಿದರು.

ಕಳೆದ ವರ್ಷವಷ್ಟೇ ಮೈಸೂರಿನಲ್ಲಿ ಕಚೇರಿ ತೆರೆದ ಅಂಬಿಡೆಂಟ್ ಕಂಪನಿಯವರು ಕೆಲವೇ ತಿಂಗಳುಗಳಲ್ಲಿ ಕೋಟ್ಯಂತರ ರೂ. ಠೇವಣಿಗಳನ್ನು ಪಡೆದಿದ್ದಾರೆ. ಕನಿಷ್ಠ 1 ಲಕ್ಷ ರೂ. ತೊಡಗಿಸಿದರೆ ವಾರಕ್ಕೆ 9ರಿಂದ 11 ಸಾವಿರ ಲಾಭಗಳಿಸಬಹುದು ಎಂದು ನಂಬಿಸಿದ್ದಾರೆ. ಅದರಂತೆ 15 ಲಕ್ಷ ರೂ.ಗಳಿಂದ 45 ಲಕ್ಷದವರೆಗೆ ಹಣ ತೊಡಗಿಸಿದ್ದಾರೆ.
ಕೆಲವೇ ತಿಂಗಳಲ್ಲಿ 1500 ಮಂದಿ ಸದಸ್ಯರನ್ನು ಮಾಡಿಕೊಂಡು, ಸುಮಾರು 50 ರಿಂದ 100 ಕೋಟಿ ರೂ.ವರೆಗೂ ಸಂಗ್ರಹಿಸಿ ವಂಚನೆ ಮಾಡಲಾಗಿದೆ ಎಂದು ಅವರು ಆರೋಪಿಸಿದರು. ಆರೋಪಿಗಳು ಸಾರ್ವಜನಿಕರಿಂದ ಸಂಗ್ರಹಿಸಿದ ಹಣವನ್ನು ಬಿಟ್ ಕಾಯಿನ್ ಗೆ ಹಾಕಿ ಮೋಸ ಮಾಡಿದ್ದಾರೆ. ಅನೇಕರು ತಮ್ಮ ನಿವೃತ್ತಿ ವೇತನವನ್ನೂ ಪಾವತಿಸಿದ್ದಾರೆ.
ಮಕ್ಕಳ ಮದುವೆ ಮಾಡಲು, ಮನೆ ನಿರ್ಮಿಸಲು ಇಟ್ಟಿದ್ದ ಹಣವನ್ನು ಈ ಯೋಜನೆಯಲ್ಲಿ ತೊಡಗಿಸಿ ಮೋಸ ಹೋಗಿದ್ದಾರೆ. ಇವರ ನೆರವಿಗೆ ತನಿಖಾ ಸಂಸ್ಥೆಗಳು ಮುಂದಾಗಬೇಕು. ಬಹುತೇಕ ಮುಸ್ಲಿಂ ಬಡಾವಣೆಗಳನ್ನೇ ಗುರಿಯಾಗಿಸಿ ಬಡವರನ್ನು ವಂಚಿಸಲಾಗಿದೆ.
ಆರೋಪಿ ಫರೀದ್ ಗೆ ಸಂತ್ರಸ್ತರು ನೆಫ್ಟ್ ಮೂಲಕವೇ ಹಣ ವರ್ಗಾವಣೆ ಮಾಡಿದ್ದು, ತನಿಖಾ ಸಂಸ್ಥೆಗಳು ಅವರವರ ಹಣವನ್ನು ಕೂಡಲೇ ಅದೇ ಖಾತೆಗೆ ಹಿಂದಿರುಗಿಸಬೇಕು.
ಮುಸ್ಲಿಂ ಬಡ ಕುಟುಂಬಗಳನ್ನೇ ಗುರಿಯಾಗಿರಿಸಿಕೊಂಡು ಎರಡು ಸಾವಿರ ಮಂದಿಯಿಂದ 50ರಿಂದ ನೂರು ಕೋಟಿ ರೂ.ಗಳವರೆಗೆ ಹಣ ಸಂಗ್ರಹಿಸಿ ವಂಚಿಸಲಾಗಿದೆ. ಈ ನಡುವೆ ತಮ್ಮ ಹೋರಾಟಕ್ಕೆ ನಗರ ಪೊಲೀಸರು ಸಾಕಷ್ಟು ಪೂರಕವಾಗಿ ಸ್ಪಂದಿಸುತ್ತಿದ್ದು, ಸಂಬಂಧಿಸಿದ ಇತರೆ ಇಲಾಖೆಗಳು ಸಂತ್ರಸ್ತರಿಗೆ ಹಣ ವಾಪಸಾಗುವಂತೆ ನೋಡಿಕೊಳ್ಳಬೇಕಾಗಿದೆ ಎಂದು ವಕೀಲರು ಮನವಿ ಮಾಡಿದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications