ಕೃಷ್ಣ ಶಿಲೆಯಲ್ಲಿ ತಯಾರಾದ ರೆಬೆಲ್ ಸ್ಟಾರ್ ಅಂಬರೀಶ್ ಪುತ್ಥಳಿ
ಮೈಸೂರು, ಫೆಬ್ರವರಿ 28:ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ಥಳಿಯೊಂದು ಮಲ್ಲಿಗೆ ನಗರಿ ಮೈಸೂರಿನಲ್ಲಿ ಸದ್ದಿಲ್ಲದೇ ನಿರ್ಮಾಣವಾಗಿದೆ. ಖ್ಯಾತ ಶಿಲ್ಪ ಕಲಾವಿದ ಅರುಣ್ ಯೋಗಿರಾಜ್ ಈ ಪುತ್ಥಳಿ ನಿರ್ಮಿಸಿದ್ದಾರೆ. ಏಕಶಿಲೆಯಲ್ಲಿ ಮೂಡಿ ಬಂದಿರುವ ಈ ಪುತ್ಥಳಿಯು ಅಂಬರೀಶ್ ಅವರ ಹುಟ್ಟೂರು ಮಂಡ್ಯ ಜಿಲ್ಲೆ ದೊಡ್ಡರಸಿನಕೆರೆಯಲ್ಲಿ ಸ್ಥಾಪನೆಯಾಗಲಿದೆ.
ಈ ಹಿಂದೆ ರಾಮಕೃಷ್ಣ ಪರಮಹಂಸರ ಪ್ರತಿಮೆ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುತ್ಥಳಿ, ಹಾಗೆಯೇ ಜಯಚಾಮರಾಜೇಂದ್ರ ಒಡೆಯರ್, ಶಿವಕುಮಾರ ಸ್ವಾಮೀಜಿ ಅವರ ಪ್ರತಿಮೆ ಹೀಗೆ ಹಲವು ಪ್ರಸಿದ್ಧ ವ್ಯಕ್ತಿಗಳ ಪ್ರತಿಮೆಯನ್ನು ನಿರ್ಮಿಸಿ ಹೆಸರು ಮಾಡಿರುವ ಅರುಣ್ ಯೋಗಿರಾಜ್ ಅವರು ಅಂಬರೀಶ್ ಅವರ ಪ್ರತಿಮೆಯನ್ನು ಅಚ್ಚುಕಟ್ಟಾಗಿ ರೂಪಿಸಿದ್ದಾರೆ.

ಅಂಬರೀಶ್ ಅವರ ಪುತ್ಥಳಿಯೂ ಗಿರಿಜಾ ಮೀಸೆ ಹಾಗೂ ಬಣ್ಣದ ಅಂಗಿಯನ್ನು ಧರಿಸಿದ ಜೀವಂತಿಕೆಯೊಂದಿಗೆ ಎದ್ದು ಕಾಣುವಂತಿದೆ. ಸುಮಾರು ಎರಡೂವರೆ ಅಡಿ ಎತ್ತರದ ಈ ಶಿಲ್ಪ ಎರಡು ಅಡಿ ಅಗಲವಿದೆ. 1.5 ಲಕ್ಷ ರೂ. ವೆಚ್ಚದಲ್ಲಿ ಪುತ್ಥಳಿಯನ್ನು ನಿರ್ಮಿಸಲಾಗಿದೆ.

ಕಳೆದ ಒಂದೂವರೆ ತಿಂಗಳ ಹಿಂದೆ ದೊಡ್ಡರಸಿನಕೆರೆ ಗ್ರಾಮಸ್ಥರು ಅರುಣ್ ಅವರನ್ನು ಭೇಟಿಯಾಗಿ ಪುತ್ಥಳಿ ನಿರ್ಮಿಸಲು ಮನವಿ ಮಾಡಿದ್ದರು. ಅದಕ್ಕೆ ಪೂರಕವಾಗಿ ಅರುಣ್ ಪುತ್ಥಳಿಯನ್ನು ನಿಗದಿತ ಅವಧಿಯಲ್ಲಿ ನಿರ್ಮಿಸಿಕೊಟ್ಟಿದ್ದಾರೆ ಯೋಗಿರಾಜ್.
ಅಂಬರೀಶ್ ಅವರ ಪುತ್ಥಳಿಯನ್ನು ಎಚ್. ಡಿ ಕೋಟೆಯಿಂದ ತರಲಾದ ಕೃಷ್ಣ ಶಿಲೆಯಲ್ಲಿ ನಿರ್ಮಾಣ ಮಾಡಲಾಗಿದೆ. ಇದರೊಟ್ಟಿಗೆ ನಾಳೆ ಮೈಸೂರಿನ ಮೆಗಾ ಡೈರಿಯಲ್ಲಿ ಅರುಣ್ ಅವರು ನಿರ್ಮಿಸಿದ ಕ್ಷೀರ ಕ್ರಾಂತಿ ಪಿತಾಮಹ ವರ್ಗೀಸ್ ಕುರಿಯನ್ ಅವರ ಪುತ್ಥಳಿಯನ್ನು ಮುಖ್ಯಮಮಂತ್ರಿ ಕುಮಾರಸ್ವಾಮಿಯವರು ಅನಾವರಣಗೊಳಿಸಲಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications