ಕೃಷ್ಣ ಶಿಲೆಯಲ್ಲಿ ತಯಾರಾದ ರೆಬೆಲ್ ಸ್ಟಾರ್ ಅಂಬರೀಶ್ ಪುತ್ಥಳಿ
ಮೈಸೂರು, ಫೆಬ್ರವರಿ 28:ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ಥಳಿಯೊಂದು ಮಲ್ಲಿಗೆ ನಗರಿ ಮೈಸೂರಿನಲ್ಲಿ ಸದ್ದಿಲ್ಲದೇ ನಿರ್ಮಾಣವಾಗಿದೆ. ಖ್ಯಾತ ಶಿಲ್ಪ ಕಲಾವಿದ ಅರುಣ್ ಯೋಗಿರಾಜ್ ಈ ಪುತ್ಥಳಿ ನಿರ್ಮಿಸಿದ್ದಾರೆ. ಏಕಶಿಲೆಯಲ್ಲಿ ಮೂಡಿ ಬಂದಿರುವ ಈ ಪುತ್ಥಳಿಯು ಅಂಬರೀಶ್ ಅವರ ಹುಟ್ಟೂರು ಮಂಡ್ಯ ಜಿಲ್ಲೆ ದೊಡ್ಡರಸಿನಕೆರೆಯಲ್ಲಿ ಸ್ಥಾಪನೆಯಾಗಲಿದೆ.
ಈ ಹಿಂದೆ ರಾಮಕೃಷ್ಣ ಪರಮಹಂಸರ ಪ್ರತಿಮೆ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುತ್ಥಳಿ, ಹಾಗೆಯೇ ಜಯಚಾಮರಾಜೇಂದ್ರ ಒಡೆಯರ್, ಶಿವಕುಮಾರ ಸ್ವಾಮೀಜಿ ಅವರ ಪ್ರತಿಮೆ ಹೀಗೆ ಹಲವು ಪ್ರಸಿದ್ಧ ವ್ಯಕ್ತಿಗಳ ಪ್ರತಿಮೆಯನ್ನು ನಿರ್ಮಿಸಿ ಹೆಸರು ಮಾಡಿರುವ ಅರುಣ್ ಯೋಗಿರಾಜ್ ಅವರು ಅಂಬರೀಶ್ ಅವರ ಪ್ರತಿಮೆಯನ್ನು ಅಚ್ಚುಕಟ್ಟಾಗಿ ರೂಪಿಸಿದ್ದಾರೆ.

ಅಂಬರೀಶ್ ಅವರ ಪುತ್ಥಳಿಯೂ ಗಿರಿಜಾ ಮೀಸೆ ಹಾಗೂ ಬಣ್ಣದ ಅಂಗಿಯನ್ನು ಧರಿಸಿದ ಜೀವಂತಿಕೆಯೊಂದಿಗೆ ಎದ್ದು ಕಾಣುವಂತಿದೆ. ಸುಮಾರು ಎರಡೂವರೆ ಅಡಿ ಎತ್ತರದ ಈ ಶಿಲ್ಪ ಎರಡು ಅಡಿ ಅಗಲವಿದೆ. 1.5 ಲಕ್ಷ ರೂ. ವೆಚ್ಚದಲ್ಲಿ ಪುತ್ಥಳಿಯನ್ನು ನಿರ್ಮಿಸಲಾಗಿದೆ.

ಕಳೆದ ಒಂದೂವರೆ ತಿಂಗಳ ಹಿಂದೆ ದೊಡ್ಡರಸಿನಕೆರೆ ಗ್ರಾಮಸ್ಥರು ಅರುಣ್ ಅವರನ್ನು ಭೇಟಿಯಾಗಿ ಪುತ್ಥಳಿ ನಿರ್ಮಿಸಲು ಮನವಿ ಮಾಡಿದ್ದರು. ಅದಕ್ಕೆ ಪೂರಕವಾಗಿ ಅರುಣ್ ಪುತ್ಥಳಿಯನ್ನು ನಿಗದಿತ ಅವಧಿಯಲ್ಲಿ ನಿರ್ಮಿಸಿಕೊಟ್ಟಿದ್ದಾರೆ ಯೋಗಿರಾಜ್.
ಅಂಬರೀಶ್ ಅವರ ಪುತ್ಥಳಿಯನ್ನು ಎಚ್. ಡಿ ಕೋಟೆಯಿಂದ ತರಲಾದ ಕೃಷ್ಣ ಶಿಲೆಯಲ್ಲಿ ನಿರ್ಮಾಣ ಮಾಡಲಾಗಿದೆ. ಇದರೊಟ್ಟಿಗೆ ನಾಳೆ ಮೈಸೂರಿನ ಮೆಗಾ ಡೈರಿಯಲ್ಲಿ ಅರುಣ್ ಅವರು ನಿರ್ಮಿಸಿದ ಕ್ಷೀರ ಕ್ರಾಂತಿ ಪಿತಾಮಹ ವರ್ಗೀಸ್ ಕುರಿಯನ್ ಅವರ ಪುತ್ಥಳಿಯನ್ನು ಮುಖ್ಯಮಮಂತ್ರಿ ಕುಮಾರಸ್ವಾಮಿಯವರು ಅನಾವರಣಗೊಳಿಸಲಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications