ಎರಡು ತಿಂಗಳ ಮಟ್ಟಿಗೆ ಆನೆ ದತ್ತು ತೆಗೆದುಕೊಂಡ ಒಂದು ವರ್ಷದ ಮಗು!
ಮೈಸೂರು, ಮೇ 01: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಲಾಕ್ಡೌನ್ನಲ್ಲಿ ಮಾನವೀಯತೆಯ ಮುಖಗಳು ಅನಾವರಣವಾಗುತ್ತಿವೆ. ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯ ನಿರ್ವಹಣೆಗೋಸ್ಕರ ನಾಗರಿಕರು ದೇಣಿಗೆ ನೀಡಿ ಸಹಕರಿಸುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ವಾಟ್ಸಪ್ ಮೂಲಕ ಮಾಡಿದ ಮನವಿಗೆ ಸ್ಪಂದಿಸಿದ ಅಮೆರಿಕದ ಫೀನಿಕ್ಸ್ ನಗರದ ನಿವಾಸಿ ಜ್ಯೋತಿ ವಿಕಾಸ್ ಎಂಬುವರು ತಮ್ಮ ಮಗಳ ಹೆಸರಿನಲ್ಲಿ ಆನೆಯೊಂದನ್ನು ದತ್ತು ಪಡೆದುಕೊಂಡಿದ್ದಾರೆ. ಆನೆಯ ಎರಡು ತಿಂಗಳುಗಳ ನಿರ್ವಹಣೆಗೆ 25 ಸಾವಿರ ರೂಪಾಯಿ ದೇಣಿಗೆ ನೀಡಿದ್ದಾರೆ.
ಸಚಿವ ಎಸ್.ಟಿ. ಸೋಮಶೇಖರ್ ಅವರ ವಾಟ್ಸಪ್ ಸಂದೇಶದ ಬಗ್ಗೆ ಮಾಧ್ಯಮಗಳಲ್ಲಿ ಗಮನಿಸಿದ ಅವರು, ಪ್ರಾಣಿ-ಪಕ್ಷಿಗಳ ನಿರ್ವಹಣೆಗೋಸ್ಕರ ತಮ್ಮ ಕೊಡುಗೆ ಇರಬೇಕು ಎಂದು ಅನ್ನಿಸಿ ತಕ್ಷಣ ತಮ್ಮ ಪುತ್ರಿ ಪ್ರಿಶಾ ಹೆಸರಿನಲ್ಲಿ 25 ಸಾವಿರ ರೂಪಾಯಿ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ ಎಂದು ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ಪ್ರಿಶಾ ನಮ್ಮ ಒಂದು ವರ್ಷದ ಮಗಳಾಗಿದ್ದು, ಆಕೆಯ ಹೆಸರಿನಲ್ಲಿ 2 ತಿಂಗಳ ಅವಧಿಗೆ ಆನೆಯೊಂದನ್ನು ದತ್ತು ತೆಗೆದುಕೊಂಡಿದ್ದೇವೆ. ಸಚಿವರು ಮಾಡಿದ ಮನವಿಯನ್ನು ಮಾಧ್ಯಮಗಳ ಮೂಲಕ ಗಮನಿಸಿ ದತ್ತು ತೆಗೆದುಕೊಳ್ಳುವ ನಿರ್ಧಾರ ಮಾಡಿದೆವು. ಜೊತೆಗೆ ಇಲ್ಲಿನ ದಾನಿಗಳಿಂದ ಪ್ರಾಣಿಗಳಿಗೆ ಸಹಾಯಧನವನ್ನು ಸಂಗ್ರಹಿಸಲು ನಮ್ಮ ಬಳಗ ನಿರ್ಧರಿಸಿದೆ ಎಂದು ಅಮೆರಿಕದ ಫೀನಿಕ್ಸ್ ನಗರದ ಜ್ಯೋತಿ ವಿಕಾಸ್ ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications