Amit Shah: ಸುತ್ತೂರು ಮಠದ ನಿಸ್ವಾರ್ಥ ಸೇವೆ ಶ್ಲಾಘಿಸಿದ ಅಮಿತ್ ಶಾ
ಮೈಸೂರು: ಸುತ್ತೂರು ಮಠವು ನಿಸ್ವಾರ್ಥ ಸೇವೆ ಮೂಲಕ ಲಕ್ಷಾಂತರ ಜನರ ಬೆಳವಣಿಗೆಗೆ ಕಾರಣವಾಗಿದೆ. ಇದು ನಿರಂತರವಾಗಿ ಪರೋಪಕಾರದ ಕೇಂದ್ರವಾಗಿ ಹೊರಹೊಮ್ಮಿದೆ. ಬಿಜೆಪಿ ಈ ಸೇವೆಯನ್ನು ಗುರುತಿಸಿ ಅವರಿಗೆ ವಂದಿಸಯತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.
ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಸೇರಿದ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಅವರು. ಮಠದ 24 ಮಠಾಧೀಶರು ಇಲ್ಲಿ ನಿಸ್ವಾರ್ಥ ಸೇವೆ ಮಾಡಿದ್ದಾರೆ ಎಂದರು. ಸುತ್ತೂರು ಮಠದ ಜಗದ್ಗುರುಗಳ ಆಶೀರ್ವಾದ ಕೋರಿ ಅವರು ಭಾಷಣ ಆರಂಭಿಸಿದರು. ಬಸವಣ್ಣ ಕೇವಲ ಒಂದು ವರ್ಗಕ್ಕೆ ಸೀಮಿತರಲ್ಲ; ದೇಶದ ಕೋಟ್ಯಂತರ ಜನರಿಗೆ ಪ್ರೇರಣೆ ತುಂಬಿದ ಮಹಾಪುರುಷರು ಎಂದರು.

ಮೋದಿ ಅವರು ಕಾಶಿ ಕಾರಿಡಾರ್, ಮಧ್ಯಪ್ರದೇಶದ ಮಹಾಕಾಲ ಕಾರಿಡಾರ್, ಕೇದಾರನಾಥ ಪುನರುತ್ಥಾನ, ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಮೂಲಕ ದೇಶದ ಸಂಸ್ಕೃತಿಯ ಪುನರುತ್ಥಾನಕ್ಕೆ ಮಹತ್ವ ನೀಡಿದ್ದಾರೆ ಎಂದು ಶ್ಲಾಘಿಸಿದರು.
ಅಯೋಧ್ಯೆಯಲ್ಲೂ ಸುತ್ತೂರು ಶಾಖಾ ಮಠ ತೆರೆಯಲ್ಲೂ ಶ್ರಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ನಿರ್ಧರಿಸಿರುವುದು ಸಂತಸ ತಂದಿದೆ ಎಂದರು. ದೇಶದ ಸಂಸ್ಕೃತಿ, ಪರಂಪರೆ, ಯೋಗ, ಆಯುರ್ವೇದ ಹಾಗೂ ಭಾಷೆ ಪುನರುಜ್ಜೀವನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆದ್ಯತೆ ಕೊಟ್ಟಿದ್ದಾರೆ ಎಂದು ಹೇಳಿದರು.
ಅಮಿತ್ ಶಾ-ಮೋದಿ ಜೋಡೆತ್ತು!
ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಜೋಡೆತ್ತುಗಳು. ಇಬ್ಬರೂ ಸೇರಿ ದೇಶವನ್ನು ಸಮೃದ್ಧಿಯಿಂದ ನಡೆಸುತ್ತಿದ್ದಾರೆ. ಒಂದು ಗಾಡಿಗೆ ಜೋಡಿ ಎತ್ತುಗಳು ಹೇಗೆ ಮುಖ್ಯವೋ , ಹಾಗೆಯೇ ದೇಶವನ್ನು ಈ ಇಬ್ಬರೂ ಮುನ್ನಡೆಸುತ್ತಿದ್ದಾರೆ ಎಂದು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ಇಲ್ಲಿನ ಶ್ರೀಗಳು ಯಡಿಯೂರಪ್ಪ ಅವರಿಗೆ ಮಾರ್ಗದರ್ಶನ ನೀಡಿದವರು ಎಂದು ಶ್ಲಾಘಿಸಿದರು. ಶ್ರೀಗಳ ಆಶೀರ್ವಾದದಿಂದ ಉತ್ತಮ ಮಳೆ, ಬೆಳೆ ಆಗಿ ರೈತರು ನೆಮ್ಮದಿಯಿಂದ ಬಾಳಿ ಬದುಕುವಂತಾಗಲಿ ಎಂದು ಹಾರೈಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications