ಜನಾರ್ದನ ರೆಡ್ಡಿ ಪಕ್ಷ ಸೇರ್ಪಡೆ ವಿಚಾರ ನನಗೆ ಗೊತ್ತಿಲ್ಲ: ಅಮಿತ್ ಶಾ
ಮೈಸೂರು, ಮಾರ್ಚ್ 31: ಈಗಾಗಲೇ ಪರೋಕ್ಷವಾಗಿ ಬೆಳಗಾವಿ ರಾಜಕೀಯದಲ್ಲಿ ಸಕ್ರಿಯರಾಗಿರುವ ಅಕ್ರಮ ಗಣಿಗಾರಿಕೆ ಆರೋಪಿ ಜನಾರ್ಧನ ರೆಡ್ಡಿ ಅವರು ಬಿಜೆಪಿಗೆ ಮರಳುತ್ತಾರೆಯೇ ಎಂಬ ಪ್ರಶ್ನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಪಷ್ಟ ಉತ್ತರ ನಿಡಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಮೈಸೂರಿನ ಸುದ್ದಿಗೋಷ್ಠಿಯಲ್ಲಿ ಎದುರಾದ ಜನಾರ್ಧನ ರೆಡ್ಡಿ ಅವರ ಬಿಜೆಪಿ ಮರಳುವಿಕೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅಮಿತ್ ಶಾ ಅವರು ಜನಾರ್ಧನ ರೆಡ್ಡಿಗೂ ಬಿಜೆಪಿಗೂ ಸಂಬಂಧವಿಲ್ಲ, ರೆಡ್ಡಿ, ಪಕ್ಷ ಸೇರ್ಪಡೆ ಬಗ್ಗೆ ನಾನು ಗೊಂದಲದ ಹೇಳಿಕೆ ನೀಡಿ ಇರಿಸು-ಮುರಿಸು ಉಂಟು ಮಾಡುವುದಿಲ್ಲ ಎನ್ನುವ ಮೂಲಕ ಜನಾರ್ಧನ ರೆಡ್ಡಿ ಮರಳಿ ಬಿಜೆಪಿ ಸೇರ್ಪಡೆಗೊಳ್ಳುತ್ತಾರೆ ಎಂಬುದನ್ನು ಸಾರಾಸಗಟು ತಳ್ಳಿ ಹಾಕಿದರು.
ಖುದ್ದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರೇ ಈ ಹೇಳಿಕೆ ನೀಡಿರುವುದರಿಂದ ಪುನಃ ಮಾತೃ ಪಕ್ಷಕ್ಕೆ ಸೇರ ಬಯಸಿದ್ದ ಜನಾರ್ಧನ ರೆಡ್ಡಿ ಆಸೆಗೆ ತಣ್ಣೀರು ಎರಚಿದಂತಾಗಿದೆ. ಜೊತೆಗೆ ಅವರ ಕಟ್ಟಾ ಬೆಂಬಲಿಗ ಜನಾರ್ಧನ ರೆಡ್ಡಿ ಅವರನ್ನು ಬಿಜೆಪಿಗೆ ಮರಳಿ ಸೇರಿಸಲು ಶತ ಪ್ರಯತ್ನ ಮಾಡುತ್ತಿರುವ ಶ್ರೀರಾಮುಲು ಅವರಿಗೂ ಹಿನ್ನಡೆ ಆಗಿದೆ.