ಕಾಂಪೌಂಡ್ ಗೆ ಕಾರು ಡಿಕ್ಕಿ: ಮೈಸೂರಿನ ಆಯುರ್ವೇದ ವೈದ್ಯ ಸಾವು
ಕಾಂಪೌಂಡ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಆಯುರ್ವೇದ ವೈದ್ಯರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು, ಜೂನ್ 1: ಕಾಂಪೌಂಡ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಆಯುರ್ವೇದ ವೈದ್ಯರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ಇಂದು (ಜೂನ್ 1) ಬೆಳ್ಳಂಬೆಳಗ್ಗೆ ಮೈಸೂರಿನ ರಿಂಗ್ ರೋಡ್ ಬಳಿ ಘಟನೆ ನಡೆದಿದ್ದು, ಮೃತರನ್ನು ಚೇತನ್ ಕುಮಾರ್ (30) ಎಂದು ಗುರುತಿಸಲಾಗಿದೆ.
ಇಲ್ಲಿನ ಬೋಗಾದಿಯಿಂದ ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಕಡೆ ಹೊರಟಿದ್ದ ಇಬ್ಬರಲ್ಲಿ ಒಬ್ಬರು ಮೃತರಾಗಿದ್ದು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ್ದ ವಿವಿ ಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.[ಧಾರಾಕಾರ ಮಳೆಗೆ ಬಲಿಯಾದ ಮೈಸೂರಿನ ಎರಡು ವರ್ಷದ ಕಂದ]













Click it and Unblock the Notifications