ಆಹಾರ ಅರಸಿ ನಾಡಿಗೆ ಬಂದ ಕಾಡಾನೆಗೆ ವಿದ್ಯುತ್ ಸ್ಪರ್ಶ
ಮೈಸೂರು, ಜನವರಿ 25: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಯೊಂದು ತೋಟಕ್ಕೆ ಹಾಕಿದ್ದ ವಿದ್ಯುತ್ ತಂತಿಗೆ ಸಿಲುಕಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಹುಣಸೂರು ತಾಲೂಕಿನ ಗೌಡನಕಟ್ಟೆ ಗ್ರಾಮದ ಬಳಿ ನಡೆದಿದೆ.
ಕಾಡಾನೆಯು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಹಳ್ಳಿ ಅರಣ್ಯ ವ್ಯಾಪ್ತಿಯ ಕಾಡಿನಿಂದ ಬಂದಿದ್ದು, ಶುಕ್ರವಾರ ಬೆಳಗಿನ ಜಾವ ಗೌಡನಕಟ್ಟೆ ಗ್ರಾಮದ ಬಳಿಯ ಸೀಬೆ ತೋಟಕ್ಕೆ ನುಗ್ಗಿದೆ.
ತೋಟದಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ರಾತ್ರಿ ಸೋಲಾರ್ ತಂತಿ ಬೇಲಿಗೆ ನೇರವಾಗಿ ವಿದ್ಯುತ್ ಹರಿಸಿದ್ದು, ಇದನ್ನು ಸ್ಪರ್ಶಿಸಿದ ಆನೆಗೆ ವಿದ್ಯುತ್ ತಗುಲಿದ್ದರ ಪರಿಣಾಮ ಆನೆ ತೀವ್ರ ಅಸ್ವಸ್ಥಗೊಂಡಿದೆ.

ವಿದ್ಯುತ್ ಆಘಾತದಿಂದ ಆನೆ ತೋಟದಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಇಲಾಖೆಯ ವೈದ್ಯರು ಆಗಮಿಸಿ ಆನೆಗೆ ಸ್ಥಳದಲ್ಲೇ ಚಿಕಿತ್ಸೆ ನೀಡುತ್ತಿದ್ದಾರೆ. ಆನೆಯು ಸಂಪೂರ್ಣ ನಿತ್ರಾಣಗೊಂಡಿದೆ. ಎದ್ದು ಓಡಾಡಲು ಪ್ರಯತ್ನಿಸುತ್ತಿದ್ದು ನಿಲ್ಲಲು ಶಕ್ತವಾಗದೇ ಪುನಃ ಕುಸಿದು ಬೀಳುತ್ತಿದೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications