ಮೈಸೂರು ಮೃಗಾಲಯದಲ್ಲಿ ದುರಂತ: ಮಾವುತನನ್ನು ಕೊಂದ ಆನೆ
ಮೈಸೂರು, ಆ. 07: ವಿಶ್ವವಿಖ್ಯಾತ ಮೈಸೂರು ಮೃಗಾಲಯದಲ್ಲಿ ಆನೆಯೊಂದು ತನ್ನನ್ನು ನೋಡಿಕೊಳ್ಳುವ ಮಾವುತನನ್ನೇ ತುಳಿದು ಸಾಯಿಸಿರುವ ಘಟನೆ ಶುಕ್ರವಾರ (ಆ. 07) ರಾತ್ರಿ ಸಂಭವಿಸಿದೆ.
ಹರೀಶ್ ಎಂಬ ಮಾವುತ ತಾನು ಸಲಹುತ್ತಿದ್ದ ಆನೆ ದಾಳಿಯಿಂದಲೇ ದುರಂತ ಸಾವನ್ನಪ್ಪಿದ್ದಾರೆ. ಕಳೆದ ಐದು ದಿನಗಳಿಂದ ರಜೆ ಮೇಲೆ ತೆರಳಿದ್ದ ಹರೀಶ್ ಇವತ್ತು ಕೆಲಸಕ್ಕೆ ಹಾಜರಾಗಿದ್ದರು. ಎಂದಿನಂತೆ ಆನೆಯ ಮೈದಡವಿ ಹುಲ್ಲು ಹಾಕುವ ಸಂದರ್ಭದಲ್ಲಿ ಆತನನ್ನು ಸೊಂಡಿಲಿನಿಂದ ಎತ್ತಿ ಕೆಳಕ್ಕೆ ಹಾಕಿ ಹೊಸಕಿದೆ.
ಇದರಿಂದ ತಬ್ಬಿಬ್ಬಾದ ಇತರೆ ಸಿಬ್ಬಂದಿ ಕೂಡಲೇ ಹರೀಶನನ್ನು ಆನೆಯಿಂದ ಬಿಡಿಸಿಕೊಂಡು ತಕ್ಷಣವೇ ಗೋಪಾಲಗೌಡ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದರಾದರೂ ಫಲಕಾರಿಯಾಗದೆ ಹರೀಶ್ ಸಾವನ್ನಪ್ಪಿದರು ಎಂದು ಮೃಗಾಲಯದ ಮೂಲಗಳು ತಿಳಿಸಿವೆ. ಪ್ರಕರಣ ಕುರಿತು ನಜರ್ ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಮಾನ್ಯವಾಗಿ ಮಾವುತನನ್ನು ಆನೆ ಬಹಳ ಪ್ರೀತಿಯಿಂದ ನೋಡುತ್ತದೆ. ಜೊತೆಗೆ ಆನೆಗೆ ಮದ ಬಂದಾಗ ಮಾತ್ರ ಈ ರೀತಿ ದಾಳಿಗೆ ಆನೆ ಮುಂದಾಗುತ್ತದೆ. ಆದರೆ ನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ಕೊಡುವ ಮೈಸೂರು ಮೃಗಾಲಯದಲ್ಲಿ ಘಟನೆ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ.

ಘಟನೆ ಬಗ್ಗೆ ಮೃಗಾಲಯದ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications