ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಮೃಗಾಲಯದಲ್ಲಿ ದುರಂತ: ಮಾವುತನನ್ನು ಕೊಂದ ಆನೆ

|
Google Oneindia Kannada News

ಮೈಸೂರು, ಆ. 07: ವಿಶ್ವವಿಖ್ಯಾತ ಮೈಸೂರು ಮೃಗಾಲಯದಲ್ಲಿ ಆನೆಯೊಂದು ತನ್ನನ್ನು ನೋಡಿಕೊಳ್ಳುವ ಮಾವುತನನ್ನೇ ತುಳಿದು ಸಾಯಿಸಿರುವ ಘಟನೆ ಶುಕ್ರವಾರ (ಆ. 07) ರಾತ್ರಿ ಸಂಭವಿಸಿದೆ.

ಹರೀಶ್ ಎಂಬ ಮಾವುತ ತಾನು ಸಲಹುತ್ತಿದ್ದ ಆನೆ ದಾಳಿಯಿಂದಲೇ ದುರಂತ ಸಾವನ್ನಪ್ಪಿದ್ದಾರೆ. ಕಳೆದ ಐದು ದಿನಗಳಿಂದ ರಜೆ ಮೇಲೆ ತೆರಳಿದ್ದ ಹರೀಶ್ ಇವತ್ತು ಕೆಲಸಕ್ಕೆ ಹಾಜರಾಗಿದ್ದರು. ಎಂದಿನಂತೆ ಆನೆಯ ಮೈದಡವಿ ಹುಲ್ಲು ಹಾಕುವ ಸಂದರ್ಭದಲ್ಲಿ ಆತನನ್ನು ಸೊಂಡಿಲಿನಿಂದ ಎತ್ತಿ ಕೆಳಕ್ಕೆ ಹಾಕಿ ಹೊಸಕಿದೆ.

ಮೈಸೂರು ಮೃಗಾಲಯದಲ್ಲಿ ಮೈಸೂರು ಮೃಗಾಲಯದಲ್ಲಿ "ಬ್ರಹ್ಮ" ಗಂಡು ಹುಲಿ ಸಾವು

ಇದರಿಂದ ತಬ್ಬಿಬ್ಬಾದ ಇತರೆ ಸಿಬ್ಬಂದಿ ಕೂಡಲೇ ಹರೀಶನನ್ನು ಆನೆಯಿಂದ ಬಿಡಿಸಿಕೊಂಡು ತಕ್ಷಣವೇ ಗೋಪಾಲಗೌಡ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದರಾದರೂ ಫಲಕಾರಿಯಾಗದೆ ಹರೀಶ್ ಸಾವನ್ನಪ್ಪಿದರು ಎಂದು ಮೃಗಾಲಯದ ಮೂಲಗಳು ತಿಳಿಸಿವೆ. ಪ್ರಕರಣ ಕುರಿತು ನಜರ್ ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

An elephant killed mahout in mysuru zoo

ಸಾಮಾನ್ಯವಾಗಿ ಮಾವುತನನ್ನು ಆನೆ ಬಹಳ ಪ್ರೀತಿಯಿಂದ ನೋಡುತ್ತದೆ. ಜೊತೆಗೆ ಆನೆಗೆ ಮದ ಬಂದಾಗ ಮಾತ್ರ ಈ ರೀತಿ ದಾಳಿಗೆ ಆನೆ ಮುಂದಾಗುತ್ತದೆ. ಆದರೆ ನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ಕೊಡುವ ಮೈಸೂರು ಮೃಗಾಲಯದಲ್ಲಿ ಘಟನೆ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ.

An elephant killed mahout in mysuru zoo

ಘಟನೆ ಬಗ್ಗೆ ಮೃಗಾಲಯದ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

English summary
An elephant killed mahout in world famous mysore zoo, complaint registered in Nazarbad police Station
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X