ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಆರಿಸುವಾಗ ಮಹಿಳೆಯ ಶವ ಪತ್ತೆ
ಮೈಸೂರು, ಮಾರ್ಚ್ 9: ಕಿಡಿಗೇಡಿಗಳ ಕೃತ್ಯವೋ, ಬಿಸಿಲಿನ ಧಗೆಯೋ, ಆಕಸ್ಮಿಕವೋ ಚಾಮುಂಡಿ ಬೆಟ್ಟಕ್ಕೆ ಬೆಂಕಿಯ ಕಾಟ ಆರಂಭವಾಗಿದ್ದು, ನಿನ್ನೆ ತಡರಾತ್ರಿಯವರೆಗೂ ಕಾಣಿಸಿಕೊಂಡು ಬೆಂಕಿ ಹೊತ್ತಿ ಉರಿದ ಪರಿಣಾಮ ಸುಮಾರು 60 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ.
ಇನ್ನು ಬೆಂಕಿಯ ಕೆನ್ನಾಲಿಗೆಗೆ ಬೆಟ್ಟದ ಕುರುಚಲು ಗಿಡಗಳು, ಸಣ್ಣಪುಟ್ಟ ಮರಗಿಡಗಳು ಸುಟ್ಟು ಕರಕಲಾಗಿವೆ. ಇದನ್ನು ಕಂಡು ನೆರೆದಿದ್ದ ಜನರು ಮಮ್ಮಲ ಮರಗುತ್ತಿದ್ದದ್ದು ಒಂದೆಡೆಯಾದರೆ ಮತ್ತೊಂದೆಡೆ ಅಗ್ನಿಶಾಮಕದಳ, ಅರಣ್ಯ ಇಲಾಖೆ ಹಾಗೂ ಪೊಲೀಸರು ಬೆಂಕಿಯನ್ನು ಆರಿಸಲು ಇನ್ನಿಲ್ಲದ ಪ್ರಯತ್ನ ನಡೆಸಿದರು.
ನಿನ್ನೆ ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ನಂಜನಗೂಡು-ಮೈಸೂರು ರಸ್ತೆಯ ಬಂಡಿಪಾಳ್ಯದ ಹಿಂಭಾಗ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಸಣ್ಣ ಮಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಕಂಡ ಎಪಿಎಂಸಿ ಆವರಣದ ವ್ಯಾಪಾರಸ್ಥರು ಕೂಡಲೇ ಅಗ್ನಿಶಾಮಕದಳ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ವಿಚಾರ ಮುಟ್ಟಿಸಿದ್ದಾರೆ.

ತಕ್ಷಣ ಸ್ಥಳಕ್ಕೆ ಬಂದ ಡಿಎಸ್ಎಫ್ ಪ್ರಶಾಂತ್ ಕುಮಾರ್, ಅಗ್ನಿಶಾಮಕದಳದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರಲ್ಲದೆ ಸುಮಾರು80ಕ್ಕೂ ಹೆಚ್ಚು ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದರು.
ಬೆಂಕಿ ಆವರಿಸಿದ್ದ ಪ್ರದೇಶಕ್ಕೆ ತೆರಳಿದ ಅಗ್ನಿಶಾಮಕದಳದ ಸಿಬ್ಬಂದಿ ನೀರಿನ ಮೂಲಕ ಬೆಂಕಿ ನಂದಿಸಲು ಮುಂದಾದರೆ, ಅರಣ್ಯ ಇಲಾಖೆಯ ಸಿಬ್ಬಂದಿ ಹಸಿ ಸೊಪ್ಪು ಬಳಸಿ ಬೆಂಕಿಯನ್ನು ಆರಿಸಲು ಮುಂದಾದರು. ನಂತರ ಬೆಂಕಿ ಆರಿಸಲು ಒಟ್ಟು 10 ಟ್ಯಾಂಕರ್ ಗಳನ್ನು ಬಳಸಲಾಯಿತು.
ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಕೊನೆಗೂ ಸಫಲರಾದರು. ಅಷ್ಟರಲ್ಲಿ ಆದಿಚುಂಚನಗಿರಿಮಠದ ಖಾಲಿ ನಿವೇಶನ ಹಿಂಭಾಗದಲ್ಲಿರುವ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಅಲ್ಲಿಗೆ ತೆರಳಿದ 50 ಹೆಚ್ಚು ಮಂದಿ ಸೊಪ್ಪುಗಳನ್ನು ಬಳಸಿ ಬೆಂಕಿಯನ್ನು ನಂದಿಸಿದ್ದರು.

ಇನ್ನು ಚಾಮುಂಡಿ ಬೆಟ್ಟದಲ್ಲಿ ಬೆಂಕಿ ನಂದಿಸುವ ವೇಳೆ ಅಪರಿಚಿತ ಮಹಿಳೆಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆದಿಚುಂಚನಗಿರಿ ಮಠದ ಹಿಂಭಾಗದಲ್ಲಿನ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ನಂದಿಸುವ ವೇಳೆಗೆ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು, ಕೂಡಲೇ ಕೆ. ಆರ್ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸಿದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications