ಎಮ್ಮೆ-ಕೋಣಗಳನ್ನು ಕಡಿದು ಹಾಕುವುದಾದರೇ ಹಸುಗಳನ್ನು ಏಕೆ ಕಡಿಯಬಾರದು?-ಪಶುಸಂಗೋಪನೆ ಸಚಿವ
ಮೈಸೂರು, ಜೂನ್ 03: ಗೋ ಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಎಮ್ಮೆ ಕೋಣಗಳನ್ನು ಕಡಿದು ಹಾಕುವುದಾದರೇ ಹಸುಗಳನ್ನು ಏಕೆ ಕಡಿಯಬಾರದು? ಎಂದು ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ತುಂಬಾ ಕಷ್ಟ ಪಡಬೇಕಾಯಿತು. 25 ಮಂದಿ ಬಂದರೂ ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಮೃತ ಹಸುವನ್ನು ಎತ್ತಿಸಿ ಗುಂಡಿತೋಡಿ ಹೂಳಬೇಕಾಯಿತು. ಹೀಗಾಗಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.

ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ. ರಾಜ್ಯಕ್ಕೆ ಅಮುಲ್ ಬಂದಿಲ್ಲ. ಅಮುಲ್ ನಿಂದ ನಂದಿನಿಗೆ ತೊಂದರೆ ಆಗಿಲ್ಲ. ಮುಂದಿನ ದಿನಗಳಲ್ಲಿ ಅಮುಲ್ ಬಂದಾಗ ನೋಡೋಣ. ನಂದಿನಿ ಉತ್ಪನ್ನಗಳ ಉತ್ತೇಜನಕ್ಕೆ ಕ್ರಮ ಕೈಗೊಳ್ಳುತ್ತೇವೆ. ಹಸು ದತ್ತು ಯೋಜನೆ ಏನಾಗಿದೆ ಎಂದು ಪರಿಶೀಲಿಸುತ್ತೇವೆ. ಗೋ ಶಾಲೆಗಳ ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ. ಆದರೆ ನಿರ್ವಹಣೆ ಸರಿಯಾಗಿ ಆಗಿಲ್ಲ. ಮುಂದೆ ಎಲ್ಲವನ್ನೂ ಸರಿಪಡಿಸುತ್ತೇವೆ ಎಂದು ಹೇಳಿದರು.
ಮೈಸೂರು ಜಿಲ್ಲೆಯ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಅವರನ್ನು ಬಳಸಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇವೆ. ಎಲ್ಲರೂ ನಮಗೆ ಸಹಕಾರ ಕೊಡಿ. ನನಗೆ ಕೊಟ್ಟಿರುವ ಪಶು ಸಂಗೋಪನೆ ಇಲಾಖೆ ಬಹುದೊಡ್ಡ ಇಲಾಖೆ.ಮೂಕ ಜೀವಿಗಳ ಒಳಿತಿಗಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ಸಂತಸ ತಂದಿದೆ ಎಂದರು.
ಇಲಾಖೆ ದೊಡ್ಡದಿದ್ದರೂ, ನೌಕರರ ಕೊರತೆ ಹೆಚ್ಚಾಗಿದೆ. 18 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಅಗತ್ಯವಿದೆ. ಸದ್ಯಕ್ಕೆ 9 ಸಾವಿರ ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಬಾಕಿ ಹುದ್ದೆಗಳು ಖಾಲಿ ಉಳಿದಿವೆ. ಪಶು ವೈದ್ಯರ ಕೊರತೆ ಹೆಚ್ಚಾಗಿದೆ. 4,234 ಆಸ್ಪತ್ರೆಗಳಿದ್ದು 1,600 ಕ್ಕೂ ಹೆಚ್ಚು ವೈದ್ಯರ ಕೊರತೆಯಿದೆ. ಸದ್ಯದಲ್ಲೇ 400 ಪಶುವೈದ್ಯರ ನೇಮಕಾತಿಗೆ ಕೆಪಿಎಸ್ಸಿ ಮೂಲಕ ಪರೀಕ್ಷೆ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದರು.

ಸಿಬ್ಬಂದಿಯ ಕೊರತೆಯಿಂದ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಹೈನುಗಾರಿಕೆಯ ಉತ್ತೇಜನಕ್ಕೆ ಕ್ರಮ ಕೈಗೊಳ್ಳುತ್ತೇವೆ. ಹೈನುಗಾರಿಕೆಗೆ ಬಜೆಟ್ ನಲ್ಲಿ ನೀಡುವ ಅನುದಾನ ಕಡಿಮೆಯಿದೆ. ಹೀಗಾಗಿ ಹೆಚ್ಚುವರಿ ಅನುದಾನಕ್ಕೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಮಂತ್ರಿಯಾದ ಬಳಿಕ ಮೊದಲ ಬಾರಿ ಇಂದು ಮೈಸೂರಿಗೆ ಆಗಮಿಸಿದ್ದೇನೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಕಾರಣರಾದ ರಾಜ್ಯದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮೈಸೂರು ಚಾಮರಾಜನಗರ ಜಿಲ್ಲೆಯ ಜನರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮೈಸೂರು ರಾಜಕೀಯವಾಗಿ ಮಹತ್ವ ಪಡೆದುಕೊಂಡಿರುವ ಜಿಲ್ಲೆ. ಮೈಸೂರಿನಲ್ಲಿ ರಾಜರು ಆಳ್ವಿಕೆ ಮಾಡಿದ್ದಾರೆ. ಸ್ವಾತಂತ್ರ್ಯ ನಂತರ ದೇವರಾಜ ಅರಸು, ಸಿದ್ಧರಾಮಯ್ಯ ಎರಡು ಬಾರಿ ಸಿಎಂ ಆಗಿದ್ದಾರೆ. ಇದು ಮೈಸೂರು ಜಿಲ್ಲೆಯ ಜನರಿಗೆ ಹೆಮ್ಮೆಯ ವಿಚಾರವಾಗಿದೆ. ಸಿದ್ದರಾಮಯ್ಯ ಸಂಪುಟದಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿರುವುದಕ್ಕೆ ಸಂತಸವಾಗಿದೆ. 2018ರ ಚುನಾವಣೆಗೆ ಹೋಲಿಸಿದರೆ, ಈ ಬಾರಿಯ ಚುನಾವಣೆಯಲ್ಲಿ ಜನರು ಬಹಳ ಎಚ್ಚರಿಕೆಯಿಂದ ಮತ ನೀಡಿದ್ದಾರೆ ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications