ಬೆಂಗಳೂರಾಯ್ತು, ಈಗ ನಂಜನಗೂಡಿನಲ್ಲಿ ಕರುವಿನ ಬಾಲ ಕತ್ತರಿಸಿ ವಿಕೃತಿ
ಮೈಸೂರು, ಜನವರಿ 17: ನಮ್ಮ ರಾಜ್ಯದಲ್ಲಿ ಮೂಕ ಪ್ರಾಣಿಗಳ ಮೇಲೆ ಕಿಡಿಗೇಡಿಗಳ ದೌರ್ಜನ್ಯಕ್ಕೆ ಅಂತ್ಯ ಇಲ್ಲದಂತಾಗಿದೆ. ರಸ್ತೆಯ ಸಮೀಪದಲ್ಲಿ ಮಲಗಿರುವ ಹಸು- ನಾಯಿಗಳ ಮೇಲೆ ವಾಹನ ಚಲಾಯಿಸುವ ಅನೇಕ ಘಟನೆಗಳು ನಡೆಯುತ್ತಿದ್ದು, ಈ ಮಧ್ಯೆ ಬೆಂಗಳೂರಿನಲ್ಲಿ ನಡೆದ ಹಾಲು ತುಂಬಿದ ಮೂರು ಹಸುಗಳ ಕೆಚ್ಚಲಿಗೆ ಚಾಕು ಹಾಕಿದ ಘಟನೆ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು.
ವ್ಯಕ್ತಿಯೊಬ್ಬ ರಾತ್ರಿ ವೇಳೆ ಕುಡಿದ ಮತ್ತಿನಲ್ಲಿ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದಿದ್ದು, ಘಟನೆ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಈ ಘಟನೆ ಮಾಡುವ ಮುನ್ನವೇ ಕಿಡಿಗೇಡಿಗಳು ಕುರುವೊಂದರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಈ ಘಟನೆ ನಡೆದಿರುವುದು ಬೇರೆಲ್ಲೂ ಅಲ್ಲ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ ನಡೆದಿದೆ. ನಂಜನಗೂಡಿನ ನಂಜುಂಡೇಶ್ವರನಿಗೆ ಹರಕೆ ರೂಪದಲ್ಲಿ ಬಿಟ್ಟ ಕರುವಿನ ಬಾಲವನ್ನು ದುಷ್ಕರ್ಮಿಗಳು ಕತ್ತರಿಸಿ ಪರಾರಿಯಾಗಿದ್ದಾರೆ. ರಕ್ತ ಸಿಕ್ತವಾದ ಕರುವನ್ನು ನೋಡುತ್ತಿದ್ದಂತೆ ಸ್ಥಳೀಯರು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂಜನಗೂಡಿನ ಹಳ್ಳದ ಕೇರಿಯ ರಾಮಮಂದಿರದ ಬಳಿ ಕರುವನ್ನು ತೆಗೆದುಕೊಂಡು ಬಂದು, ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬ್ರೇಕ್ ಹಾಕುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಭಕ್ತರು ನಂಜನಗೂಡಿನ ನಂಜುಂಡೇಶ್ವರನಿಗೆ ಹರಕೆ ರೂಪದಲ್ಲಿ ದನ-ಕರುಗಳನ್ನು ಅರ್ಪಿಸುತ್ತಾರೆ. ಆದರೆ ಅವುಗಳಿಗೆ ಸೂಕ್ತವಾದ ರಕ್ಷಣೆ ಇಲ್ಲ. ಇದೇ ಮೊದಲ ಘಟನೆ ಅಲ್ಲ, ಅನೇಕ ಬಾರಿ ಕಿಡಿಗೇಡಿಗಳು ಹಸುಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಇಂತಹ ಘಟನೆಗಳು ನಿಲ್ಲಬೇಕು. ದೇವಸ್ಥಾನದ ಹಸು, ಕರುಗಳಿಗೆ ಮೊದಲಿನಂತೆ ದೇವಸ್ಥಾನದ ಶಿವಲಿಂಗದ ಮುದ್ರೆ ಹಾಕಿ, ಅವುಗಳಿಗೆ ಇರಲು ಸೂಕ್ತ ಸ್ಥಳ ಮತ್ತು ಆಹಾರದ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಭಕ್ತರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ನಂಜನಗೂಡಿನ ಇಓ ಜಗದೀಶ್ ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆದುಕೊಂಡರು. ಹಸು-ಕರುಗಳ ರಕ್ಷಣೆಗಾಗಿ ತಾತ್ಕಾಲಿಕ ಗೋಶಾಲೆಯನ್ನು ತೆರೆಯುವುದಾಗಿ ಭರವಸೆ ನೀಡಿದ ಅವರು, ಭಕ್ತರಿಗೂ ಕೆಲವು ಸೂಚನೆಗಳನ್ನು ನೀಡಿದರು. ಇನ್ನು ಮುಂದೆ ಭಕ್ತರು ದೇವಸ್ಥಾನಕ್ಕೆ ಹರಕೆ ರೂಪದಲ್ಲಿ ನೀಡುವ ಹಸು ಹಾಗೂ ಕರುಗಳ ಬಗ್ಗೆ ಅಧಿಕೃತವಾಗಿ ದೇವಸ್ಥಾನಕ್ಕೆ ಮಾಹಿತಿ ನೀಡಿ ರಶೀದಿ ಪಡೆಯಬೇಕು ಎಂದು ಹೇಳಿದರು. ಅಲ್ಲದೇ ಈ ಪ್ರಕರಣ ಎಸಗಿದ ದುಷ್ಕರ್ಮಿಗಳಿಗೆ ಶಿಕ್ಷೆ ನೀಡುವ ಭರವಸೆ ನೀಡಿದರು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ












Click it and Unblock the Notifications