ಮೈಸೂರು ನಗರದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ
ಮೈಸೂರು, ಫೆಬ್ರವರಿ 2 : ಮೈಸೂರು ನಗರದಲ್ಲಿ ದಿನಕ್ಕೊಂದು ಚಿರತೆ ಕಂಡುಬರುತ್ತಿರುವ ಘಟನೆ ಕಂಡುಬರುತ್ತಿದ್ದು, ಇದು ಸಾರ್ವಜನಿಕರ ನಿದ್ದೆಗೆಡಿಸಿದೆ.
ಕಳೆದ ವಾರವಷ್ಟೇ ಒಂದು ಚಿರತೆ ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಕಂಡುಬಂದಿತು. ಈಗ ಮತ್ತೆ ಬುಧವಾರ ರಾತ್ರಿ ಚಾಮುಂಡಿ ಬೆಟ್ಟದಲ್ಲಿ ರಸ್ತೆಯಲ್ಲೇ ಚಿರತೆಯೊಂದು ಕುಳಿತು ವಾಹನ ಸವಾರರಿಗೆ ಫೋಸ್ ನೀಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ಚಾಮುಂಡಿ ಬೆಟ್ಟದ ಬಳಿ ಚಿರತೆ ಮತ್ತು ಮುಳ್ಳು ಹಂದಿ ರಸ್ತೆಯಲ್ಲೇ ನಡೆದು ಹೋಗುತ್ತಿರುವ ದೃಶ್ಯ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿತ್ತು. ನಂತರ ಮಂಡಕಳ್ಳಿ ವಿಮಾನ ನಿಲ್ದಾಣ ಆವರಣ ದಲ್ಲಿಯೂ ಚಿರತೆ ಕಾಣಿಸಿಕೊಂಡಿತ್ತು. ಈಗ ಚಾಮುಂಡಿ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದೆ. ಚಾಮುಂಡಿಬೆಟ್ಟದಲ್ಲಿ ರಸ್ತೆ ಮಧ್ಯೆಯೇ ಕುಳಿತಿದ್ದ ಚಿರತೆ ವಾಹನ ಸವಾರರಿಗೆ ಗೋಚರಿಸಿದೆ.

ವಾಹನಗಳು ಬಂದರೂ ಬೆದರದೇ ರಸ್ತೆಯಲ್ಲೇ ಚಿರತೆ ಕುಳಿತಿತ್ತು. ಈ ದೃಶ್ಯವನ್ನು ಪ್ರಯಾಣಿಕರು ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರೀಕರಿಸಿದ್ದಾರೆ. ನಂತರ ರಸ್ತೆಯಿಂದ ಎದ್ದು ಹೊರಟ ಚಿರತೆಗಾಂಭೀರ್ಯದಿಂದ ನಡೆದುಕೊಂಡು ಹೋಗಿದೆ. ಬೆನ್ನ ಹಿಂದೆಯೇ ವಾಹನಗಳು ಸಾಗುತ್ತಾ ಬಂದರೂ ಈ ಚಿರತೆ ಲೆಕ್ಕಿಸಿಲ್ಲ. ಈ ದೃಶ್ಯಗಳೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications