ಮೈಸೂರಿನ ಅರಸಿನಕೆರೆಯಲ್ಲಿ ಅಚ್ಚರಿ! ಮೊದಲು ಸಿಕ್ಕಿದ್ದರ ಎದುರು ಇನ್ನೊಂದು ನಂದಿ
ಮೈಸೂರು, ಜುಲೈ 16: ಎರಡು ದಿನದ ಕೆಳಗೆ ಮೈಸೂರಿನ ಅರಸಿನಕೆರೆ ಗ್ರಾಮದಲ್ಲಿ ಕಂಡುಬಂದ ನಂದಿ ಮೂರ್ತಿಯ ಎದುರೇ ಮತ್ತೊಂದು ನಂದಿ ವಿಗ್ರಹ ಕಂಡಿದೆ. ಇದನ್ನು ಪೂರ್ಣ ಪ್ರಮಾಣದಲ್ಲಿ ಹೊರ ತೆಗೆಯಲು ಗ್ರಾಮಸ್ಥರು ಪ್ರಯತ್ನಿಸಿದ್ದರು. ಆದರೆ ಈ ಕಾರ್ಯವನ್ನು ಪುರಾತತ್ವ ಇಲಾಖೆ ಸದ್ಯ ನಿಲ್ಲಿಸಿದೆ.
ಅರಸಿನಕೆರೆ ಗ್ರಾಮದ ಹಳ್ಳವೊಂದರಲ್ಲಿ ನಂದಿ ವಿಗ್ರಹದ ಮುಖದ ಭಾಗ ಮೊದಲು ಕಾಣಿಸಿಕೊಂಡಿತ್ತು. ಅದಕ್ಕೆ ಕೆಲವರು ಪೂಜೆಯನ್ನೂ ಸಲ್ಲಿಸುತ್ತಿದ್ದರು. ಪುರಾತನ ಕಥೆಯನ್ನು ನೆಚ್ಚಿಕೊಂಡಿರುವ ಸ್ಥಳೀಯರು, ಈ ಬಾರಿ ಮೂರ್ತಿಯನ್ನು ಪೂರ್ಣ ಪ್ರಮಾಣದಲ್ಲಿ ಹೊರ ತೆಗೆಯಬೇಕೆಂದು ನಿರ್ಧರಿಸಿದ್ದರು.
ಗ್ರಾಮಸ್ಥರು ಪ್ರತಿ ಮನೆಯಿಂದಲೂ ಹಣ ವಸೂಲಿ ಮಾಡಿ, ಕೆಲಸ ಕೂಡ ಆರಂಭಿಸಿದರು. ದಾನಿಯೊಬ್ಬರು ಜೆಸಿಬಿಯನ್ನು ಉಚಿತವಾಗಿ ನೀಡಿದ್ದರು. ಶೇ 70ರಷ್ಟು ಮೂರ್ತಿ ಸುತ್ತಲ ಮಣ್ಣನ್ನು ತೆರವುಗೊಳಿಸಲಾಯಿತು. ಈ ವೇಳೆ ಮತ್ತೊಂದು ನಂದಿ ಮೂರ್ತಿ ವಿಗ್ರಹ ಕೂಡ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಪುರಾತತ್ವ ಇಲಾಖೆಯವರು ಉತ್ಖನನ ಕಾರ್ಯವನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ. ತಾತ್ಕಾಲಿಕವಾಗಿ ಈ ಕಾರ್ಯವನ್ನು ಅಲ್ಲಿಗೇ ಕೈ ಬಿಡಲಾಗಿದೆ.

ಜೋಡಿ ನಂದಿ ಸಿಕ್ಕ ಸ್ಥಳಕ್ಕೆ ಭೇಟಿ ನೀಡಿದ ಮೈಸೂರಿನ ಪಾರಂಪರಿಕ ಸಮಿತಿ ಸದಸ್ಯರಾದ ರಂಗರಾಜು ಅವರು ಈ ಬಗ್ಗೆ ಪ್ರತಿಕ್ರಿಯಿಸಿ, "ರಾಜಾಡಳಿತದ ಕಾಲದಲ್ಲಿ ದೇವಸ್ಥಾನ ನಿರ್ಮಾಣ ಮಾಡುವ ಉದ್ದೇಶದಿಂದಲೇ ಈ ಜೋಡಿ ನಂದಿ ವಿಗ್ರಹಗಳನ್ನು ಕೆತ್ತನೆ ಮಾಡಿರಬಹುದು. ಆದರೆ ಮೂರ್ತಿ ಕೆತ್ತನೆ ಪೂರ್ಣಗೊಂಡಿಲ್ಲ. 20 ಅಡಿ ಕೆಳಗಿರುವ ಈ ಬೃಹತ್ ಮೂರ್ತಿಗಳು ಕಳೆದ ವರ್ಷ ಮಳೆ ನೀರಿನಲ್ಲಿ ಮುಳುಗಿ ಹೋಗಿದ್ದವು. ಈ ಬಾರಿ ಮಳೆ ನೀರು ಕಡಿಮೆ ಇರುವ ಕಾರಣ ಜೆಸಿಬಿಯಿಂದ ಮೂರ್ತಿಯ ಸುತ್ತಲೂ ಮಣ್ಣನ್ನು ತೆಗೆಸಿದ್ದಾರೆ. ಶಿಲೆಯನ್ನು ಗಮನಿಸಿದರೆ ಹಿಂದೆ ಹೊಯ್ಸಳರು ಹೆಚ್ಚಾಗಿ ಬಳಕೆ ಮಾಡುತ್ತಿದ್ದ ಕಲ್ಲನ್ನೇ ನಂದಿ ವಿಗ್ರಹ ಕೆತ್ತಲು ಬಳಕೆ ಮಾಡಲಾಗಿದೆ" ಎಂದು ತಿಳಿಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications