ಮೈಸೂರಿನ ಅರಸಿನಕೆರೆಯಲ್ಲಿ ಅಚ್ಚರಿ! ಮೊದಲು ಸಿಕ್ಕಿದ್ದರ ಎದುರು ಇನ್ನೊಂದು ನಂದಿ
ಮೈಸೂರು, ಜುಲೈ 16: ಎರಡು ದಿನದ ಕೆಳಗೆ ಮೈಸೂರಿನ ಅರಸಿನಕೆರೆ ಗ್ರಾಮದಲ್ಲಿ ಕಂಡುಬಂದ ನಂದಿ ಮೂರ್ತಿಯ ಎದುರೇ ಮತ್ತೊಂದು ನಂದಿ ವಿಗ್ರಹ ಕಂಡಿದೆ. ಇದನ್ನು ಪೂರ್ಣ ಪ್ರಮಾಣದಲ್ಲಿ ಹೊರ ತೆಗೆಯಲು ಗ್ರಾಮಸ್ಥರು ಪ್ರಯತ್ನಿಸಿದ್ದರು. ಆದರೆ ಈ ಕಾರ್ಯವನ್ನು ಪುರಾತತ್ವ ಇಲಾಖೆ ಸದ್ಯ ನಿಲ್ಲಿಸಿದೆ.
ಅರಸಿನಕೆರೆ ಗ್ರಾಮದ ಹಳ್ಳವೊಂದರಲ್ಲಿ ನಂದಿ ವಿಗ್ರಹದ ಮುಖದ ಭಾಗ ಮೊದಲು ಕಾಣಿಸಿಕೊಂಡಿತ್ತು. ಅದಕ್ಕೆ ಕೆಲವರು ಪೂಜೆಯನ್ನೂ ಸಲ್ಲಿಸುತ್ತಿದ್ದರು. ಪುರಾತನ ಕಥೆಯನ್ನು ನೆಚ್ಚಿಕೊಂಡಿರುವ ಸ್ಥಳೀಯರು, ಈ ಬಾರಿ ಮೂರ್ತಿಯನ್ನು ಪೂರ್ಣ ಪ್ರಮಾಣದಲ್ಲಿ ಹೊರ ತೆಗೆಯಬೇಕೆಂದು ನಿರ್ಧರಿಸಿದ್ದರು.
ಗ್ರಾಮಸ್ಥರು ಪ್ರತಿ ಮನೆಯಿಂದಲೂ ಹಣ ವಸೂಲಿ ಮಾಡಿ, ಕೆಲಸ ಕೂಡ ಆರಂಭಿಸಿದರು. ದಾನಿಯೊಬ್ಬರು ಜೆಸಿಬಿಯನ್ನು ಉಚಿತವಾಗಿ ನೀಡಿದ್ದರು. ಶೇ 70ರಷ್ಟು ಮೂರ್ತಿ ಸುತ್ತಲ ಮಣ್ಣನ್ನು ತೆರವುಗೊಳಿಸಲಾಯಿತು. ಈ ವೇಳೆ ಮತ್ತೊಂದು ನಂದಿ ಮೂರ್ತಿ ವಿಗ್ರಹ ಕೂಡ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಪುರಾತತ್ವ ಇಲಾಖೆಯವರು ಉತ್ಖನನ ಕಾರ್ಯವನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ. ತಾತ್ಕಾಲಿಕವಾಗಿ ಈ ಕಾರ್ಯವನ್ನು ಅಲ್ಲಿಗೇ ಕೈ ಬಿಡಲಾಗಿದೆ.

ಜೋಡಿ ನಂದಿ ಸಿಕ್ಕ ಸ್ಥಳಕ್ಕೆ ಭೇಟಿ ನೀಡಿದ ಮೈಸೂರಿನ ಪಾರಂಪರಿಕ ಸಮಿತಿ ಸದಸ್ಯರಾದ ರಂಗರಾಜು ಅವರು ಈ ಬಗ್ಗೆ ಪ್ರತಿಕ್ರಿಯಿಸಿ, "ರಾಜಾಡಳಿತದ ಕಾಲದಲ್ಲಿ ದೇವಸ್ಥಾನ ನಿರ್ಮಾಣ ಮಾಡುವ ಉದ್ದೇಶದಿಂದಲೇ ಈ ಜೋಡಿ ನಂದಿ ವಿಗ್ರಹಗಳನ್ನು ಕೆತ್ತನೆ ಮಾಡಿರಬಹುದು. ಆದರೆ ಮೂರ್ತಿ ಕೆತ್ತನೆ ಪೂರ್ಣಗೊಂಡಿಲ್ಲ. 20 ಅಡಿ ಕೆಳಗಿರುವ ಈ ಬೃಹತ್ ಮೂರ್ತಿಗಳು ಕಳೆದ ವರ್ಷ ಮಳೆ ನೀರಿನಲ್ಲಿ ಮುಳುಗಿ ಹೋಗಿದ್ದವು. ಈ ಬಾರಿ ಮಳೆ ನೀರು ಕಡಿಮೆ ಇರುವ ಕಾರಣ ಜೆಸಿಬಿಯಿಂದ ಮೂರ್ತಿಯ ಸುತ್ತಲೂ ಮಣ್ಣನ್ನು ತೆಗೆಸಿದ್ದಾರೆ. ಶಿಲೆಯನ್ನು ಗಮನಿಸಿದರೆ ಹಿಂದೆ ಹೊಯ್ಸಳರು ಹೆಚ್ಚಾಗಿ ಬಳಕೆ ಮಾಡುತ್ತಿದ್ದ ಕಲ್ಲನ್ನೇ ನಂದಿ ವಿಗ್ರಹ ಕೆತ್ತಲು ಬಳಕೆ ಮಾಡಲಾಗಿದೆ" ಎಂದು ತಿಳಿಸಿದ್ದಾರೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications