ಮೈಸೂರು : ಗನ್ ಹೌಸ್ನಿಂದ ಚಾಮುಂಡಿ ಬೆಟ್ಟಕ್ಕೆ ಸುರಂಗ ಪತ್ತೆ
ಮೈಸೂರು, ಜ. 21: ನಗರದ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ಬಳಿ ಬುಧವಾರ ಮತ್ತೊಂದು ಸುರಂಗ ಮಾರ್ಗ ಪತ್ತೆಯಾಗಿದೆ. ಅರಮನೆ ಸನಿಹದಲ್ಲಿಯೇ ಇರುವ ಗನ್ ಹೌಸ್ನಲ್ಲಿ ಈ ಗುಹೆ ಇದ್ದು, ಒಂದು ತುದಿ ಚಾಮುಂಡಿ ಬೆಟ್ಟಕ್ಕೆ ಹಾಗೂ ಇನ್ನೊಂದು ತುದಿ ಅಬಾವಿಲಾಸ ಅರಮನೆಯನ್ನು ಸಂಪರ್ಕಿಸುತ್ತದೆ ಎನ್ನಲಾಗಿದೆ.
ಸ್ಥಳೀಯರ ಪ್ರಕಾರ ಈ ಸುರಂಗ ಮಾರ್ಗವನ್ನು ಸುಮಾರು 150 ವರ್ಷಗಳ ಹಿಂದೆ ನಿರ್ಮಿಸಲಾಗಿದೆ. ರಾಜರ ಕಾಲದಲ್ಲಿ ಯುದ್ಧ ನಡೆದಾಗ ಸೋಲುವ ಸ್ಥಿತಿ ಬಂದರೆ ತಪ್ಪಿಸಿಕೊಳ್ಳುವ ಉದ್ದೇಶದಿಂದ ಅಂಬಾವಿಲಾಸ ಅರಮನೆಯಿಂದ ನಾಲ್ಕೂ ದಿಕ್ಕಿನಲ್ಲಿ ಒಂದೊಂದು ಸುರಂಗ ಮಾರ್ಗ ಕೊರೆಯಲಾಗಿತ್ತು. ಈ ಮೂಲಕ ರಾಜರು ತಪ್ಪಿಸಿಕೊಳ್ಳುವ ಉದ್ದೇಶ ಹೊಂದಿದ್ದರು.
ವಿಶ್ವಮಾನವ ಉದ್ಯನವನದ ಬಳಿ ಒಳಚರಂಡಿ ಕಾಮಗಾರಿ ನಡೆಸುತ್ತಿರುವಾಗ ಈ ಸುರಂಗ ಮಾರ್ಗ ಪತ್ತೆಯಾಗಿದೆ. ಈ ಸುರಂಗ ಸುಮಾರು 3 ಅಡಿ ಅಗಲ ಹಾಗೂ 4ರಿಂದ 5 ಅಡಿ ಎತ್ತರವಿದೆ. ಓರ್ವ ವ್ಯಕ್ತಿ ಈ ಗುಹೆ ಮೂಲಕ ಸುಲಭವಾಗಿ ನುಸುಳಿ ಹೋಗಲು ಅವಕಾಶವಿದೆ. ಗುಹೆಯನ್ನು ಇಟ್ಟಿಗೆ ಮತ್ತು ಸುಣ್ಣದ ಗಾರೆ ಉಪಯೋಗಿಸಿ ನಿರ್ಮಿಸಲಾಗಿದೆ. ಈ ಗುಹೆಯ ಕೆಲವೆಡೆ ಮೆಟ್ಟಿಲುಗಳು ಕಂಡುಬಂದಿವೆ.
ಗುಹೆಯು ಸುಮಾರು 10ರಿಂದ 15 ಅಡಿ ದೂರದವರೆಗೆ ಮುಂದುವರಿದಿದ್ದು, ನಂತರ ಕಲ್ಲು ಮಣ್ಣುಗಳು ದಾರಿಯನ್ನು ಮುಚ್ಚಿವೆ. ಪುರಾತತ್ವ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಸುಮಾರು ಆರು ತಿಂಗಳುಗಳ ಹಿಂದೆಯೂ ಇದೇ ಜಾಗದಲ್ಲಿ ಎರಡು ಕಂದಕಗಳು ಪತ್ತೆಯಾಗಿದ್ದವು. ಇವು ಮ್ಯಾನ್ಹೋಲ್ಗಳು ಎಂದು ಪುರಾತತ್ವ ಇಲಾಖೆಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದರು.

-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications