ಮೈಸೂರು : ಗನ್ ಹೌಸ್ನಿಂದ ಚಾಮುಂಡಿ ಬೆಟ್ಟಕ್ಕೆ ಸುರಂಗ ಪತ್ತೆ
ಮೈಸೂರು, ಜ. 21: ನಗರದ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ಬಳಿ ಬುಧವಾರ ಮತ್ತೊಂದು ಸುರಂಗ ಮಾರ್ಗ ಪತ್ತೆಯಾಗಿದೆ. ಅರಮನೆ ಸನಿಹದಲ್ಲಿಯೇ ಇರುವ ಗನ್ ಹೌಸ್ನಲ್ಲಿ ಈ ಗುಹೆ ಇದ್ದು, ಒಂದು ತುದಿ ಚಾಮುಂಡಿ ಬೆಟ್ಟಕ್ಕೆ ಹಾಗೂ ಇನ್ನೊಂದು ತುದಿ ಅಬಾವಿಲಾಸ ಅರಮನೆಯನ್ನು ಸಂಪರ್ಕಿಸುತ್ತದೆ ಎನ್ನಲಾಗಿದೆ.
ಸ್ಥಳೀಯರ ಪ್ರಕಾರ ಈ ಸುರಂಗ ಮಾರ್ಗವನ್ನು ಸುಮಾರು 150 ವರ್ಷಗಳ ಹಿಂದೆ ನಿರ್ಮಿಸಲಾಗಿದೆ. ರಾಜರ ಕಾಲದಲ್ಲಿ ಯುದ್ಧ ನಡೆದಾಗ ಸೋಲುವ ಸ್ಥಿತಿ ಬಂದರೆ ತಪ್ಪಿಸಿಕೊಳ್ಳುವ ಉದ್ದೇಶದಿಂದ ಅಂಬಾವಿಲಾಸ ಅರಮನೆಯಿಂದ ನಾಲ್ಕೂ ದಿಕ್ಕಿನಲ್ಲಿ ಒಂದೊಂದು ಸುರಂಗ ಮಾರ್ಗ ಕೊರೆಯಲಾಗಿತ್ತು. ಈ ಮೂಲಕ ರಾಜರು ತಪ್ಪಿಸಿಕೊಳ್ಳುವ ಉದ್ದೇಶ ಹೊಂದಿದ್ದರು.
ವಿಶ್ವಮಾನವ ಉದ್ಯನವನದ ಬಳಿ ಒಳಚರಂಡಿ ಕಾಮಗಾರಿ ನಡೆಸುತ್ತಿರುವಾಗ ಈ ಸುರಂಗ ಮಾರ್ಗ ಪತ್ತೆಯಾಗಿದೆ. ಈ ಸುರಂಗ ಸುಮಾರು 3 ಅಡಿ ಅಗಲ ಹಾಗೂ 4ರಿಂದ 5 ಅಡಿ ಎತ್ತರವಿದೆ. ಓರ್ವ ವ್ಯಕ್ತಿ ಈ ಗುಹೆ ಮೂಲಕ ಸುಲಭವಾಗಿ ನುಸುಳಿ ಹೋಗಲು ಅವಕಾಶವಿದೆ. ಗುಹೆಯನ್ನು ಇಟ್ಟಿಗೆ ಮತ್ತು ಸುಣ್ಣದ ಗಾರೆ ಉಪಯೋಗಿಸಿ ನಿರ್ಮಿಸಲಾಗಿದೆ. ಈ ಗುಹೆಯ ಕೆಲವೆಡೆ ಮೆಟ್ಟಿಲುಗಳು ಕಂಡುಬಂದಿವೆ.
ಗುಹೆಯು ಸುಮಾರು 10ರಿಂದ 15 ಅಡಿ ದೂರದವರೆಗೆ ಮುಂದುವರಿದಿದ್ದು, ನಂತರ ಕಲ್ಲು ಮಣ್ಣುಗಳು ದಾರಿಯನ್ನು ಮುಚ್ಚಿವೆ. ಪುರಾತತ್ವ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಸುಮಾರು ಆರು ತಿಂಗಳುಗಳ ಹಿಂದೆಯೂ ಇದೇ ಜಾಗದಲ್ಲಿ ಎರಡು ಕಂದಕಗಳು ಪತ್ತೆಯಾಗಿದ್ದವು. ಇವು ಮ್ಯಾನ್ಹೋಲ್ಗಳು ಎಂದು ಪುರಾತತ್ವ ಇಲಾಖೆಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದರು.

-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications