ಕಣ್ಮನ ಸೆಳೆಯುತ್ತಿದೆ ವರ್ಲಿ ಕಲೆಯಲ್ಲಿ ಅರಳಿದ ದಸರಾ ವೈಭವ
ಮೈಸೂರು, ಸೆಪ್ಟೆಂಬರ್. 21 : ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯನ್ನು ಬಿಂಬಿಸುವ ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕೇವಲ 20 ದಿನಗಳಷ್ಟೇ ಬಾಕಿ ಉಳಿದಿವೆ. ಅರಮನೆಯ ಆವರಣ ಶುಚಿಗೊಳಿಸುವುದು, ವಿದ್ಯುತ್ ದೀಪಾಲಂಕಾರದ ದುರಸ್ತಿ, ಹೊಸ ಬಲ್ಬ್ ಗಳ ಅಳವಡಿಕೆ ಭರದಿಂದ ಸಾಗಿದೆ.
ನಗರದಲ್ಲಿ ಒಂದು ಲಕ್ಷಕ್ಕೂ ಅಧಿಕ ಬಲ್ಬ್ ಗಳನ್ನು ಹೊಂದಿರುವ ಅಂಬಾ ವಿಲಾಸ ಅರಮನೆಯ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆಯನ್ನು ದುರಸ್ತಿ ಮಾಡಲಾಗುತ್ತಿದೆ. ಅರಮನೆಯ ಸೀಲಿಂಗ್ ಶುಚಿಗೊಳಿಸುವುದು, ವಿದ್ಯುತ್ ದೀಪಗಳ ಅಳವಡಿಕೆ, ಪೆಂಟಿಂಗ್ ಕಾರ್ಯಗಳು ಭರದಿಂದ ಸಾಗಿವೆ.
ಇದಲ್ಲದೆ ರಸ್ತೆಗಳ ಡಾಂಬರೀಕರಣ, ಗುಂಡಿಮುಚ್ಚುವುದು ಕೂಡ ಭರದಿಂದ ಸಾಗಿದೆ. ದಸರಾ ಮೆರವಣಿಗೆ ಸಾಗುವ ಮಾರ್ಗದಲ್ಲೂ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದ್ದು, ಆಯ್ದ ವೃತ್ತಗಳಲ್ಲಿ ಖಾಸಗಿಯವರ ಸಹಭಾಗಿತ್ವದಲ್ಲಿ ದೀಪಾಲಂಕಾರಕ್ಕೆ ಸಿದ್ಧತೆ ನಡೆಯುತ್ತಿದೆ.

ಸರ್ಕಾರಿ ಕಟ್ಟಡಗಳಿಗೂ ಎಂದಿನಂತೆ ದೀಪಾಲಂಕಾರವನ್ನು ವಿಶೇಷವಾಗಿ ಮಾಡಲಾಗುತ್ತಿದೆ. ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ನಗರದ ಹೊರ ವಲಯದಲ್ಲಿ ಬಣ್ಣ ಬಣ್ಣದ ಚಿತ್ತಾರಗಳು ಸೆಳೆಯುವಂತಿದೆ.
ನಗರದ ಹಲವು ಕಡೆಗಳಲ್ಲಿ ಗೋಡೆಗಳ ಮೇಲೆ ವರ್ಲಿ ಚಿತ್ರಗಳು ಕಲಾವಿದರ ಕುಂಚದಿಂದ ಅರಳಿದ್ದು, ನೋಡುಗರನ್ನು ತನ್ನತ್ತ ಸೆಳೆಯುವಂತೆ ಮಾಡಿದೆ. ಸ್ವಚ್ಛತೆಯಿಲ್ಲದ ಪ್ರದೇಶಗಳಲ್ಲಿ ಸ್ವಚ್ಛ ಮಾಡಿ ವರ್ಲಿ ಚಿತ್ರಗಳನ್ನು ಬಿಡಿಸಿ ದಸರಾ ವೈಭವವನ್ನು ಸಾರುತ್ತಿದ್ದಾರೆ.

ದಸರಾ ಸಂದರ್ಭದಲ್ಲಿ ಮೈಸೂರಿನ ಕಾಂಪೌಂಡ್ ಗಳಲ್ಲೂ ನಾಡಿನ ಪರಂಪರೆ ಬಿಂಬಿಸಬೇಕು. ಇದರಿಂದ ನಗರದ ಸೌಂದರ್ಯ ಇಮ್ಮಡಿಯಾಗುವುದರ ಜೊತೆಗೆ ಪ್ರವಾಸಿಗರಿಗೂ ವಿಶೇಷ ಅನುಭವವಾಗುತ್ತದೆ ಎಂಬುದು ನಗರಪಾಲಿಕೆ ಆಯುಕ್ತ ಕೆ.ಹೆಚ್.ಜಗದೀಶ್ ಅವರ ಅಭಿಪ್ರಾಯ.
ಈ ನಿಟ್ಟಿನಲ್ಲಿ ವಿಶೇಷ ಆಸಕ್ತಿ ವಹಿಸಿದ ಅವರು, ಪ್ರಾಯೋಜಕರ ಸಹಕಾರದೊಂದಿಗೆ ಅನೇಕ ಕಡೆಗಳಲ್ಲಿ ಚಿತ್ರಕಲೆಯಲ್ಲಿ ಸಂಸ್ಕೃತಿ ಬಿಂಬಿಸುವ ಪ್ರಯತ್ನ ಮುಂದುವರಿಸಿದ್ದಾರೆ. ಅನೇಕ ಉದ್ಯಮಿ ಗಳು ಈ ಕಾರ್ಯಕ್ಕೆ ಕೈಜೋಡಿಸಿದ್ದಾರೆ. ಕಾವಾ ಹಳೆಯ ವಿದ್ಯಾರ್ಥಿಗಳು ಸೇರಿದಂತೆ ಅನೇಕ ಕಲಾವಿದರು ಚಿತ್ರಕಲೆಯಲ್ಲಿ ಮಗ್ನರಾಗಿದ್ದಾರೆ.

ದಸರಾ ಜಂಬೂ ಸವಾರಿ, ಮೆರವಣಿಗೆಯಲ್ಲಿ ಸಾಗುವ ಕಲಾತಂಡಗಳು, ವೀರಗಾಸೆ, ಡೊಳ್ಳು ಕುಣಿತ, ಕಂಸಾಳೆ, ಗಾರುಡಿ ಗೊಂಬೆ, ಕಾಡು ಪ್ರಾಣಿಗಳು, ನೃತ್ಯಗಾರರು, ರೈಲು ಬಂಡಿ ಹೀಗೆ ವಿಭಿನ್ನ ಚಿತ್ರಗಳು ಕಣ್ಮನ ಸೆಳೆಯುತ್ತಿವೆ.
ಅಲ್ಲದೆ ಕೆಆರ್ಎಸ್ ರಸ್ತೆಯಲ್ಲಿ ರುವ ಗುಡಿಯಾಕಾರದ ವಾಲ್ ಛೇಂಬರ್ ಗಳು ವಿಶೇಷವಾದ ವರ್ಲಿ ಆರ್ಟ್ ಚಿತ್ರ ಕಲೆಯಿಂದ ವಿಭಿನ್ನವಾಗಿ ಕಾಣುತ್ತಿವೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications