Get Updates
Get notified of breaking news, exclusive insights, and must-see stories!

'ಗೌರವಧನ ಮಾತ್ರ ಪುಡಿಗಾಸು': ಮೈಸೂರಿನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು, ಡಿಸೆಂಬರ್‌ 31: ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿಸಿ 15 ಸಾವಿರ ರೂಪಾಯಿ ಮಾಸಿಕ ಗೌರವಧನ ನಿಗದಿಯಾಗಬೇಕು. ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ, ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ 2 ಸಾವಿರ ಗೌರವಧನ ಹೆಚ್ಚಿಸಬೇಕು. ಮುಂತಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅದರ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತಿದೆ.

ಆರೋಗ್ಯ ಕ್ಷೇತ್ರದಲ್ಲಿ ಸ್ಪಷ್ಟವಾಗಿ ಕಾಣುವ ಏಕೈಕ ಸಾಧನ ಆಧಾರಸ್ತಂಭ ಅಂದರೆ ಆಶಾ ಕಾರ್ಯಕರ್ತೆಯರು. ಇವರ ಸೇವೆ ಬಡಜನತೆಯ ಆರೋಗ್ಯಕ್ಕೆ ಬಹುಮುಖ್ಯವಾಗಿ ಅವಶ್ಯಕತೆ ಇದೆ. ಆಶಾಗಳ ಸೇವೆಯಿಂದ ಕಳೆದ 15 ವರ್ಷಗಳಿಂದ ತಾಯಿ ಹಾಗೂ ಶಿಶು ಮರಣ ಸಂಖ್ಯೆ ಇಳಿಕೆ, ವಿವಿಧ ರೋಗರುಜಿನಗಳ ತಡೆಗಟ್ಟುವಿಕೆ, ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ಅಮೋಘ ಸೇವೆ ಸಲ್ಲಿಸಿದ್ದಾರೆ. ರಾಷ್ಟ್ರದಲ್ಲಿಯೇ ಅತ್ಯುತ್ತಮ ಸೇವೆ ಸಲ್ಲಿಸಿದ ಕೀರ್ತಿ ಜತೆಗೆ ಕೇಂದ್ರದ ಪ್ರಶಂಸನಾ ಪತ್ರ ಸಿಕ್ಕಿದೆ.

Asha Workers In Mysuru Protest For 15 000 Monthly Honorarium

ಆದರೆ, ಆಶಾಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಸಿಗುವ ಪ್ರೋತ್ಸಾಹಧನ, ಗೌರವಧನ ಮಾತ್ರ ಪುಡಿಗಾಸು ಆಗಿದೆ. ಇವರ ಸೇವೆಯನ್ನು ಸರ್ಕಾರಗಳು, ಇಲಾಖೆಗಳು ಕೊಂಡಾಡುತ್ತವೆ. ಆದರೆ, ಸೇವೆಗೆ ತಕ್ಕ ಪ್ರತಿಫಲ ನೀಡದೆ, ಶೋಷಿಸುತ್ತಿರುವುದು ಅತ್ಯಂತ ಅಮಾನವೀಯ. ಕರ್ನಾಟಕದಲ್ಲಿ ವಿಶೇಷ ಪೋರ್ಟಲ್ ಆಶಾ ನಿಧಿ ಮಾಡಿ ಆ ಮೂಲಕ ಆನ್ಲೈನ್ ಎಂಟ್ರಿ ಮಾಡಿಸಿ, ಪ್ರೋತ್ಸಾಹಧನ ನೀಡುವ ಪದ್ಧತಿ ಜಾರಿಗೊಳಿಸಲಾಗಿದೆ. ಕಳೆದ 8-9 ವರ್ಷಗಳಿಂದ ಆಶಾ ಕಾರ್ಯಕರ್ತೆಯರು ಈ ವೇತನ ಪದ್ಧತಿಯಿಂದಾಗಿ ಆಗುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ನಿರಂತರ ಹೋರಾಟ ನಡೆಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿಸಿ 15 ಸಾವಿರ ರೂಪಾಯಿ ಮಾಸಿಕ ಗೌರವಧನ ನಿಗದಿಯಾಗಬೇಕು. ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ, ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ 2 ಸಾವಿರ ಗೌರವಧನ ಹೆಚ್ಚಿಸಬೇಕು. ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳದಂತೆ 5 ಲಕ್ಷಕ್ಕೆ ಏರಿಕೆ ಮಾಡಬೇಕು. ತೀವ್ರ ಅನಾರೋಗ್ಯ, ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಕನಿಷ್ಠ 3 ತಿಂಗಳು ಪ್ರೋತ್ಸಾಹಧನ ನೀಡುವ ಜೊತೆಗೆ ಸೇವೆಯಲ್ಲಿದ್ದಾಗ ಆಗುವ ಅನಾಹುತಗಳಿಗೆ ಜವಾಬ್ದಾರಿ ಇಲಾಖೆ ವಹಿಸಿಕೊಳ್ಳಬೇಕು.

ಬಾಕಿ ಇರುವ 2-3 ತಿಂಗಳ ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಆಶಾಗಳದಲ್ಲದ ಕೆಲಸವನ್ನು ಅಧಿಕೃತವಾಗಿ ಮಾಡಲು ಹೇಳಿರುವ ಆದೇಶ ವಾಪಸ್ ಪಡೆಯಬೇಕು. ಪ್ರತಿ ವರ್ಷ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಬೇಕು. ತೀವ್ರ ಕಾಯಿಲೆಗಳಿದ್ದಲ್ಲಿ ಕೂಡಲೇ ಉಚಿತ ಚಿಕಿತ್ಸೆ ಕೊಡಿಸಬೇಕು. ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ, ಕನಿಷ್ಠ ವೇತನ, ಗ್ರಾಜ್ಯುಟಿ, ಪಿಎಫ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷೆ ಉಮಾದೇವಿ ಸೇರಿದಂತೆ ನೂರಾರು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+