'ಗೌರವಧನ ಮಾತ್ರ ಪುಡಿಗಾಸು': ಮೈಸೂರಿನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಮೈಸೂರು, ಡಿಸೆಂಬರ್ 31: ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿಸಿ 15 ಸಾವಿರ ರೂಪಾಯಿ ಮಾಸಿಕ ಗೌರವಧನ ನಿಗದಿಯಾಗಬೇಕು. ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ, ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ 2 ಸಾವಿರ ಗೌರವಧನ ಹೆಚ್ಚಿಸಬೇಕು. ಮುಂತಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅದರ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತಿದೆ.
ಆರೋಗ್ಯ ಕ್ಷೇತ್ರದಲ್ಲಿ ಸ್ಪಷ್ಟವಾಗಿ ಕಾಣುವ ಏಕೈಕ ಸಾಧನ ಆಧಾರಸ್ತಂಭ ಅಂದರೆ ಆಶಾ ಕಾರ್ಯಕರ್ತೆಯರು. ಇವರ ಸೇವೆ ಬಡಜನತೆಯ ಆರೋಗ್ಯಕ್ಕೆ ಬಹುಮುಖ್ಯವಾಗಿ ಅವಶ್ಯಕತೆ ಇದೆ. ಆಶಾಗಳ ಸೇವೆಯಿಂದ ಕಳೆದ 15 ವರ್ಷಗಳಿಂದ ತಾಯಿ ಹಾಗೂ ಶಿಶು ಮರಣ ಸಂಖ್ಯೆ ಇಳಿಕೆ, ವಿವಿಧ ರೋಗರುಜಿನಗಳ ತಡೆಗಟ್ಟುವಿಕೆ, ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ಅಮೋಘ ಸೇವೆ ಸಲ್ಲಿಸಿದ್ದಾರೆ. ರಾಷ್ಟ್ರದಲ್ಲಿಯೇ ಅತ್ಯುತ್ತಮ ಸೇವೆ ಸಲ್ಲಿಸಿದ ಕೀರ್ತಿ ಜತೆಗೆ ಕೇಂದ್ರದ ಪ್ರಶಂಸನಾ ಪತ್ರ ಸಿಕ್ಕಿದೆ.

ಆದರೆ, ಆಶಾಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಸಿಗುವ ಪ್ರೋತ್ಸಾಹಧನ, ಗೌರವಧನ ಮಾತ್ರ ಪುಡಿಗಾಸು ಆಗಿದೆ. ಇವರ ಸೇವೆಯನ್ನು ಸರ್ಕಾರಗಳು, ಇಲಾಖೆಗಳು ಕೊಂಡಾಡುತ್ತವೆ. ಆದರೆ, ಸೇವೆಗೆ ತಕ್ಕ ಪ್ರತಿಫಲ ನೀಡದೆ, ಶೋಷಿಸುತ್ತಿರುವುದು ಅತ್ಯಂತ ಅಮಾನವೀಯ. ಕರ್ನಾಟಕದಲ್ಲಿ ವಿಶೇಷ ಪೋರ್ಟಲ್ ಆಶಾ ನಿಧಿ ಮಾಡಿ ಆ ಮೂಲಕ ಆನ್ಲೈನ್ ಎಂಟ್ರಿ ಮಾಡಿಸಿ, ಪ್ರೋತ್ಸಾಹಧನ ನೀಡುವ ಪದ್ಧತಿ ಜಾರಿಗೊಳಿಸಲಾಗಿದೆ. ಕಳೆದ 8-9 ವರ್ಷಗಳಿಂದ ಆಶಾ ಕಾರ್ಯಕರ್ತೆಯರು ಈ ವೇತನ ಪದ್ಧತಿಯಿಂದಾಗಿ ಆಗುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ನಿರಂತರ ಹೋರಾಟ ನಡೆಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿಸಿ 15 ಸಾವಿರ ರೂಪಾಯಿ ಮಾಸಿಕ ಗೌರವಧನ ನಿಗದಿಯಾಗಬೇಕು. ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ, ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ 2 ಸಾವಿರ ಗೌರವಧನ ಹೆಚ್ಚಿಸಬೇಕು. ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳದಂತೆ 5 ಲಕ್ಷಕ್ಕೆ ಏರಿಕೆ ಮಾಡಬೇಕು. ತೀವ್ರ ಅನಾರೋಗ್ಯ, ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಕನಿಷ್ಠ 3 ತಿಂಗಳು ಪ್ರೋತ್ಸಾಹಧನ ನೀಡುವ ಜೊತೆಗೆ ಸೇವೆಯಲ್ಲಿದ್ದಾಗ ಆಗುವ ಅನಾಹುತಗಳಿಗೆ ಜವಾಬ್ದಾರಿ ಇಲಾಖೆ ವಹಿಸಿಕೊಳ್ಳಬೇಕು.
ಬಾಕಿ ಇರುವ 2-3 ತಿಂಗಳ ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಆಶಾಗಳದಲ್ಲದ ಕೆಲಸವನ್ನು ಅಧಿಕೃತವಾಗಿ ಮಾಡಲು ಹೇಳಿರುವ ಆದೇಶ ವಾಪಸ್ ಪಡೆಯಬೇಕು. ಪ್ರತಿ ವರ್ಷ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಬೇಕು. ತೀವ್ರ ಕಾಯಿಲೆಗಳಿದ್ದಲ್ಲಿ ಕೂಡಲೇ ಉಚಿತ ಚಿಕಿತ್ಸೆ ಕೊಡಿಸಬೇಕು. ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ, ಕನಿಷ್ಠ ವೇತನ, ಗ್ರಾಜ್ಯುಟಿ, ಪಿಎಫ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷೆ ಉಮಾದೇವಿ ಸೇರಿದಂತೆ ನೂರಾರು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications