ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಮೈಸೂರು, ಮೇ 29; ರಾಜ್ಯದ ವಿವಿಧೆಡೆ ಆಶಾ ಕಾರ್ಯಕರ್ತೆಯರ ಮೇಲೆ ನಡೆಯುತ್ತಿರುವ ಹಲ್ಲೆ ಖಂಡಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
Recommended Video
ಕಳ್ಳ
ಮಾರ್ಗದಲ್ಲಿ
ಬರುವವರ
ಮೇಲೆ
ಹದ್ದಿನ
ಕಣ್ಣು
ಇರಿಸಲಾಗಿದೆ
|
Oneindia
Kannada
ಆಶಾ ಸಂರಕ್ಷಣಾ ದಿನದ ಅಂಗವಾಗಿ ರಾಜ್ಯವ್ಯಾಪಿ ಹೋರಾಟ ಕೈಗೊಳ್ಳಲಾಗಿದೆ. ಆಶಾ ಕಾರ್ಯಕರ್ತೆಯರ ಮೆಲೆ ಹಲ್ಲೆ ನಡೆಸಿದವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಈ ಸಂದರ್ಭ ಒತ್ತಾಯಿಸಿದರು.
ಮಡಿಕೇರಿಯಲ್ಲೂ ಮಾಹಿತಿ ಸಂಗ್ರಹಕ್ಕೆ ತೆರಳಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ
ಸರ್ಕಾರವು ಕೋವಿಡ್ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ವಿಶೇಷ ಪ್ಯಾಕೇಜ್ ನೀಡಬೇಕು. ಅಗತ್ಯವಿರುವ ಮಾಸ್ಕ್, ಸ್ಯಾನಿಟೈಜರ್, ಸುರಕ್ಷತಾ ಸಾಮಗ್ರಿ ನೀಡಬೇಕು. ಜೊತೆಗೆ 50 ಲಕ್ಷ ವಿಮಾ ಸೌಲಭ್ಯವನ್ನು ಕುಟುಂಬಸ್ಥರಿಗೆ ನೀಡಬೇಕೆಂದು ಒತ್ತಾಯಿಸಿದರು. ಸರ್ಕಾರ ಸೂಕ್ತವಾಗಿ ಸ್ಪಂದಿಸದಿದ್ದರೆ ತೀವ್ರ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿದ್ದಾರೆ.
Comments
English summary
Asha workers staged a protest in front of mysuru dc office today condemning the assult on Asha workers across the state,