ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಮೈಸೂರು, ಮೇ 29; ರಾಜ್ಯದ ವಿವಿಧೆಡೆ ಆಶಾ ಕಾರ್ಯಕರ್ತೆಯರ ಮೇಲೆ ನಡೆಯುತ್ತಿರುವ ಹಲ್ಲೆ ಖಂಡಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
Recommended Video
ಕಳ್ಳ ಮಾರ್ಗದಲ್ಲಿ ಬರುವವರ ಮೇಲೆ ಹದ್ದಿನ ಕಣ್ಣು ಇರಿಸಲಾಗಿದೆ | Oneindia Kannada
ಆಶಾ ಸಂರಕ್ಷಣಾ ದಿನದ ಅಂಗವಾಗಿ ರಾಜ್ಯವ್ಯಾಪಿ ಹೋರಾಟ ಕೈಗೊಳ್ಳಲಾಗಿದೆ. ಆಶಾ ಕಾರ್ಯಕರ್ತೆಯರ ಮೆಲೆ ಹಲ್ಲೆ ನಡೆಸಿದವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಈ ಸಂದರ್ಭ ಒತ್ತಾಯಿಸಿದರು.

ಸರ್ಕಾರವು ಕೋವಿಡ್ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ವಿಶೇಷ ಪ್ಯಾಕೇಜ್ ನೀಡಬೇಕು. ಅಗತ್ಯವಿರುವ ಮಾಸ್ಕ್, ಸ್ಯಾನಿಟೈಜರ್, ಸುರಕ್ಷತಾ ಸಾಮಗ್ರಿ ನೀಡಬೇಕು. ಜೊತೆಗೆ 50 ಲಕ್ಷ ವಿಮಾ ಸೌಲಭ್ಯವನ್ನು ಕುಟುಂಬಸ್ಥರಿಗೆ ನೀಡಬೇಕೆಂದು ಒತ್ತಾಯಿಸಿದರು. ಸರ್ಕಾರ ಸೂಕ್ತವಾಗಿ ಸ್ಪಂದಿಸದಿದ್ದರೆ ತೀವ್ರ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿದ್ದಾರೆ.












Click it and Unblock the Notifications