ಮೊದಲ ಆಷಾಢ ಶುಕ್ರವಾರ: ಚಾಮುಂಡಿ ತಾಯಿಯ ದರ್ಶನಕ್ಕೆ ಭಕ್ತಸಾಗರ
ಮೈಸೂರು, ಜುಲೈ 1: ಆಷಾಢ ಮಾಸದ ಮೊದಲ ಶುಕ್ರವಾರ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಮಾಡಿದರು.
ಶುಕ್ರವಾರ ಮುಂಜಾನೆ 3.30ಕ್ಕೆ ದೇವಸ್ಥಾನದಲ್ಲಿ ಆಷಾಢಮಾಸದ ಪ್ರಯುಕ್ತ ವಿಶೇಷ ಪೂಜೆ ಆರಂಭವಾಯಯಿತು. ಮಹಾನ್ಯಾಸಕ ಪೂರ್ವಕ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ವಿಶೇಷ ಲಕ್ಷ್ಮೀ ಅಲಂಕಾರದ ಮೂಲಕ ಚಾಮುಂಡೇಶ್ವರಿ ದೇವಿಯನ್ನು ಪ್ರಧಾನ ಅರ್ಚಕ ಡಾ. ಶಶಿಶೇಖರ್ ದೀಕ್ಷಿತ್ ನೇತೃತ್ವದ ಅರ್ಚಕರ ತಂಡ ಸಿಂಗರಿಸಿದ್ದರು. ಬಳಿಕ 5.30ರಿಂದ ರಾತ್ರಿ 9.30 ರವರೆಗೂ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿತ್ತು.
ತಿರುಪತಿ ಮಾದರಿಯಲ್ಲಿ ಭಕ್ತರಿಗೆ ಚಾಮುಂಡೇಶ್ವರಿ ದೇವಿ ದರ್ಶನ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. ಪ್ರತಿ ವರ್ಷ ಆಷಾಢ ಮಾಸದಲ್ಲಿ ಚಾಮುಂಡೇಶ್ವರಿ ದೇವಿ ದರ್ಶನ ಮಾಡಿ ಪುಳಕಿತರಾಗುತ್ತಿದ್ದ ಭಕ್ತಾದಿಗಳಿಗೆ ಕಳೆದ ಎರಡು ವರ್ಷಗಳಿಂದ ಅದು ಸಾಧ್ಯವಾಗಿರಲಿಲ್ಲ. ಕೋವಿಡ್ ಕಾರಣದಿಂದ ಭಕ್ತರ ಪ್ರವೇಶ ನಿರ್ಬಂಧಿಸಲಾಗಿತ್ತು. ಈ ಬಾರಿ ಕೋವಿಡ್ ಕಾರ್ಮೋಡ ಸರಿದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಜನಸಾಗರವೇ ಹರಿದು ಬಂದಿತ್ತು.

20 ಎಲ್ಇಡಿ ಟಿವಿ ಅಳವಡಿಕೆ
ದೇವಸ್ಥಾನಕ್ಕೆ ಬರುವ ಭಕ್ತರಿಗೆ ಮೂರು ಸರತಿ ಸಾಲಿನಲ್ಲಿ ಪ್ರವೇಶ ಕಲ್ಪಿಸಲಾಗುತ್ತಿದೆ. 300 ರೂ., 50 ರೂ. ಮತ್ತು ಧರ್ಮ ದರ್ಶನದ ಮೂರು ಸಾಲುಗಳನ್ನು ಮಾಡಲಾಗಿದ್ದು, ದಕ್ಷಿಣ ಮತ್ತು ಉತ್ತರ ಭಾಗದಿಂದ ಪ್ರವೇಶ ಮಾಡಬಹುದಾಗಿದೆ. ಚಾಮುಂಡೇಶ್ವರಿ ಭಕ್ತಿ ಗೀತೆಗಳೊಂದಿಗೆ ದೇವಿಯ ಉತ್ಸವ, ಮೆರವಣಿಗೆ, ಪೂಜಾ ಕಾರ್ಯಕ್ರಮಗಳನ್ನು ಹೊರಗಿನಿಂದ ಭಕ್ತರು ವೀಕ್ಷಣೆ ಮಾಡಲು 20 ಎಲ್ಇಡಿ ಟಿವಿಗಳನ್ನು ಅಳವಡಿಸಲಾಗಿದೆ. ಜತೆಗೆ ದೇವಸ್ಥಾನದ ಉತ್ಸವ ಮೂರ್ತಿಯನ್ನು ನೇರವಾಗಿ ಪರದೆ ಮೂಲಕ ವೀಕ್ಷಣೆ ಮಾಡಬಹುದು.

ಮಹಿಷಾಸುರ ಪ್ರತಿಮೆ ಎದುರು ಪ್ರಸಾದ ವಿತರಣೆ
ಮಹಿಷಾಸುರ ಪ್ರತಿಮೆ ಆವರಣದಲ್ಲಿ ದಾನಿಗಳಿಂದ ಬಾಳೆಲೆ ಊಟಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಏಕ ಕಾಲದಲ್ಲಿ ಸಾವಿರ ಮಂದಿ ಊಟ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಜತೆಗೆ ಬಸ್ ನಿಲ್ದಾಣದಲ್ಲಿ 10 ಕೌಂಟರ್ಗಳನ್ನು ತೆರೆದು ಪ್ರಸಾದ ವಿನಿಯೋಗಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೆಟ್ಟಿಲು ಮಾರ್ಗದಲ್ಲಿ ಬೀದಿ ದೀಪ ಅಳವಡಿಕೆಯೊಂದಿಗೆ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಹೆಚ್ಚುವರಿಯಾಗಿ ನಾಲ್ಕು ಮೊಬೈಲ್ ಶೌಚಾಲಯಗಳನ್ನು ವ್ಯವಸ್ಥೆ ಕೂಡ ಮಾಡಲಾಗಿದೆ. ದೇವಸ್ಥಾನ ಪ್ರವೇಶಕ್ಕೆ ನಾಲ್ಕು ಕಡೆ ಪ್ರತ್ಯೇಕವಾಗಿ ಟಿಕೆಟ್ ಕೌಂಟರ್ ವ್ಯವಸ್ಥೆ ಮಾಡಲಾಗಿದೆ.

ಖಾಸಗಿ ವಾಹನಗಳಿಗೆ ಪ್ರವೇಶ ನಿಷೇಧ
ಆಷಾಡ ಮಾಸದಲ್ಲಿ ಭಕ್ತರ ಸಂಖ್ಯೆ ಹಚ್ಚಾಗುವುದರಿಂದ ವಾಹನ ದಟ್ಟಣೆ ನಿಯಂತ್ರಿಸಲು ಬೆಟ್ಟಕ್ಕೆ ಖಾಸಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಲಲಿತ ಮಹಲ್ ಬಳಿಯ ಮೈದಾನದಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕ ಬಸ್ ನಿಲ್ದಾಣದಿಂದ ಉಚಿತವಾಗಿ ಬಸ್ ವ್ಯವಸ್ಥೆ ಮಾಡಲಾಗಿದೆ. ಮುಂಜಾನೆ 3 ಗಂಟೆಯಿಂದ ರಾತ್ರಿ 10ರವರೆಗೆ ಬಸ್ ಸಂಚಾರ ಇರಲಿದೆ.
"ಆಷಾಢದ ಮಾಸದಲ್ಲಿ ಯಾವುದೇ ಶುಭ ಸಮಾರಂಭ ನಡೆಯುವುದಿಲ್ಲ ಈ ವೇಳೆ ಶಕ್ತಿ ದೇವತೆ ದರ್ಶನ ಮಾಡಿದರೆ ಪುಣ್ಯ ಪ್ರಾಪ್ತಿಯಾಗಲಿದೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಕುಟುಂಬದವರೆಲ್ಲಾ ದೇವಿಯ ದರ್ಶನ ಪಡೆಯಬಹುದು. ಉತ್ಸವ ಮೂರ್ತಿಯ ದರ್ಶನದೊಂದಿಗೆ ಮೂಲ ವಿಗ್ರಹದ ದರ್ಶನವನ್ನೂ ಭಕ್ತರು ಪಡೆಯಬಹುದು" ಎಂದು ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ತಿಳಿಸಿದ್ದಾರೆ.

ಸಂಚಾರ ಪೊಲೀಸರ ಸೂಚನೆಯಂತೆ ವಾಹನ ನಿಲುಗಡೆ
ತಾವರೆಕಟ್ಟೆಯಿಂದ ಉತ್ತನಹಳ್ಳಿ ರಸ್ತೆ ಕಡೆಯಿಂದ ಮತ್ತು ಐವಾಕ್ ರಸ್ತೆ ಮೂಲಕ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ವಾಹನಗಳ ಸಂಚಾರವನ್ನು (ಸಾರಿಗೆ ಸಂಸ್ಥೆ ವಾಹನಗಳನ್ನು ಹೊರತುಪಡಿಸಿ) ನಿರ್ಬಂಧಿಸಲಾಗಿದೆ. ಲಲಿತ್ ಮೈದಾನದಲ್ಲಿ ಸಂಚಾರ ಪೊಲೀಸರ ಸೂಚನೆಯಂತೆ ಭಕ್ತರು ತಮ್ಮ ವಾಹನ ನಿಲುಗಡೆ ಮಾಡಬೇಕು.
ಲಲಿತಾದ್ರಿಪುರ, ಉತ್ತನಹಳ್ಳಿ ರಸ್ತೆ ಕಡೆಯಿಂದ ಬರುವ ಭಕ್ತರು ಕೂಡ ಲಲಿತ್ ಮಹಲ್ ಮೈದಾನಕ್ಕೆ ಬಂದು ಸಾರಿಗೆ ಬಸ್ಸಿನಲ್ಲಿಯೇ ಹೊರಡಬೇಕು. ಪ್ರಸಾದ ವಿನಿಯೋಗದ ವಾಹನಗಳಿಗೆ ಈ ಬಾರಿ ಚಾಮುಂಡಿ ಬೆಟ್ಟದಲ್ಲಿ ಬಸ್ ನಿಲ್ದಾಣದ ಎದುರು ಇರುವ ಪಾರ್ಕಿಂಗ್ ಜಾಗದಲ್ಲಿ ವ್ಯವಸ್ಥೆ ಮಾಡಿದ್ದು, ಜಿಲ್ಲಾಡಳಿತದಿಂದ ನೀಡುವ ಪಾಸ್ ಕಡ್ಡಾಯವಾಗಿದೆ. ಚಾಮುಂಡೇಶ್ವರಿ ವರ್ಧಂತಿ ದಿನದ ಹಿಂದಿನ ದಿನದ ರಾತ್ರಿ 10 ಗಂಟೆಗೆ ಯಾವುದೇ ವಾಹನಗಳಿಗೆ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.
Recommended Video
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications