ನನ್ನ ಮಕ್ಕಳಿಗೆ ಹುಡುಗಿ ಹುಡುಕಿಕೊಡಿ ಎಂದ ಮಾಜಿ ಶಾಸಕ ಅಶೋಕ್ ಖೇಣಿ
ಮೈಸೂರು, ಆಗಸ್ಟ್.5: ಮೈಸೂರಿನಲ್ಲಿ ಇಂದು ಭಾನುವಾರ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಅಶೋಕ್ ಖೇಣಿ ಸುತ್ತೂರು ಶ್ರೀಗಳನ್ನು ಮುಜುಗರಕ್ಕೀಡು ಮಾಡಿದ ಪ್ರಸಂಗ ನಡೆಯಿತು.
ಶ್ರೀಗಳಿಗೆ, ನನಗೆ ಮೈಸೂರಿಗೆ ಬಂದಾಗ ತವರು ಮನೆಗೆ ಬಂದ ಅನುಭವ ಉಂಟಾಗುತ್ತದೆ. ನನ್ನ ಪತ್ನಿ ಯಾವಾಗಲೂ ಸ್ವಾಮೀಜಿಗಳ ಕಣ್ಣುಗಳ ಬಗ್ಗೆ ಹೊಗಳುತ್ತಾರೆ. ಸ್ವಾಮೀಜಿಗಳ ಅರ್ಥ ಗರ್ಭಿತ ಮಾತು, ದಿವ್ಯ ದೃಷ್ಟಿ ಎಲ್ಲವೂ ಅದ್ಭುತ. ಮುಂದೆ ನನ್ನ ಮಕ್ಕಳ ಮದುವೆಯನ್ನು ಸುತ್ತೂರು ಮಠದಲ್ಲೇ ಸ್ವಾಮೀಜಿಗಳ ಸಮ್ಮುಖದಲ್ಲೇ ಮಾಡುತ್ತೇನೆ ಎಂದರು.
ನನ್ನ ಮಕ್ಕಳಿಗೆ 25 ವರ್ಷ ಆಗಿದ್ದು, ಮದುವೆ ಮಾಡಬೇಕಿದೆ. ನನ್ನಿಬ್ಬರು ಗಂಡು ಮಕ್ಕಳಿಗೆ ಅವಳಿ-ಜವಳಿ ಹೆಣ್ಣು ಮಕ್ಕಳನ್ನು ಹುಡುಕಿ ಕೊಡಿ. ಹುಡುಗಿ ಲಿಂಗಾಯತರಾಗಿರಬೇಕು, ಸುಂದರವಾಗಿರಬೇಕು. ನಮ್ಮೆಲ್ಲರ ಮೇಲೆ ನಿಮ್ಮ ಆಶೀರ್ವಾದ ಇರಬೇಕು ಎಂದು ಸ್ವಾಮೀಜಿಗಳಿಗೆ ತಮ್ಮ ಮಕ್ಕಳಿಗೆ ಹೆಣ್ಣು ಹುಡುಕುವ ಜವಾಬ್ದಾರಿ ಅಶೋಕ್ ಖೇಣಿ ನೀಡಿದರು.

ಉದ್ಯಮ, ರಾಜಕಾರಣ ಎಲ್ಲವೂ ಆಯಿತು. ನನ್ನನ್ನು ನಿಮ್ಮ ಮಠಕ್ಕೆ ಸೇರಿಸಿಕೊಳ್ಳಿ ಅಥವಾ ನನಗೊಂದು ಬೇರೆ ಮಠ ಮಾಡಿಕೊಡಿ ಎಂದು ನಾನು ಸ್ವಾಮೀಜಿಗಳ ಬಳಿ ಕೇಳಿಕೊಂಡಿದ್ದೇನೆ. ಆದ್ರೆ ಸ್ವಾಮೀಜಿಗಳು ಒಪ್ಪುತ್ತಿಲ್ಲ. ನಿಮ್ಮ ಪತ್ನಿಯಿಂದ ಅನುಮತಿ ಪಡೆದುಕೊಂಡು ಬನ್ನಿ ಎಂದು ಹೇಳ್ತಾರೆ. ನಾನೇನು ಮಾಡಲಿ ಎಂದು ಆಶೋಕ್ ಖೇಣಿ ಹೇಳಿದರು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications