ಕಾವೇರಿ ಸಂಗಮದಲ್ಲಿ ಸಿಂಘಾಲ್ ಅಸ್ಥಿ ವಿಸರ್ಜನೆ
ಮೈಸೂರು, ನವೆಂಬರ್ 30 : ಇತ್ತೀಚೆಗೆ ನಿಧನರಾದ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಅಶೋಕ್ ಸಿಂಘಾಲ್ ಅವರ ಅಸ್ಥಿಯನ್ನು ಶ್ರೀರಂಗಪಟ್ಟಣದ ಕಾವೇರಿ ಸಂಗಮದಲ್ಲಿ ಭಾನುವಾರ ವಿಸರ್ಜಿಸಲಾಗಿದೆ. ಸಿಂಘಾಲ್ ಅವರ ಮರಣದಿಂದಾಗಿ ಹಿಂದೂ ರಾಷ್ಟ್ರ ಬಡವಾದಂತೆ ಕಾಣುತ್ತಿದೆ ಎಂದು ವಿಎಚ್ಪಿ ನಾಯಕರು ಈ ಸಂದರ್ಭದಲ್ಲಿ ಹೇಳಿದರು.
ವಿಎಚ್ಪಿ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಅವರು ತಂದಿದ್ದ ಸಿಂಘಾಲ್ ಅವರ ಅಸ್ಥಿ ಇದ್ದ ಮಡಿಕೆಗೆ ಭಾನುಪ್ರಕಾಶ್ ಶರ್ಮ ಅವರು ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜೆ ನೆರವೇರಿಸಿದರು. ನಂತರ ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲಾಯಿತು. [ಅಶೋಕ್ ಸಿಂಘಾಲ್ ಇನ್ನಿಲ್ಲ]

ಜ್ಯೋತಿಷಿ ಡಾ. ಭಾನುಪ್ರಕಾಶ್ ಶರ್ಮ ಅವರು ಅಸ್ಥಿ ವಿಸರ್ಜನೆಯ ಕಾರ್ಯವನ್ನು ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ನೆರವೇರಿಸಿದರು. ವಿಶ್ವ ಹಿಂದೂ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಸೇರಿದಂತೆ ಹಲವಾರು ನಾಯಕರು ಈ ಸಂರ್ಭದಲ್ಲಿ ಉಪಸ್ಥಿತರಿದ್ದರು. [ಅಶೋಕ್ ಸಿಂಘಾಲ್ : ಹಿಂದೂತ್ವ ಯೋಧ ಎಂದ ಟ್ವೀಟ್ ಲೋಕ]
ಅಸ್ಥಿ ವಿಸರ್ಜನೆ ಮಾಡಿದ ಬಳಿಕ ಮಾತನಾಡಿದ ರಾಜೇಂದ್ರ ಅವರು, 'ಹಿಂದುತ್ವವನ್ನು ಕಾಪಾಡುವ ದೂರದೃಷ್ಟಿ ಸಿಂಘಾಲ್ ಅವರಲ್ಲಿ ಹೆಚ್ಚಾಗಿತ್ತು. ರಾಮಮಂದಿರ ಸಂಸ್ಥಾಪನೆ ಮಾಡಲು ಹಲವು ಹೋರಾಟ ಮಾಡಿ ಮಂದಿರ ನಿರ್ಮಾಣಕ್ಕೆ ಅಡಿಪಾಯ ಹಾಕಿದರು. ಅವರ ಮರಣದಿಂದ ಹಿಂದೂ ರಾಷ್ಟ್ರ ಬಡವಾದಂತೆ ಕಾಣುತ್ತಿದೆ' ಎಂದು ಹೇಳಿದರು.

ಅನಾರೋಗ್ಯದಿಂದಾಗಿ ಮೃತಪಟ್ಟಿದ್ದರು : ಅಶೋಕ್ ಸಿಂಘಾಲ್ (89) ಅವರು ನವೆಂಬರ್ 17ರಂದು ಗುರ್ ಗಾಂವ್ನ ಮೇಧಾಂತ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಕೆಲವು ತಿಂಗಳುಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು.

-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications