ನಂಜನಗೂಡಲ್ಲಿ ಅಷ್ಟಮಂಗಲ ಪರಿಹಾರ ಪೂಜೆ
ಮೈಸೂರು, ಜ. 31: ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡು ಬಂದ ದೋಷಗಳ ಕುರಿತು ಪರಿಹಾರ ಕಂಡುಕೊಳ್ಳುವ ಸಲುವಾಗಿ ಧಾರ್ಮಿಕ ಪೂಜಾ ಕಾರ್ಯಕ್ರಮ ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ನಂಜನಗೂಡಲ್ಲಿ ನಡೆಯುತ್ತಿದೆ.
ಪೂಜೆ, ಹೋಮ ಹವನ, ಗಂಟೆ, ಜಾಗಟೆ, ಮಂತ್ರ ಘೋಷಗಳ ಸದ್ದು ಜೋರಾಗಿ ಕೇಳಿಬರತೊಡಗಿದೆ. ಕೇರಳದ ನಾರಾಯಣ ನಂಬೂದಿರಿ ತಂತ್ರಿ ನೇತೃತ್ವದ 5 ಜನ ಪುರೋಹಿತರ ಮಾರ್ಗದರ್ಶನದೊಂದಿಗೆ ಅಷ್ಟಮಂಗಲ ದೋಷ ನಿವಾರಣಾ ಧಾರ್ಮಿಕ ಪೂಜಾ ಕಾರ್ಯವನ್ನು ಅಷ್ಟಮಂಗಲ ಪ್ರಶ್ನೆಗಳಿಗೆ ಪರಿಹಾರದ ಸಲುವಾಗಿ ಸಿದ್ಧತೆಯನ್ನು ಕೈಗೊಂಡು ಕಪಿಲಾ ನದಿ ತೀರದಲ್ಲಿರುವ ಶ್ರೀ ದತ್ತಾತ್ರೇಯ ಸ್ವಾಮಿ ದೇವಾಲಯದಲ್ಲಿ ಶನಿವಾರ ನಡೆಸಲಾಯಿತು.[ಕನ್ನಡ ಅರ್ಚಕರು, ಕೇರಳ ತಂತ್ರಿಗಳ ಕ್ಲ್ಯಾಶ್]

ದತ್ತಾತ್ರೇಯ ದೇವಾಲಯದ ಅಂಗಳದಲ್ಲಿ ಗಣಪತಿ ಪೂಜೆ, ಅಘೋರ ಹೋಮ, ಮಹಾಸುದರ್ಶನ ಹೋಮ, ಮೃತ್ಯುಂಜಯ ಹೋಮ, ತ್ರಿಕಾಲ ಭಗವತಿ ಪೂಜೆಯನ್ನು ಇದೇ ಸಂದರ್ಭ ಮಾಡಲಾಯಿತು.
ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಜಯಪ್ರಕಾಶ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯ ನಡೆದಿದೆ. ಇದರ ಖರ್ಚು ವೆಚ್ಚವನ್ನು ಟಿವಿಎಸ್ ಸಂಸ್ಥೆ ಪ್ರಾಯೋಜಿಸಿದೆ.
ಅಷ್ಟಮಂಗಲ ಪರಿಹಾರದ ಸಲುವಾಗಿ ಫೆಬ್ರವರಿ 7 ಮತ್ತು 8ರಂದು ಮಹಾರುದ್ರ ಹೋಮ ಹಾಗೂ ಚಂಡಿಕಾ ಹೋಮ ನಡೆಯಲಿದ್ದು, ಆ ನಂತರ ಅಷ್ಟಬಂಧನ ಪೂಜೆ ನೆರವೇರಿಸಿ ಅಷ್ಟಮಂಗಲಕ್ಕೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಜಯಪ್ರಕಾಶ್ ತಿಳಿಸಿದ್ದಾರೆ.
ಪೂಜಾ ಕೈಂಕರ್ಯದಲ್ಲಿ ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಪ್ರದಾನ ಅರ್ಚಕ ನಾಗಚಂದ್ರ ದೀಕ್ಷಿತ್, ನೀಲಕಂಠ ದೀಕ್ಷಿತ್, ಕೃಷ್ಣದೀಕ್ಷಿತ್, ನರಸಿಂಹ ಅಯ್ಯಂಗಾರ್, ಮುರಳಿ ಶ್ರೀವತ್ಸ ಮುಂತಾದವರು ಪಾಲ್ಗೊಂಡಿದ್ದಾರೆ.(ಒನ್ಇಂಡಿಯಾ ಸುದ್ದಿ)
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications