Breaking news; ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ; ಜಿಯಾಗ್ರಫಿ ಪ್ರೊಫೆಸರ್ ಅಮಾನತು
ಮೈಸೂರು, ಮೇ 04; ಪಿಎಸ್ಐ ನೇಮಕಾತಿ ಹಗರಣದ ಜೊತೆ ರಾಜ್ಯದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಹ ಸದ್ದು ಮಾಡುತ್ತಿದೆ. ಈಗಾಗಲೇ ಈ ಪ್ರಕರಣದಲ್ಲಿ ಸೌಮ್ಯಾ, ಪ್ರೊಫೆಸರ್ ನಾಗರಾಜ್ ಬಂಧಿಸಲಾಗಿದೆ.
ಬುಧವಾರ ಮೈಸೂರು ವಿಶ್ವವಿದ್ಯಾಲಯ ಜಿಯಾಗ್ರಫಿ ಪ್ರೊಫೆಸರ್ ನಾಗರಾಜ್ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನ ಮಲ್ಲೇಶ್ವರಂ ಠಾಣೆ ಪೊಲೀಸರು ನಾಗರಾಜ್ರನ್ನು ಏಪ್ರಿಲ್ 27ರಂದು ಬಂಧಿಸಿದ್ದರು.
ಪ್ರೊಫೆಸರ್ ನಾಗರಾಜ್ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಆಗಿ ನೇಮಕ ಹೊಂದಿದ್ದರು. ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಪೊಲೀಸರು ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಅಸಿಸ್ಟೆಂಟ್ ಪ್ರೊಫೆಸರ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಾಜ್ ತಂಗಿ ಮಗಳು ಕುಸುಮಾ ಎಂಬುವವರನ್ನು ಪೊಲೀಸರು ವಿಚಾರಣೆ ಮಾಡಿದ್ದರು.
ಬಂಧಿತ ನಾಗರಾಜ್ ಭೂಗೋಳ ಶಾಸ್ತ್ರ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ ತಂಡದಲ್ಲಿದ್ದರು. ನಾಗರಾಜ್ ಮನೆಗೆ ಆಗಾಗ ಹೋಗುತ್ತಿದ್ದ ಆರೋಪಿ ಸೌಮ್ಯ ಅವರ ಪುಸ್ತಕಗಳನ್ನು ಪಡೆದು ಓದುತ್ತಿದ್ದರು. ಪ್ರಶ್ನೆ ಪತ್ರಿಕೆ ರಚನೆ ತಂಡದಲ್ಲಿ ಪ್ರೊಫೆಸರ್ ಇರುವುದು ಆರೋಪಿಗೆ ತಿಳಿದಿತ್ತು.
ನಾಗರಾಜ್ ಅವರ ಮನೆಯ ಟೇಬಲ್ ಮೇಲೆ ಇದ್ದ ಎನೋಲಪ್ನಲ್ಲಿ ಇದ್ದ ಪ್ರತ್ರಿಕೆಯ ಫೋಟೋವನ್ನು ಸೌಮ್ಯಾ ತೆಗೆದುಕೊಂಡಿದ್ದಳು. ಕುಸುಮಾ ಬಳಿಯೂ ಫೋಟೋ ತೆಗೆದು ಕಳಿಸುವಂತೆ ಹೇಳಿ ಪ್ರಶ್ನೆಗಳನ್ನು ಸಂಗ್ರಹ ಮಾಡಿದ್ದಳು.
ನಾಗರಾಜ್ ಸದ್ಯ ಪೊಲೀಸರ ವಶದದಲ್ಲಿದ್ದು ಕುಲಸಚಿವ (ಮೌಲ್ಯಮಾಪನ) ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ. ಅಮಾನತುಗೊಂಡಿರುವ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಸಹ ನಡೆಸಲಾಗುತ್ತದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications