ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರ ಮುಚ್ಚುವ ಹುನ್ನಾರ?
ಮೈಸೂರು, ಡಿಸೆಂಬರ್ 28: ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವನ್ನು ವಿಶ್ವವಿದ್ಯಾಲಯದ ಅಧೀನಕ್ಕೊಳಪಡಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಕೇಂದ್ರದಲ್ಲಿರುವ ಹಾಲಿ ಕಾರ್ಯನಿರ್ವಹಿಸುತ್ತಿರುವ ಇಡೀ ಶೈಕ್ಷಣಿಕ ಸಿಬ್ಬಂದಿಗೆ ಬಿಡುಗಡೆ ಪತ್ರ ನೀಡಿರುವುದು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವನ್ನು ಶಾಶ್ವತವಾಗಿ ಮುಚ್ಚುವ ಪ್ರಯತ್ನದ ಆರಂಭಿಕ ನಡೆಯಾಗಿದೆ ಎಂದು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ವಿಶ್ರಾಂತ ಯೋಜನಾ ನಿರ್ದೇಶಕರಾದ ಡಾ.ಕೆ.ಆರ್.ದುರ್ಗಾದಾಸ್ ಆರೋಪಿಸಿದ್ದಾರೆ.
ಈ ಕುರಿತು ಪತ್ರದ ಮೂಲಕ ಸರ್ಕಾರದ ಗಮನ ಸೆಳೆದಿರುವ ಅವರು ಪ್ರಸ್ತುತ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದಂತೆಯೇ ಭಾರತೀಯ ಭಾಷಾ ಸಂಸ್ಥಾನದಡಿಯಲ್ಲಿ ಹತ್ತಾರು ಪ್ರಾಜೆಕ್ಟುಗಳು ಕಾರ್ಯನಿರ್ವಹಿಸುತ್ತಿವೆ. ಈ ಪ್ರಾಜೆಕ್ಟುಗಳಲ್ಲಿ 200 ಕ್ಕೂ ಹೆಚ್ಚು ವಿವಿಧ ಭಾಷೆಗಳ ಸಿಬ್ಬಂದಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷಕ್ಕೆ ನೇಮಕಗೊಂಡರೂ ಪ್ರತಿ ವರ್ಷವೂ ನವೀಕರಣಗೊಳ್ಳುತ್ತಾ 25 ವರ್ಷಗಳಿಂದ ನಿರಂತರ ಕೆಲಸ ಮಾಡುತ್ತಿದ್ದಾರೆ.
ಆದರೆ ಕೇವಲ 2 ರಿಂದ 4 ವರ್ಷಗಳಿಂದಷ್ಟೇ ಸೇವೆ ಸಲ್ಲಿಸುತ್ತಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಸಂಶೋಧಕರನ್ನು ಕೆಲಸದಿಂದ ತೆಗೆಯುತ್ತಿರುವುದು ಸಹಜವಾಗಿ ಅನುಮಾನಗಳನ್ನು ಹುಟ್ಟುಹಾಕಿದೆ. ಇದು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಸಂಶೋಧನಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ ಸ್ವಾಯತ್ತತೆಯನ್ನು ತಡೆಯುವ ಪ್ರಯತ್ನವೇ ಆಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಂಶೋಧಕರದ್ದು ಸಂಶೋಧನೆಗೆ ಮಾತ್ರ ಸೀಮಿತವಾದ ಕೆಲಸವಲ್ಲ. ಕೇಂದ್ರವು ಆಯೋಜಿಸುವ ವಿಚಾರ ಸಂಕಿರಣ, ಕಾರ್ಯಾಗಾರಗಳನ್ನು ಒಳಗೊಂಡಂತೆ ಕೇಂದ್ರದ ಎಲ್ಲಾ ಚಟುವಟಿಕೆಗಳ ಸಂಪೂರ್ಣ ಜವಾಬ್ದಾರಿ ಇವರದ್ದೇ ಆಗಿರುತ್ತದೆ. ಇಲ್ಲಿನ ಕೆಲವು ಸಂಶೋಧಕರ ಸಂಶೋಧನೆ ವಿಷಯದ ವ್ಯಾಪ್ತಿ ದೊಡ್ಡದಿದ್ದು, ಸಹಜವಾಗಿಯೇ ಅವುಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಕಾಲಾವಧಿ ಬೇಕಾಗಿರುತ್ತದೆ.
ಹಾಲಿ ಶೈಕ್ಷಣಿಕ ಸಿಬ್ಬಂದಿಯನ್ನು ಬದಲಿಸುವ ಪ್ರಯತ್ನ ಕೇಂದ್ರದ ಬೆಳವಣಿಗೆಗೆ ಮಾರಕ ಪರಿಣಾಮ ಬೀರಲಿದೆ. ಈ ಶೈಕ್ಷಣಿಕ ಸಿಬ್ಬಂದಿಯನ್ನು ಕೈಬಿಟ್ಟರೆ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವು ಶೂನ್ಯ ಸ್ಥಿತಿಯನ್ನು ತಲುಪಲಿದೆ. ಇವರ ಅನುಭವ ವ್ಯರ್ಥವಾಗಲಿದೆ. ಇದು ಸ್ವಾಯತ್ತತೆಯನ್ನು ಪಡೆಯುವ ಪ್ರಯತ್ನಕ್ಕೂ ಅಡ್ಡಿಯುಂಟು ಮಾಡುತ್ತದೆ ಎಂದು ದೂರಿದ್ದಾರೆ.

ಖಾಲಿ ಇರುವ ಸಂಶೋಧಕರ ಹುದ್ದೆಗಳನ್ನು ಮಾತ್ರ ತುಂಬಿಕೊಳ್ಳುವುದು ವಿವೇಕದ ನಡೆಯಾಗಿರುತ್ತದೆ. ಭಾರತೀಯ ಭಾಷಾ ಸಂಸ್ಥಾನದ ಇತರ ಯೋಜನೆಗಳಲ್ಲಿ ಕಳೆದ 25 ವರ್ಷಗಳಿಂದ ದುಡಿಯುತ್ತಿರುವ ಶೈಕ್ಷಣಿಕ ಗುತ್ತಿಗೆ ಸಿಬ್ಬಂದಿಗೆ ಇಲ್ಲದ ಮರು ನೇಮಕಾತಿ ಅಧಿಸೂಚನೆಯನ್ನು ಇದೀಗ ಸ್ವಾಯತ್ತತೆಯ ಪ್ರಗತಿ ಪಥದಲ್ಲಿರುವ ಶಾಸ್ತ್ರೀಯ ಕನ್ನಡ ಕೇಂದ್ರಕ್ಕೆ ಮಾತ್ರ ಹೊರಡಿಸಿರುವುದು ಒಳಹುನ್ನಾರದ ಭಾಗವೇ ಆಗಿದೆ.
ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವು ಕೇಂದ್ರ ಸರ್ಕಾರದಡಿಯಲ್ಲಿ ಇರುವುದಾದರೂ ಇದರ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರದ ಜವಾಬ್ದಾರಿಯ ಪಾಲು ಗಮನಾರ್ಹವಾಗಿದೆ. ಆದ್ದರಿಂದ ಈ ಬಗ್ಗೆ ರಾಜ್ಯ ಸರ್ಕಾರ ಕೇಂದ್ರ ಶಿಕ್ಷಣ ಸಚಿವಾಲಯದ ಮೂಲಕ ಭಾರತೀಯ ಭಾಷಾ ಸಂಸ್ಥಾನಕ್ಕೆ ಸೂಕ್ತ ಆದೇಶ ನೀಡಲು ಕ್ರಮಕೈಗೊಳ್ಳಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ












Click it and Unblock the Notifications