ಮೈಸೂರಿನಲ್ಲಿ ಸತ್ತ ಕೋತಿಯ ತಿಥಿ ಮಾಡಿದ ಆಟೋ ಚಾಲಕರು
ಮೈಸೂರು, ಜನವರಿ 18: ಸತ್ತವರಿಗೆ ತಿಥಿ ಮಾಡುವುದೇ ಈಗಿನ ಕಾಲದಲ್ಲಿ ಕಡಿಮೆಯಾಗಿದೆ. ಅಂತಹುದರಲ್ಲಿ ಸತ್ತ ಕೋತಿಗೆ ತಿಥಿ ಮಾಡುತ್ತಾರಾ ಎಂದು ಕೇಳುತ್ತೀರಾ? ಹೌದು, ನಗರದಲ್ಲಿ ಇತ್ತೀಚೆಗೆ ಮೃತಪಟ್ಟಿದ್ದ ಕೋತಿಗೆ ಆಟೋ ಚಾಲಕರೇ ಮುಂದೆ ನಿಂತು ತಿಥಿ ಕಾರ್ಯ ನೆರವೇರಿಸಿದ ಘಟನೆ ನಡೆದಿದೆ.
ಕೆಲವು ದಿನಗಳ ಹಿಂದೆಯಷ್ಟೇ ಆಕಸ್ಮಿಕವಾಗಿ ಕೋತಿಯೊಂದು ವಯೋಸಹಜ ಖಾಯಿಲೆಯಿಂದ ಸಾವನ್ನಪ್ಪಿತ್ತು. ಆಗ ಸತ್ತ ಕೋತಿಗೆ ಮೈಸೂರಿನ ಗನ್ ಹೌಸ್ ಬಳಿಯ ಆಟೋ ಚಾಲಕರು ತಮ್ಮ ಆಟೋ ಸ್ಟಾಂಡ್ ನಲ್ಲಿ ಗುಂಡಿತೋಡಿ ಅಂತ್ಯಸಂಸ್ಕಾರ ಮಾಡಿದ್ದರು.
ಕೋತಿ ಮೃತಪಟ್ಟು 11 ದಿನವಾದ್ದರಿಂದ ತಿಥಿ ಹಾಗೂ ಹಾಲು ತುಪ್ಪ ಕಾರ್ಯವನ್ನು ಧಾರ್ಮಿಕ ವಿಧಿ -ವಿಧಾನದಂತೆಯೇ ನೆರವೇರಿಸಿದರು.

ಅಲ್ಲದೇ ತಿಥಿ ಕಾರ್ಯ ನಡೆಸುವ ವೇಳೆ ಕೋತಿಗೆ ಇಷ್ಟವಾದ ಬಾಳೆ ಹಣ್ಣು, ಕಾಯಿ, ಇನ್ನಿತರ ತಿಂಡಿ ಪದಾರ್ಥಗಳನ್ನು ಇಟ್ಟು ಪೂಜೆ ಸಲ್ಲಿಸಿದರು. ತಿಥಿ ಆಚರಿಸುವ ಮೂಲಕ ಆಟೋ ಚಾಲಕರು ಮಾನವೀಯತೆ ಮೆರೆದಿದ್ದು ವಿಶೇಷ. ಈ ಕುರಿತಾಗಿ ಮಾತನಾಡಿದ ಅವರು, ಕೋತಿ ಕೂಡ ಮನುಷ್ಯರಂತೆ. ಅದಕ್ಕೂ ಕೂಡ ಪ್ರೀತಿ ತೋರಬೇಕು. ಹಾಗಾಗಿ ತಿಥಿ ಕಾರ್ಯ ಮಾಡುತ್ತಿದ್ದೇವೆ. ಈ ಕೋತಿ ನಮ್ಮೊಟ್ಟಿಗೆ ಆತ್ಮೀಯವಾಗಿತ್ತು ಎಂದು ನೆನೆಸಿಕೊಂಡರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications